ಕೋವಿಡ್19 ಅಟ್ಟಹಾಸಕ್ಕೆ ನಲುಗಿದ ಇಟಲಿ:ಜಗತ್ತಿನಾದ್ಯಂತ ಮೃತರಾದವರ ಸಂಖ್ಯೆ 11,398ಕ್ಕೆ ಏರಿಕೆ
Team Udayavani, Mar 21, 2020, 8:00 AM IST
ನವದೆಹಲಿ: ಕೋವಿಡ್-19 ಆರ್ಭಟಕ್ಕೆ ಜಗತ್ತಿನಾದ್ಯಂತ ಆತಂಕ ಸೃಷ್ಟಿಯಾಗಿದ್ದು ಇವರೆಗೂ 11, 398 ಜನರು ಬಲಿಯಾಗಿದ್ದಾರೆ. ಸೋಂಕು ಪೀಡಿತರ ಸಂಖ್ಯೆಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು 2,75,871 ಪ್ರಕರಣಗಳು ದಾಖಲಾಗಿವೆ. ಇಟಲಿಯು ಕೋವಿಡ್ 19 ಅಟ್ಟಹಾಸಕ್ಕೆ ಅಕ್ಷರಶಃ ನಲುಗಿ ಹೋಗಿದ್ದು ಕಳೆದ 24 ಗಂಟೆಗಳಲ್ಲಿ 627 ಜನರು ಮೃತಪಟ್ಟಿದ್ದಾರೆ. ಆ ಮೂಲಕ ಒಟ್ಟಾರೆ ಸಾವಿನ ಪ್ರಮಾಣ 4,032ಕ್ಕೆ ಜಿಗಿದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಕೋವಿಡ್ 19 ವೈರಸ್ ನ ಕೇಂದ್ರ ಬಿಂದು ಚೀನಾದಲ್ಲಿ 3,139 ಜನರು ಈಗಾಗಲೇ ಮೃತರಾಗಿದ್ದಾರೆ. ಬ್ರಿಟಿಷ್ ಪ್ರಧಾನ ಮಂತ್ರಿ ಬೋರಿಷ್ ಜಾನ್ಸನ್ ಇಂಗ್ಲೇಂಡ್ ಲಾಕ್ ಡೌನ್ ಗೆ ಆದೇಶ ನೀಡಿದ್ದು ಜನರು ಗುಂಪು ಸೇರದಂತೆ ಮನವಿಮಾಡಿದ್ದಾರೆ. ಇಲ್ಲಿ ಮಾರಕ ವೈರಾಣುವಿಗೆ 160 ಜನರು ಬಲಿಯಾಗಿದ್ದು, 3,200 ಜನರಿಗೆ ಸೋಂಕು ತಗುಲಿದೆ.
ಗಮನಾರ್ಹ ಸಂಗತಿಯೆಂದರೇ ಜಗತ್ತಿನಾದ್ಯಂತ ಸೋಂಕು ಪೀಡಿತರ ಸಂಖ್ಯೆಯಲ್ಲಿ 91,912 ಜನರು ಗುಣಮುಖರಾಗಿದ್ದು ಕೊಂಚ ಮಟ್ಟಿಗಿನ ಆಶಾಭಾವ ಹುಟ್ಟಿಸಿದೆ.
ಭಾರತದಲ್ಲಿ ಶುಕ್ರವಾರ ಒಂದೇ ದಿನ ಸೋಂಕು ಪೀಡಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಶುಕ್ರವಾರವೇ ಸುಮಾರು 50ಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿದೆ. ಆ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕು ಪೀಡಿತರ ಸಂಖ್ಯೆ 256ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ