ವಹಿವಾಟು ಸ್ಥಗಿತಗೊಳಿಸಿದ ಸಿಗ್ನೇಚರ್‌ ಬ್ಯಾಂಕ್‌

ಅಮೆರಿಕದಲ್ಲಿ ಮತ್ತೊಂದು ಬ್ಯಾಂಕ್‌ ಪತನ, ಕ್ರಿಪ್ಟೋ ಮೂಲಕ ವಹಿವಾಟು ನಡೆಸುತ್ತಿದ್ದ ಬ್ಯಾಂಕ್‌

Team Udayavani, Mar 14, 2023, 7:30 AM IST

ವಹಿವಾಟು ಸ್ಥಗಿತಗೊಳಿಸಿದ ಸಿಗ್ನೇಚರ್‌ ಬ್ಯಾಂಕ್‌

ವಾಷಿಂಗ್ಟನ್‌/ನ್ಯೂಯಾರ್ಕ್‌: ಆರ್ಥಿಕ ಜಗತ್ತಿಗೆ ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ ಮುಚ್ಚಿದ ಆಘಾತ ಅನುಭವಿಸುತ್ತಿರುವಂತೆಯೇ ಅಮೆರಿಕದ ನ್ಯೂಯಾರ್ಕ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಿಗ್ನೇಚರ್‌ ಬ್ಯಾಂಕ್‌ ತನ್ನ ವಹಿವಾಟು ಸ್ಥಗಿತಗೊಳಿಸಿದೆ.

ಕ್ರಿಪ್ಟೋ ಕರೆನ್ಸಿ ಕ್ಷೇತ್ರದ ವಹಿವಾಟಿನಲ್ಲಿ ಅದು ಪ್ರಧಾನ ಪಾತ್ರ ವಹಿಸುತ್ತಿತ್ತು. ವಹಿವಾಟಿನ ಅಂತ್ಯದಲ್ಲಿ ಕ್ರಿಪ್ಟೋ ಎಕ್ಸ್‌ಚೇಂಜ್‌ “ಕಾಯಿನ್‌ ಬೇಸ್‌’ ಬ್ಯಾಂಕ್‌ನಲ್ಲಿ 240 ಮಿಲಿಯನ್‌ ಡಾಲರ್‌ ಠೇವಣಿ ಹೊಂದಿತ್ತು.

ಬ್ಯಾಂಕ್‌ನಲ್ಲಿ ಗ್ರಾಹಕರು ಇರಿಸಿರುವ ಠೇವಣಿ ಫೆಡರಲ್‌ ಡೆಪಾಸಿಟ್‌ ಇನ್ಶೂರೆನ್ಸ್‌ ಕಾರ್ಪೊರೇಷನ್‌ (ಎಫ್ಡಿಐಸಿ) ನಿಯಂತ್ರಣಕ್ಕೆ ಬಂದಿದೆ. ಜತೆಗೆ ನ್ಯೂಯಾರ್ಕ್‌ನ ವಿತ್ತೀಯ ಸೇವೆಗಳ ವಿಭಾಗದ ಸುಪರ್ದಿಗೆ ಬಂದಿದೆ. 2008ರ ಬಳಿಕ ಮತ್ತೊಂದು ಬ್ಯಾಂಕಿಂಗ್‌ ಕುಸಿತಕ್ಕೆ ಅಮೆರಿಕದಲ್ಲುಂಟಾಗಲಿದೆಯಾ ಎಂಬ ಪ್ರಶ್ನೆಗಳು ಈಗ ಉದ್ಭವಿಸಿವೆ.

ಕಠಿಣ ಕ್ರಮ ನಿಶ್ಚಿತ- ಬೈಡೆನ್‌: ಅಮೆರಿಕದಲ್ಲಿ ಉಂಟಾಗಿರುವ ಬ್ಯಾಂಕಿಂಗ್‌ ಕ್ಷೇತ್ರದ ಬಿಕ್ಕಟ್ಟಿಗೆ ಕಾರಣರಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧ್ಯಕ್ಷ ಜೋ ಬೈಡೆನ್‌ ವಾಗ್ಧಾನ ಮಾಡಿದ್ದಾರೆ.

ಸಿಗ್ನೇಚರ್‌ ಬ್ಯಾಂಕ್‌ ಮತ್ತು ಎಸ್‌ವಿಬಿ ಬಿಕ್ಕಟ್ಟಿಗೆ ಕಾರಣವಾದ ಅಂಶಗಳ ಬಗ್ಗೆ ವಿತ್ತ ಖಾತೆಯ ಜತೆಗೆ ಚರ್ಚಿಸಿದ್ದೇನೆ ಎಂದರು. ಜತೆಗೆ ದೇಶದ ಬ್ಯಾಂಕಿಂಗ್‌ ವ್ಯವಸ್ಥೆ ಹಾಗೂ ಅರ್ಥ ವ್ಯವಸ್ಥೆ ಸುಭದ್ರವಾಗಿದೆ. ಈ ಹಿನ್ನೆಲೆಯಲ್ಲಿ ಹೂಡಿಕೆದಾರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಜತೆಗೆ ಠೇವಣಿದಾರರಿಗೆ ಕೂಡ ಆತಂಕ ಬೇಡ ಎಂದು ಭರವಸೆ ನೀಡಿದ್ದಾರೆ.

99.52 ರೂ.ಗೆ ಎಸ್‌ವಿಬಿ ಖರೀದಿ!
ಬ್ಯಾಂಕ್‌ ಖರೀದಿ ಎಂದರೆ ಸಾವಿರಾರು ಕೋಟಿ ವಹಿವಾಟಿನ ಡೀಲ್‌. ಆದರೆ, ಸದ್ಯ ಬಾಗಿಲು ಮುಚ್ಚಿರುವ ಎಸ್‌ವಿಬಿಯ ಇಂಗ್ಲೆಂಡ ಸಹವರ್ತಿಯನ್ನು ಎಚ್‌ಎಸ್‌ಬಿಸಿ ಬ್ಯಾಂಕ್‌, ಸಾಂಕೇತಿಕವಾಗಿ 99.52 ರೂ. ನೀಡಿ ಖರೀದಿಸಿದೆ! ಬ್ರಿಟನ್‌ನ ತಾಂತ್ರಿಕ ಸ್ಟಾರ್ಟಪ್‌ ಗಳಿಗಾಗಿ ಪ್ರಮುಖ ಬ್ಯಾಂಕನ್ನು ಉಳಿಸುವುದು, ಬ್ಯಾಂಕ್‌ ಭಾರೀ ಕುಸಿತ ತಡೆಯಲು ಸಹಾಯ ಮಾಡುವುದು ಇದರ ಉದ್ದೇಶ. ಬ್ರಿಟನ್‌ ಸರ್ಕಾರ ಕೂಡ ಕ್ಯಾಲಿಫೋರ್ನಿಯದಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ನ ಇಂಗ್ಲೆಂಡ್‌ ಶಾಖೆಯನ್ನು ಖರೀದಿ ಮಾಡುವವರಿಗಾಗಿ ಶೋಧ ನಡೆಸುತ್ತಿತ್ತು.

ಚಿಲ್ಲರೆ ಕ್ಷೇತ್ರದ ಹಣದುಬ್ಬರ ಇಳಿಕೆ
ದೇಶದಲ್ಲಿ ಪ್ರಸಕ್ತ ವರ್ಷ ಫೆಬ್ರವರಿಗೆ ಸಂಬಂಧಿಸಿದಂತೆ ಚಿಲ್ಲರೆ ಹಣದುಬ್ಬರ ದರ ಶೇ.6.44 ಇಳಿಕೆಯಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸೋಮವಾರ ಬಿಡುಗಡೆ ಮಾಡಿದ ದತ್ತಾಂಶಗಳಲ್ಲಿ ಉಲ್ಲೇಖಿಸಲಾಗಿದೆ.

ಜನವರಿಯಲ್ಲಿ ಅದರ ಪ್ರಮಾಣ, ಶೇ.6.52 ಆಗಿತ್ತು. ಗ್ರಾಮೀಣ ಪ್ರದೇಶಗಳಲ್ಲಿ ಹಣದುಬ್ಬರ ಪ್ರಮಾಣ ಶೇ.6.7 ಆಗಿದ್ದರೆ, ನಗರ ಪ್ರದೇಶಗಳಲ್ಲಿ ಶೇ.6.1 ಎಂದು ಸರ್ಕಾರ ತಿಳಿಸಿದೆ.

ಆಹಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಣದುಬ್ಬರ ಕೂಡ ಜನವರಿಯಲ್ಲಿ ಶೇ.6 ಇದ್ದದ್ದು ಕಳೆದ ತಿಂಗಳಿಗೆ ಶೇ.5.95ಕ್ಕೆ ಇಳಿಕೆಯಾಗಿದೆ. 2022 ನವೆಂಬರ್‌ ಮತ್ತು ಡಿಸೆಂಬರ್‌ ಅನ್ನು ಹೊರತುಪಡಿಸಿ, ಹಣದುಬ್ಬರ ಪ್ರಮಾಣ ಆರ್‌ಬಿಐ ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚಾಗಿಯೇ ಮುಂದುವರಿದಿತ್ತು.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.