ಭೂಗತ ಪಾತಕಿ ದಾವೂದ್‌ ಇಬ್ರಾಹಿಂಗೆ ತೀವ್ರ ಹೃದಯಾಘಾತ, ನಿಧನ ? 


Team Udayavani, Apr 29, 2017, 9:17 AM IST

dawoodibrahim.jpg

ಕರಾಚಿ: ಭಾರತದ ಮೋಸ್ಟ್‌ ವಾಂಟೆಡ್‌, ಭೂಗತ ಪಾತಕಿ ದಾವೂದ್‌ ಇಬ್ರಾಹಿಂಗೆ ತೀವ್ರ ಹೃದಯಾಘಾತವಾಗಿದ್ದು, ಆತನನ್ನು ಕರಾಚಿಯ ಆಸ್ಪತ್ರೆಗೆ ಸೇರಿಸಲಾಗಿದೆ. ಆರೋಗ್ಯದ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಹೇಳಿವೆ. ಆದರೆ ದಾವೂದ್‌ ಅನಾರೋಗ್ಯದ ವರದಿಯನ್ನು ಮತ್ತೋರ್ವ ಮೋಸ್ಟ್‌ ವಾಟೆಂಡ್‌ ಆರೋಪಿ, ದಾವೂದ್‌ ಬಂಟ ಛೋಟಾ ಶಕೀಲ್‌ ನಿರಾಕರಿಸಿದ್ದಾನೆ. ರಾಷ್ಟ್ರೀಯ ಸುದ್ದಿವಾಹಿನಿಯೊಂದಕ್ಕೆ ಕರೆ ಮಾಡಿರುವ ಆತ, ದಾವೂದ್‌ ಆರೋಗ್ಯ ಚೆನ್ನಾಗಿದ್ದು, ಅನಾರೋಗ್ಯದ ವಾರ್ತೆ ಸುಳ್ಳು ಎಂದು ಹೇಳಿದ್ದಾನೆ.

ಆದರೆ ಆತ ಮೃತಪಟ್ಟಿರುವುದಾಗಿಯೂ ಸುದ್ದಿಗಳು ಹರಿದಾಡತೊಡಗಿವೆ. ಭಾರತೀಯ ಗುಪ್ತಚರ ಸಂಸ್ಥೆಗಳ ಮಾಹಿತಿ ಪ್ರಕಾರ ದಾವೂದ್‌ ಏ.19ರಂದು ಕಡೆಯ ಬಾರಿ ಹೊರಗೆ ಕಾಣಿಸಿಕೊಂಡಿದ್ದ. ಆತ ಕರಾಚಿಯಲ್ಲೇ ಇರುವ ತನ್ನ ಅಳಿಯನ ಮನೆಗೆ ಔತಣಕೂಟಕ್ಕೆ ತೆರಳಿದ್ದ ಎಂದು ಹೇಳಲಾಗಿದೆ.

ಕಳೆದ ಕೆಲ ಸಮಯದಿಂದ ದಾವೂದ್‌ಗೆ ಆರೋಗ್ಯ ಚೆನ್ನಾಗಿಲ್ಲ ಎಂದು ವರದಿಗಳು ಹರಿದಾಡುತ್ತಿದ್ದವು.ಜೊತೆಗೆ ಕಳೆದ ವರ್ಷ ಆತ ಗ್ಯಾಂಗ್ರಿನ್‌ಗೆ ತುತ್ತಾಗಿದ್ದ ಎಂದು ಹೇಳಲಾಗಿತ್ತು. ಇದನ್ನು ಗುಪ್ತಚರ ಅಧಿಕಾರಿಗಳು ಖಚಿತ ಪಡಿಸಿದ್ದರು ಕೂಡ. ಆತನಿಗೆ ಕರಾಚಿಯ ಲಿಖಾಯತ್‌ ರಾಷ್ಟ್ರೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ದಾವೂದ್‌ ಸದ್ಯ ಕರಾಚಿಯ ನೂರಾಬಾದ್‌ ಪ್ರದೇಶದ ಕ್ಲಿಫ್ಟನ್‌ನ ನಂ.20, 30ನೇ ರಸ್ತೆಯಲ್ಲಿರುವ ಬಂಗಲೆಯಲ್ಲಿ ವಾಸವಾಗಿದ್ದಾನೆ ಎನ್ನಲಾಗಿದೆ. ಈ ಪ್ರದೇಶದಲ್ಲಿ ಪಾಕಿಸ್ತಾನ ಸರ್ಕಾರದಿಂದ ದಾವೂದ್‌ಗೆ ಬಿಗಿ ಭದ್ರತೆ ಇರುವುದಾಗಿಯೂ ಹೇಳಲಾಗಿತ್ತು. ಭಾರತೀಯ ಗುಪ್ತಚರ ಸಂಸ್ಥೆಗಳ ಪ್ರಕಾರ, 61 ವಯಸ್ಸಿನ ದಾವೂದ್‌ನ ಇತ್ತೀಚಿನ ಆರೋಗ್ಯ ಸ್ಥಿತಿಯನ್ನು ಪಾಕಿಸ್ತಾನ ಸರ್ಕಾರ ಅತಿ ಗುಪ್ತವಾಗಿಟ್ಟಿದೆ. ಹಿಂದಿನಿಂದಲೂ ಅದು ದಾವೂದ್‌ ಪಾಕ್‌ ನಲ್ಲಿಲ್ಲ ಎಂದು ಹೇಳುತ್ತಲೇ ಬಂದಿದೆ.

ಒಂದು ವೇಳೆ ದಾವೂದ್‌ ಮೃತಪಟ್ಟರೂ ಕೂಡ, ಪಾಕ್‌ ಸರ್ಕಾರ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆಯನ್ನು ಮಾಡದೇ ಸದ್ದಿಲ್ಲದೇ ಅಂತ್ಯಕ್ರಿಯೆ ನೆರವೇರಿಸಲಿದೆ ಎನ್ನಲಾಗಿದೆ. ಕಾರಣ ಒಂದು ವೇಳೆ ಹೀಗೆ ಘೋಷಣೆ ಮಾಡಿದ್ದಲ್ಲಿ ಆತ ಪಾಕ್‌ ನಲ್ಲಿಯೇ ಇದ್ದ ಎಂದು ಒಪ್ಪಿಕೊಂಡಂತಾಗುತ್ತದೆ ಎಂಬುದು ಲೆಕ್ಕಾಚಾರವಾಗಿದೆ.

1993ರ ಮುಂಬೈ ಸರಣಿ ಬಾಂಬ್‌ ಸ್ಫೋಟ ಪ್ರಕರಣ ಸೇರಿದಂತೆ ಹಲವು ಉಗ್ರ ಚಟುವಟಿಕೆ, ಕೊಲೆ-ಸುಲಿಗೆ ಪ್ರಕರಣಗಳಲ್ಲಿ ದಾವೂದ್‌ ಭಾರತದ ತನಿಖಾ ಸಂಸ್ಥೆಗಳಿಗೆ ಬೇಕಾದವನಾಗಿದ್ದಾನೆ. 1980ರಲ್ಲಿ ಮುಂಬೈ ಪೊಲೀಸರು ಭೂಗತ ಲೋಕವನ್ನು ಮಟ್ಟಹಾಕಿದ್ದು, ಬಳಿಕ ಪಾಕ್‌ಗೆ ಆತ ಓಡಿಹೋಗಿದ್ದ. ಕರಾಚಿಗೆ ಹೋಗಿ ಆತ ನೆಲೆಸಿದ ಬಳಿಕ ಅಲ್ಲಿಯೂ ಭೂಗತಲೋಕವನ್ನು ಕಟ್ಟಿದ್ದಾಗಿ ಹೇಳಲಾಗಿದೆ. 

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.