ಸರಕಾರಕ್ಕೆ ರಹಸ್ಯ ಸಡ್ಡು; ಚೀನದಲ್ಲಿ ಡೇಟಿಂಗ್‌ ಆ್ಯಪ್‌, ವಿಚಾಟ್‌ನಲ್ಲಿ ಪ್ರತಿಭಟನೆ


Team Udayavani, Nov 30, 2022, 6:50 AM IST

ಸರಕಾರಕ್ಕೆ ರಹಸ್ಯ ಸಡ್ಡು; ಚೀನದಲ್ಲಿ ಡೇಟಿಂಗ್‌ ಆ್ಯಪ್‌, ವಿಚಾಟ್‌ನಲ್ಲಿ ಪ್ರತಿಭಟನೆ

ಬೀಜಿಂಗ್‌: ಚೀನದಲ್ಲಿ ಕೊರೊನಾ ಸೋಂಕು ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರು ಜಾಲತಾಣಗಳಲ್ಲಿ ವೀಡಿಯೋ, ಫೋಟೋ ಅಪ್‌ಲೋಡ್‌ ಮಾಡದಂತೆ ಸರಕಾರ ಸೆನ್ಸಾರ್‌ ಮಾಡಿದೆ. ಆದರೆ ಸರಕಾರಕ್ಕಿಂತ ನಾವೇ ಬುದ್ಧಿವಂತರು ಎಂದು ಸಡ್ಡು ಹೊಡೆದಿದ್ದಾರೆ.

ಸೋಂಕು ಪ್ರತಿಬಂಧಕ ನಿಯಮಗಳ ವಿರುದ್ಧ ಈಗ ಚೀನದಲ್ಲಿ ಡೇಟಿಂಗ್‌ ಆ್ಯಪ್‌ಗ್ಳ ಮೂಲಕ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಜತೆಗೆ ತಮ್ಮ ದೇಶದ ಹೊರಗಿನ ಭಾಗದಲ್ಲಿ ಇರುವ ಜಾಲತಾಣಗಳ ಮೂಲಕ ಅಧ್ಯಕ್ಷ ಜಿನ್‌ಪಿಂಗ್‌ ಸರಕಾರದ ನಿಲುವುಗಳ ಬಗ್ಗೆ ಕಟುವಾಗಿ ಟೀಕೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಸರಿ ಸುಮಾರು ಮೂರು ವರ್ಷಗಳಿಂದ ಒಂದಲ್ಲ ಒಂದು ರೀತಿಯಲ್ಲಿ ನಿಯಮಗಳಿಂದ ಜನರು ಬಸವಳಿದಿದ್ದಾರೆ. ಉರುಮ್‌ಕಿ ನಗರದ ಅಪಾರ್ಟ್‌ ಮೆಂಟ್‌ನಲ್ಲಿ ಬೆಂಕಿಯಲ್ಲಿ ಸಿಕ್ಕಿ ಹಾಕಿಕೊಂಡಿದ್ದವರನ್ನು ರಕ್ಷಿಸಲು ಕಾನೂನು ಅಡ್ಡಿಯಾಯಿತು. ಹೀಗಾಗಿ 10 ಮಂದಿ ಸಾವನ್ನಪ್ಪಿದ್ದಾರೆ ಎಂಬ ವಾದಗಳನ್ನು ಅಲ್ಲಿನ ಸರಕಾರ ಸಾರಾಸಗಟಾಗಿ ತಿರಸ್ಕರಿಸಿದೆ.

ಸೆನ್ಸಾರ್‌ ನಡುವೆ ಪ್ರತಿಭಟನೆ: ಡೇಟಿಂಗ್‌ ಆ್ಯಪ್‌ಗ್ಳ ನಡುವೆ ಪ್ರತಿಭಟನೆ, ಆಕ್ರೋಶ ವ್ಯಕ್ತಪಡಿಸುತ್ತಿರುವುದು ಒಂದೆಡೆಯಾದರೆ ಸರಕಾರಿ ಸ್ವಾಮ್ಯದ ವಿಚಾಟ್‌ನಲ್ಲಿಯೇ ಕೋಡ್‌ವರ್ಡ್‌ ಮೂಲಕ ಸರಕಾರದ ನಿಯಮಗಳ ವಿರುದ್ಧ ಕೋಪ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನೆಗಳನ್ನು ನಡೆಸುತ್ತಿದ್ದರೂ ಗುಪ್ತವಾಗಿ, ಸಂಕೇತ ಭಾಷೆಗಳಲ್ಲಿ ಅಭಿಪ್ರಾಯಗಳನ್ನು ಅಪ್‌ಲೋಡ್‌ ಮಾಡಲಾಗುತ್ತಿದೆ. ಹೀಗಾಗಿ ಚೀನದ ಪೊಲೀಸರಿಗೆ ಪೋಸ್ಟ್‌ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಅಸಾಧ್ಯವಾಗದೆ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಆ್ಯಪ್‌ ಗಳ ಜತೆಗೆ ಟೆಲಿಗ್ರಾಂ ಆ್ಯಪ್‌ ಗಳ ಮೂಲಕ ಪ್ರತಿಭಟನೆ ನಡೆಸಲು ಸರಕಾರದ ನೀತಿಗಳನ್ನು ಪ್ರಶ್ನಿಸುವ ವಿಚಾರಗಳನ್ನು ಹಂಚಿಕೊಳ್ಳಲಾರಂಭಿಸಿದ್ದಾರೆ. ಇದಲ್ಲದೆ ಟ್ವಿಟರ್‌ನಲ್ಲಿ ಕೂಡ ನಕಲಿ ಖಾತೆಗಳ ಮೂಲಕ ಸರಕಾರವನ್ನು ಟೀಕಿಸಲಾಗುತ್ತಿದೆ.

ಸಡಿಲಿಕೆಗೆ ಚಿಂತನೆ: ಮತ್ತೊಂದೆಡೆ ಪ್ರತಿಭಟನೆ ಯಿಂದ ಕಂಗೆಟ್ಟ ಚೀನ ಕಠಿನ ನಿಲುವು ಸಡಿಲಗೊಳಿಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ನೀತಿಯನ್ನು ಸಮರ್ಥಿಸಿಕೊಂಡಿರುವ ಚೀನ ವಿದೇಶಾಂಗ ಸಚಿವಾಲಯ ಬದಲಾಗುತ್ತಿರುವ ಸೋಂಕಿನ ಪರಿಸ್ಥಿತಿಗೆ ಅನುಗುಣವಾಗಿ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದೆ. ನಾಗರಿಕರ ಹಕ್ಕುಗಳನ್ನು ರಕ್ಷಿಸಲು ಸರಕಾರ ಕ್ರಮ ಕೈಗೊಂಡಿದೆ ಎಂದು ಹೇಳಿಕೊಂಡಿದೆ.

ಮತ್ತೆ ಲಸಿಕೆ: ಇದೇ ವೇಳೆ ದೇಶದಲ್ಲಿ ಮತ್ತೆ ಸೋಂಕು ಹೆಚ್ಚಾಗಿರುವುದರಿಂದ ಹಿರಿಯ ನಾಗರಿಕರಿಗೆ ಲಸಿಕೆ ಹಾಕಿಸಲು ಜಿನ್‌ಪಿಂಗ್‌ ಸರಕಾರ ಆದೇಶ ನೀಡಿದೆ.

ಮನೆಗೆ ತೆರಳಲು ವಿದ್ಯಾರ್ಥಿಗಳಿಗೆ ಸೂಚನೆ
ವಿ.ವಿ.ಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಲಾರಂಭಿಸಿದ್ದರಿಂದ ಅವರನ್ನು ಮನೆಗೆ ತೆರಳಲು ಸೂಚಿಸಲಾಗಿದೆ. ವಿವಿಗಳ ವತಿಯಿಂದಲೇ ರೈಲು ಮತ್ತು ಬಸ್‌ ನಿಲ್ದಾಣಕ್ಕೆ ವಾಹನಗಳ ಮೂಲಕ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಬೀಜಿಂಗ್‌, ಶಾಂಘೈ ಮತ್ತು ಇತರ ನಗರಗಳಲ್ಲಿ ದಮನಕಾರಿ ನೀತಿಗಳನ್ನು ಅನುಷ್ಠಾನಗೊಳಿಸಲು ಪೊಲೀಸರಿಗೆ ಸೂಚಿಸಲಾಗಿದೆ. ಹೀಗಾಗಿ ಮಂಗಳವಾರ ಪ್ರತಿಭಟನೆ ನಡೆದಿಲ್ಲ.

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.