ಕೋವಿಡ್-19 ಆರ್ಭಟ: ಜಗತ್ತಿನಾದ್ಯಂತ 75 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ


Team Udayavani, Apr 7, 2020, 3:34 PM IST

ಕೋವಿಡ್-19 ಆರ್ಭಟ: ಜಗತ್ತಿನಾದ್ಯಂತ 75 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ

ಕೋವಿಡ್ 19 ಮಹಾಮಾರಿಗೆ ಬಲಿಯಾದವರ ಶವಪೆಟ್ಟಿಗೆಗಳನ್ನು ಪೇರಿಸಿಟ್ಟಿರುವ ಯಾತನಾಮಯ ದೃಶ್ಯ.

ವಾಷಿಂಗ್ಟನ್: ಕಣ್ಣಿಗೆ ಕಾಣಿಸದ ಕೋವಿಡ್ 19 ಎಂಬ ವೈರಸ್ ವಿಶ್ವಾದ್ಯಂತ ಎಬ್ಬಿಸಿರುವ ಹಾಲಾಹಲಕ್ಕೆ ಇದುವರೆಗೆ ಬರೋಬ್ಬರಿ 75 ಸಾವಿರ ಜನರು ತಮ್ಮ ಪ್ರಾಣವನ್ನು ತೆತ್ತಿದ್ದಾರೆ. ಸೊಂಕಿತರ ಪ್ರಮಾಣದಲ್ಲೂ ಭಾರಿ ಏರಿಕೆ ಕಂಡುಬಂದಿದ್ದು 13,58, 468 ವೈರಾಣು ಪೀಡಿತರಾಗಿದ್ದಾರೆ.

ಇಷ್ಟಾದರೂ ಈ ಮಹಾಮಾರಿಯ ಆರ್ಭಟ ಇನ್ನೂ ಕಡಿಮೆಯಾದಂತಿಲ್ಲ. ಇಟಲಿ, ಸ್ಪೈನ್ ಗಳಲ್ಲಿ ಮರಣ ಮೃದಂಗ ಬಾರಿಸಿದ ಈ ವೈರಸ್ ಇದೀಗ ವಿಶ್ವದ ದೊಡ್ಡಣ್ಣನೆಂದೆಣಿಸಿಕೊಂಡಿರುವ ಅಮೆರಿಕಾವನ್ನೇ ತನ್ನ ಮುಂದೆ ಮಂಡಿಯೂರುವಂತೆ ಮಾಡಿದೆ.

ಕಳೆದ ಐದು ದಿನಗಳಲ್ಲಿ ಸ್ಪೈನ್ ನಲ್ಲಿ ಇಳಿಮುಖವಾಗಿದ್ದ ಕೋವಿಡ್ 19 ಸಂಬಂಧಿತ ಸಾವಿನ ಪ್ರಕರಣಗಳು ಇಂದು ಸ್ವಲ್ಪಮಟ್ಟಿನ ಏರಿಕೆ ಕಂಡಿರುವುದು ಕಳವಳಕಾರಿಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಸ್ಪೇನ್ ನಲ್ಲಿ 743 ಜನರು ಈ ಮಹಾಮಾರಿಗೆ ಜೀವತೆತ್ತಿದ್ದಾರೆ.

ಇನ್ನು ಕೋವಿಡ್ 19 ಅಬ್ಬರಕ್ಕೆ ಬೆದರಿರುವ ಜಪಾನ್ ದೇಶಾದ್ಯಂತ ತುರ್ತು ಸ್ಥಿತಿಯನ್ನು ಘೋಷಿಸಿದೆ. ಸಿಂಗಾಪುರದಲ್ಲಿ ಭಾಗಶಃ ಲಾಕ್ ಡೌನ್ ಘೋಷಣೆಯಾಗಿದೆ. ಇನ್ನುಳಿದ ಹಲವಾರು ದೇಶಗಳು ಈ ವೈರಸ್ ಸಮುದಾಯ ಮಟ್ಟದಲ್ಲಿ ಹರಡದಂತೆ ನಿಯಂತ್ರಿಸಲು ತನ್ನ ಪ್ರಜೆಗಳಿಗೆ ‘ಮನೆಯಲ್ಲೇ ಇರುವಂತೆ’ ಲಾಕ್ ಡೌನ್ ಪರಿಸ್ಥಿತಿಯನ್ನು ಘೋಷಿಸಿವೆ.

ಈ ಕೋವಿಡ್ ಮಹಾಮಾರಿಯ ಕೆಟ್ಟ ಹೊಡೆತಕ್ಕೆ ತತ್ತರಿಸುತ್ತಿರುವ ದೇಶಗಳ ಸಾಲಿನಲ್ಲಿ ಇದೀಗ ಅಮೆರಿಕಾ ಮುಂಚೂಣಿಯಲ್ಲಿದೆ. ಇಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 367,650ಕ್ಕೆ ತಲುಪಿದ್ದು 10,943 ಜನ ಈಗಾಗಲೇ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. 19,810 ಜನರು ಈ ಮಹಾಮಾರಿಯ ಹೊಡೆತಕ್ಕೆ ಸಿಕ್ಕು ಬಳಿಕ ಇದೀಗ ಚೇತರಿಸಿಕೊಂಡಿದ್ದಾರೆ. ಇಲ್ಲಿ ಈಗಾಗಲೇ ಹತ್ತೊಂಬತ್ತು ಲಕ್ಷ ಜನರನ್ನು ಕೋವಿಡ್ 19 ಪರೀಕ್ಷೆಗೊಳಪಡಿಸಲಾಗಿದೆ.

ಇನ್ನು ಸ್ಪೈನ್ ದೇಶದಲ್ಲಿ 140,510 ಕೋವಿಡ್ ಪ್ರಕರಣಗಳು ದಾಖಲಾಗಿದ್ದು 13,798 ಜನ ಸಾವಿಗೀಡಾಗಿದ್ದಾರೆ, ಇಲ್ಲಿ ಇನ್ನೂ 3835 ಹೊಸ ಪ್ರಕರಣಗಳು ದಾಖಲಾಗಿವೆ. 43,208 ಜನ ಈ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇಟಲಿಯಲ್ಲಿ ಈಗಾಗಲೇ 132,547 ಕೋವಿಡ್ 19 ಪ್ರಕರಣಗಳು ದಾಖಲಾಗಿದ್ದು 16,523 ಜನರ ಜೀವ ಬಲಿಯಾಗಿದೆ. ಆದರೆ ಇದೀಗ ಇಲ್ಲಿ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗುವುದು ನಿಂತಿದ್ದು 93,187 ಆ್ಯಕ್ಟಿವ್ ಪ್ರಕರಣಗಳಲ್ಲಿ 3,898 ಸೋಂಕಿತರ ಸ್ಥಿತಿ ಗಂಭೀರವಾಗಿದ್ದು ಮರಣ ಪ್ರಮಾಣ ಇನ್ನೂ ಹೆಚ್ಚು ಭೀತಿ ಎದುರಾಗಿದೆ.

ಈ ದೇಶಗಳನ್ನು ಹೊರತುಪಡಿಸಿದರೆ ಜರ್ಮನಿ (103,375 ಪ್ರಕರಣಗಳು), ಫ್ರಾನ್ಸ್ (98,010 ಪ್ರಕರಣಗಳು), ಚೀನಾ (81,740 ಪ್ರಕರಣಗಳು), ಇರಾನ್ (62,589 ಪ್ರಕರಣಗಳು) ಹಾಗೂ ಇಂಗ್ಲಂಡ್ (51,608 ಪ್ರಕರಣಗಳು) ದೇಶಗಳು ಕೋವಿಡ್ 19 ವೈರಸ್ ಮಹಾಮಾರಿಗೆ ತತ್ತರಿಸಿರುವ ವಿಶ್ವದ ಇತರೇ ದೇಶಗಳಾಗಿವೆ. ಈ ವೈರಸ್ ಹುಟ್ಟಿಕೊಂಡಿದ್ದ ಚೀನಾದಲ್ಲಿ ಇದೀಗ ಮತ್ತೆ ಹೊಸದಾಗಿ 32 ಸೋಂಕಿತ ಪ್ರಕರಣಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಇನ್ನು, ಭಾರತದಲ್ಲಿ ಇದುವರೆಗೆ 4,858 ಕೋವಿಡ್ 19 ವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 137 ಜನ ಸಾವಿಗೀಡಾಗಿದ್ದಾರೆ. 382 ಜನ ಮಾತ್ರ ಈ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಭಾರತ ಇದುವರೆಗೂ 140,293 ಕೋವಿಡ್ ಸೋಂಕು ಪರೀಕ್ಷೆಗಳನ್ನು ನಡೆಸಿದೆ.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.