ಕೋವಿಡ್‌ಗಿಂತ 10 ಪಟ್ಟು ಅಪಾಯಕಾರಿ ವೈರಸ್‌ ಮಲೇಷ್ಯಾದಲ್ಲಿ ಪತ್ತೆ!


Team Udayavani, Aug 17, 2020, 7:38 PM IST

D614G-Mutation

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಣಿಪಾಲ: ಕೋವಿಡ್‌ -19 ಗೆ ಕಾರಣವಾಗುವ SARS&CoV&2 ವೈರಸ್‌ನ ರೂಪಾಂತರವಾದ ಡಿ614ಜಿ ಪತ್ತೆಯಾಗಿದೆ ಎಂದು ಮಲೇಷ್ಯಾ ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಇದು ಕೋವಿಡ್‌ 19ಗಿಂತ 10 ಪಟ್ಟು ಹೆಚ್ಚು ಅಪಾಯಕಾರಿಯಾದ ವೈರಸ್‌ ಎಂದು ಹೇಳಲಾಗಿದೆ.

ಮೂಲಗಳ ಪ್ರಕಾರ ಇದನ್ನು ಕೋವಿಡ್‌ 19ನ ಮತ್ತೂಂದು ಮುಖ ಎಂದು ಹೇಳಲಾಗುತ್ತಿದ್ದು, ಅದಕ್ಕಿಂತ ಹೆಚ್ಚು ಅಪಾಯಕಾರಿಯಾಗಿದೆ.

45 ಜನರ ಸೋಂಕಿತ ಗುಂಪಿನಲ್ಲಿ 3 ಜನರಲ್ಲಿ ಕೋವಿಡ್‌ ತಳಿಯ ಈ ವೈರಸ್‌ ಪತ್ತೆಯಾಗಿದೆ.

ಆಘಾತಕಾರಿ ಅಂಶ ಎಂದರೆ ಭಾರತದಿಂದ ಹಿಂತಿರುಗಿದ ರೆಸ್ಟೋರೆಂಟ್‌ ಮಾಲಕರ ಮೂಲಕ ಈ ವೈರಸ್‌ ಹರಡಿದೆ ಎಂದು ಹೇಳಲಾಗುತ್ತಿದೆ.

ಭಾರತದಿಂದ ತೆರಳಿದ ಬಳಿಕ ಮಲೇಷ್ಯಾದಲ್ಲಿ 14 ದಿನಗಳ ಕ್ವಾರಂಟೈನ್‌ ನಿಯಮಗಳನ್ನು ಪಾಲಿಸದೇ ಇದ್ದದ್ದು ಇತರರಲ್ಲಿ ಇದು ಕಾಣಿಸಿಕೊಳ್ಳಲು ಕಾರಣ ಎಂದು ಹೇಳಲಾಗಿದೆ. ಇದೀಗ ಈ ಸೋಂಕಿತ ವ್ಯಕ್ತಿಗೆ 5 ತಿಂಗಳ ವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಫಿಲಿಪೈನ್ಸ್‌ನಿಂದ ಹಿಂದಿರುಗಿದ ಮತ್ತೂಂದು ಗುಂಪಿನಲ್ಲಿಯೂ ಇದೇ ಮಾದರಿಯ ವೈರಸ್‌ ಕಂಡುಬಂದಿದೆ.

ಕೋವಿಡ್‌ಗೆ ಲಸಿಕೆಗಳು ಇದೀಗ ತಯಾರಾಗುತ್ತಿರುವ ಹೊತ್ತಿನಲ್ಲಿ ಇಂತಹ ಹೊಸ ಹೊಸ ಪ್ರಕರಣಗಳು ಲಸಿಕೆಯನ್ನು ದುರ್ಬಲವಾಗಿ ಮಾಡಬಹುದಾಗಿದೆ. ಮಲೇಷ್ಯಾದ ಆರೋಗ್ಯ ಸೇವೆಯ ಮಹಾನಿರ್ದೇಶಕರಾದ ನೂರ್‌ ಹಿಶಮ್‌ ಅಬ್ದುಲ್ಲಾ ಅವರ ಪ್ರಕಾರ, ಕೋವಿಡ್‌ ತನ್ನ ಸ್ವರೂಪವನ್ನು ಬದಲಾಯಿಸುತ್ತಿರುತ್ತದೆ. ಇದು ಲಸಿಕೆಯ ಸಾಮರ್ಥ್ಯದ ಮೇಲೆ ಸ್ವಲ್ಪ ಪರಿಣಾಮ ಬೀರುತ್ತದೆ ಎಂದಿದ್ದಾರೆ.

ಯುರೋಪ್‌ ಮತ್ತು ಅಮೆರಿಕದಲ್ಲಿ ಕೋವಿಡ್‌ನ‌ ಈ ಮಾದರಿಯ ವೈರಸ್‌ಗಳು ಹೆಚ್ಚಾಗಿ ಕಂಡುಬರುತ್ತವೆ. ಕೋವಿಡ್‌ ರೋಗಿಯಲ್ಲಿ ಇರುವಷ್ಟೇ ರೋಗ ಲಕ್ಷಣಗಳು ಇದರಲ್ಲಿ ಕಂಡುಬಂದಿದ್ದು, ರೋಗ ನಿರೋಧಕ ಶಕ್ತಿಯನ್ನು ಸಂಪೂರ್ಣ ಕುಂಠಿಸಬಹುದಾದ ಸಾಧ್ಯತೆ.
ಜಗತ್ತಿಗೆ ಹೋಲಿಸಿದರೆ, ಕೋವಿಡ್‌ ಪ್ರಕರಣಗಳನ್ನು ತಡೆಗಟ್ಟುವ ಮತ್ತು ವ್ಯವಹರಿಸುವಲ್ಲಿ ಮಲೇಷ್ಯಾ ಉತ್ತಮ ಕೆಲಸ ಮಾಡಿದೆ. ಜುಲೈ 28ರಿಂದ ಆಗಸ್ಟ್‌ 16ರ ವರೆಗೆ ಕೇವಲ 26 ಹೊಸ ಪ್ರಕರಣಗಳು ವರದಿಯಾಗಿವೆ.

ಏನಿದು ಡಿ 614ಜಿ?
ಡಿ 614 ಜಿ ರೂಪಾಂತರವನ್ನು ಫೆಬ್ರವರಿ ತಿಂಗಳಿನಲ್ಲಿ ಮೊದಲ ಬಾರಿಗೆ ಕಂಡುಹಿಡಿಯಲಾಯಿತು. ಅಂದಿನಿಂದ ವಿಶ್ವದಾದ್ಯಂತ ಸ್ವ್ಯಾಬ್‌ ಮಾದರಿಗಳಲ್ಲಿ ಕಂಡುಬರುವ SARS&CoV&2ನ ಪ್ರಬಲ ರೂಪಾಂತರವಾಗಿದೆ. ಡಿ 614ಜಿ ಸಾರ್ಸ್‌-ಕೋವ್‌ -2 ಎಂದರೆ ಕೋವಿಡ್‌ -19 ರೋಗಕ್ಕೆ ಕಾರಣವಾಗುವ ವೈರಸ್‌ನ ಅಧಿಕೃತ ಹೆಸರು. ಡಿ 614 ಜಿ ಎಂಬುದು ಸಾರ್ಸ್‌-ಕೋವ್‌ -2ರ ರೂಪಾಂತರವಾಗಿದೆ. ಡಿ 614 ಜಿ ನಮ್ಮ ಜೀವಕೋಶಗಳಿಗೆ ಪ್ರವೇಶಿಸಲು ಬಳಸುವ ವೈರಸ್‌ ಸ್ಟ್ರೈಕ್‌ ಅನ್ನು ರಚಿಸುವ ಪ್ರೊಟೀನ್ನಲ್ಲಿದೆ. ಈ ರೂಪಾಂತರವು ಅಮೈನೊ ಆಮ್ಲವನ್ನು 614ನೇ ಸ್ಥಾನದಲ್ಲಿ, ಡಿ (ಆಸ್ಪರ್ಟಿಕ್‌ ಆಮ್ಲ)ದಿಂದ ಜಿ (ಗ್ಲೆçಸಿನ್‌) ಗೆ ಬದಲಾಯಿಸುತ್ತದೆ.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.