ಕೋವಿಡ್ 19 ವೈರಸ್ ವಿರುದ್ಧ ಹೋರಾಟ: ಸಿಂಗಾಪುರದಿಂದ ಪಾಠ ಕಲಿಯಬೇಕಿದೆ


Team Udayavani, Mar 24, 2020, 11:58 AM IST

Covid-Singapore

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಸಿಂಗಾಪುರ: ಚೀನದ ನೆರೆಯ ರಾಷ್ಟ್ರಗಳ ಸಾಲಿನಲ್ಲಿ ಗುರುತಿಸಿಕೊಳ್ಳುವ ಸಿಂಗಾಪುರ, ತೈವಾನ್‌ ಹಾಕಾಂಗ್‌ ಮತ್ತು ದಕ್ಷಿಣ ಕೊರಿಯಾ ರಾಷ್ಟ್ರಗಳು ಆರಂಭದಲ್ಲೇ ಉಪಕ್ರಮಗಳನ್ನು ಕೈಗೊಳ್ಳಲಾಗಿತ್ತು. ಇದರಿಂದ ಈ ರಾಷ್ಟ್ರಗಳು ಕೋವಿಡ್ 19 ವೈರಸ್ ನ ಆರಂಭಿಕ ಆಘಾತದಿಂದ ತಪ್ಪಿಸಿಕೊಂಡಿದ್ದವು. ಆದರೆ ಏಷ್ಯಾದಲ್ಲಿ ಆರಂಭವಾದ ಈ ಮಾರಣಾಂತಿಕ ವೈರಸನ್ನು ಐರೋಪ್ಯ ರಾಷ್ಟ್ರಗಳು ಲಘವಾಗಿ ಪರಿಗಣಿಸಿದ್ದವು. ಇದರ ಫ‌ಲವಾಗಿ ಇಂದು ಐರೋಪ್ಯ ರಾಷ್ಟ್ರಗಳಲ್ಲೂ ಕೊರೊನಾ ವ್ಯಾಪಕವಾಗುತ್ತಿದೆ.

ಹಾಗೆ ನೋಡಿದರೆ ಸಿಂಗಾಪುರ ಹೆಚ್ಚು ಪ್ರವಾಸಿಗರನ್ನು ಹೊಂದಿರುವ ಮತ್ತು ಮುಖ್ಯ ಏರ್‌ಪೋರ್ಟ್‌ಗಳುಳ್ಳ ಪ್ರದೇಶವಾಗಿದೆ. ಚೀನದ ಪ್ರವಾಸಿಗರು, ಉದ್ಯೋಗಸ್ಥರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶ ಅದಾಗಿದೆ. ಚೀನದಲ್ಲಿ ವೈರಸ್‌ ಭೀತಿ ಹೆಚ್ಚಾಗುತ್ತಿದ್ದ ಸಂದರ್ಭದಲ್ಲೇ ಸಾವಿನ ಸಂಖ್ಯೆಯೂ ಏರಿಕೆಯಾಗತೊಡಗಿತು.

ಆ ಸಂದರ್ಭದಿಂದಲೇ ಸಿಂಗಾಪುರದಲ್ಲಿ ಸುಮಾರು 6 ಲಕ್ಷ ಜನರನ್ನು ತನಿಖೆಗೆ ಒಳಪಡಿಸಿತ್ತು. ತತ್‌ಕ್ಷಣ ಕಾರ್ಯಪ್ರವೃತ್ತವಾದ ಸರಕಾರ ಮುಖ್ಯವಾಗಿ ವಿಮಾನಗಳು, ರೈಲು ಸೇವೆಗಳಿಗೆ ಆರಂಭದಲ್ಲೇ ತಡೆ ದೊರೆಯಿತು. ಇದರಿಂದ ಹೊರ ದೇಶದಲ್ಲಿರುವವರು ಮುಖ್ಯವಾಗಿ ಚೀನದಲ್ಲಿರುವವರು ಸಿಂಗಾಪುರ ಪ್ರವೇಶಿಸುವುದಕ್ಕೆ ರೆಡ್‌ ಸಿಗ್ನಲ್‌ ನೀಡಿದಂತಾಯಿತು.

ವೇಗವಾಗಿ ಪತ್ತೆ ಹಚ್ಚಿದ ಸಿಂಗಾಪುರ
ಕೋವಿಡ್ 19 ವೈರ ಸನ್ನು ಅತ್ಯಂತ ತುರ್ತಾಗಿ ಹತ್ತಿಕ್ಕುತ್ತಿರುವ ದೇಶಗಳ ಪೈಕಿ ಸಿಂಗಾಪುರ ಒಂದಾಗಿದೆ. ಸಿಂಗಾಪುರದಲ್ಲಿ ಕೊರೊನಾದಿಂದಾಗಿ ಇದುವರೆಗೂ ಒಂದೇ ಒಂದು ಸಾವು ಸಂಭವಿಸದಿರುವುದು ಕೂಡ ಗಮನ ಸೆಳೆದಿದೆ. ಕೊರೊನಾ ಪೀಡಿತರನ್ನು ಅತ್ಯಂತ ವೇಗವಾಗಿ ಪತ್ತೆ ಹೆಚ್ಚಿರುವುದು ಒಳ್ಳೆಯ ಕ್ರಮವಾಗಿದೆ. ಸೋಂಕು ತಗುಲಿರುವ ಶಂಕೆ ಇರುವ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಿತ್ತು. ಯಾರೂ ಕೂಡ ಪರೀಕ್ಷೆಯಿಂದ ತಪ್ಪಿಸಿಕೊಳ್ಳದಂತೆ ಸೂಕ್ತ ಕ್ರಮವಹಿಸಿದ ಸಿಂಗಾಪುರ, ಸೋಂಕು ಪೀಡಿತರನ್ನು ಪ್ರತ್ಯೇಕಿಸಿ ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸುತ್ತಿದೆ. ಇದರಲ್ಲಿ ಸಿಂಗಾಪುರ ಆರೋಗ್ಯ ಇಲಾಖೆಯ ಕಾರ್ಯ ಮೆಚ್ಚಲೇಬೇಕು.

ಸೋಂಕು ದೃಢಪಟ್ಟವರನ್ನು ಕೂಡಲೇ ಸಾರ್ವಜನಿಕ ವಲಯದಿಂದ ಪ್ರತ್ಯೇಕಿಸಲಾಗಿತ್ತು. ಅವರನ್ನು ವೈದ್ಯಕೀಯ ಶಿಬಿರಗಳಲ್ಲಿಟ್ಟು ನಿಗಾದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಶಿಬಿರಗಳಲ್ಲಿರುವ ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ಜತೆಗೆ ಆಧುನಿಕ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಸೋಂಕಿತರು ಚಿಕಿತ್ಸೆಗೆ ಸೂಕ್ತವಾಗಿ ಸ್ಪಂದಿಸಿ ಬೇಗ ಚೇತರಿಸಿಕೊಳ್ಳುತ್ತಿದ್ದಾರೆ. ಆರಂಭದಲ್ಲೇ ಎಚ್ಚೆತ್ತ ಸಿಂಗಾಪುರ ಸರಕಾರ, ತನ್ನ ಪ್ರಜೆಗಳೊಂದಿಗೆ ಹಾಗೂ ಅಂತಾರಾಷ್ಟ್ರೀಯ ಸಮುದಾಯದೊಂದಿಗೆ ಸದಾ ಸಂಪರ್ಕದಲ್ಲೇ ಇತ್ತು.

ಜನರಿಗೆ ಮಾಹಿತಿ
ಸೋಂಕಿನ ಮಾಹಿತಿಯನ್ನು ಜನರಿಗೆ ತಿಳಿಸಿ ಭಯಭೀತರಾಗದಂತೆ ನಿಗಾವಹಿಸಿತ್ತು. ಅಲ್ಲದೇ ಸೋಂಕು ಪೀಡಿತರನ್ನು ಗುರುತಿಸಿ ಅವರನ್ನು ಸಮಾಜದಿಂದ ಪ್ರತ್ಯೇಕಿಸಿ ಸೂಕ್ತ ಚಿಕಿತ್ಸೆ ಕೊಡಿಸುವ ಮೂಲಕ ಸಿಂಗಾಪುರ ಇಡೀ ದೇಶಕ್ಕೆ ಮಾದರಿಯಾಯಿತು. ಹೊರ ದೇಶಗಳಿಂದ ಜನರು ಬರದಂತೆ ನಿರ್ಬಂಧ ವಿಧಿಸಲಾಗಿದ್ದು, ತನ್ನ ಪ್ರಜೆಗಳಿಗೆ ಯಾವುದೇ ವಿದೇಶ ಪ್ರವಾಸ ಕೈಗೊಳ್ಳದಂತೆಯೂ ಸೂಚಿಸಿದೆ. ಸರಕಾರ ಹೊರಡಿಸುವ ಮಾರ್ಗಸೂಚಿಗಳನ್ನು ಪ್ರಜೆಗಳು ನಿಷ್ಠೆಯಿಂದ ಪಾಲಿಸುತ್ತಿದ್ದಾರೆ.

27ರಿಂದ ಹೆಲ್ತ್‌ ಡಿಕ್ಲೆರೇಶನ್‌
ಸಿಂಗಾಪುರಕ್ಕೆ ಮಾರ್ಚ್‌ 27ರ ಬಳಿಕ ಆಗಮಿಸುವ ಎಲ್ಲರೂ ತಮ್ಮ ಆರೋಗ್ಯ ಮಾಹಿತಿಯನ್ನು ಕಡ್ಡಾಯವಾಗಿ ನೀಡಲೇಬೇಕು ಎಂದು ಅಲ್ಲಿನ ಸರಕಾರ ಸೂಚಿಸಿದೆ. ಇದನ್ನು ವಿದೇಶಿಗರೂ ಮತ್ತು ಸಿಂಗಾಪುರದ ಪ್ರಜೆಗಳೂ ನೀಡಲೇಬೇಕಾಗಿದೆ. ಸಿಂಗಾಪುರದಲ್ಲಿ ಒಟ್ಟು 455 ಪ್ರಕರಣಗಳು ದಾಖಲಾಗಿದ್ದು, 144 ಮಂದಿ ಸುಧಾರಿಸಿದ್ದಾರೆ. 309 ಮಂದಿಯಲ್ಲಿ ಈಗ ಸೋಂಕು ಕಂಡು ಬಂದಿದೆ. ಇಬ್ಬರು ಬಲಿಯಾಗಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.