ದಾವೂದ್‌ ಕಂಪೆನಿಯ ಕರಾಳ ಮುಖ ಬಯಲು


Team Udayavani, Mar 24, 2018, 6:00 AM IST

34.jpg

ವಾಷಿಂಗ್ಟನ್‌: ದಾವೂದ್‌ ಇಬ್ರಾಹಿಂನ “ಡಿ-ಕಂಪೆನಿ’ ಸಾಮ್ರಾಜ್ಯ ಎಲ್ಲರ ಊಹೆಗೂ ಮೀರಿ ಜಗತ್ತಿನ ನಾನಾ ದೇಶಗಳಲ್ಲಿ, ನಾನಾ ರೂಪಗಳಲ್ಲಿ ವ್ಯವಸ್ಥಿತವಾಗಿ ಹರಡಿಕೊಂಡಿದೆ ಎಂಬ ಆಘಾತಕಾರಿ ಮಾಹಿತಿ ಯನ್ನು ಜಾರ್ಜ್‌ ಮ್ಯಾಸನ್‌ ವಿಶ್ವವಿದ್ಯಾಲಯದ ಶಾರ್‌ ಸ್ಕೂಲ್‌ ಆಫ್ ಪಾಲಿಸಿ ಆ್ಯಂಡ್‌ ಗವರ್ನ್ಮೆಂಟ್‌ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರೊಫೆಸರ್‌ ಡಾ| ಲೂಯಿಸ್‌ ಶೆಲ್ಲಿ  ವಿವರಿಸಿದ್ದಾರೆ.

ಅಮೆರಿಕದ ಸಂಸತ್ತಿನಿಂದ ನೇಮಕಗೊಂಡಿರುವ ಭಯೋತ್ಪಾದನೆ ಮತ್ತು ಕಾನೂನು ಬಾಹಿರ ಆರ್ಥಿಕ ವ್ಯವಹಾರಗಳಿಗೆ ಸಂಬಂಧಪಟ್ಟ ಉಪಸಮಿತಿ, ತಜ್ಞರಿಂದ ಭಯೋತ್ಪಾದನೆ ಬಗ್ಗೆ ಮಾಹಿತಿ ಪಡೆಯಲು ಕರೆಯಲಾಗಿದ್ದ ವಿಚಾರ ಸಂಕಿರಣವೊಂದರಲ್ಲಿ ಮಾತನಾಡಿದರು. ದಾವೂದ್‌ ಸಾಮ್ರಾಜ್ಯದ ವಿಸ್ತೃತ ರೂಪಗಳನ್ನು ತೆರೆದಿಟ್ಟಿದ್ದು, ಅವರು ನೀಡಿದ ಮಾಹಿತಿ “ದಾವೂದ್‌ ಬಾಧಿತ’ ಹಲವಾರು ದೇಶಗಳಿಗೆ ಪ್ರಯೋಜನಕಾರಿಯಾಗಿದೆ.

ಪಾತಕಿಯ ಡ್ರಗ್ಸ್‌ ಸಾಮ್ರಾಜ್ಯ: ವಿಚಾರ ಮಂಡನೆ ವೇಳೆ, ದಾವೂದ್‌ ಬಗ್ಗೆ ಪ್ರಸ್ತಾವಿಸಿದ ಡಾ| ಶೆಲ್ಲಿ “ಭಾರತದಲ್ಲಿ ತನ್ನ ಮೂಲ ಬೇರುಗಳನ್ನು ಹೊಂದಿರುವ ಡಿ-ಕಂಪೆನಿ, ಸದ್ಯಕ್ಕೆ ಪಾಕ್‌ನ ಕರಾಚಿಯನ್ನು ತನ್ನ ಡ್ರಗ್ಸ್‌ ಮಾರಾಟದ ಪ್ರಮುಖ ಕೇಂದ್ರ ಸ್ಥಾನವನ್ನಾಗಿಸಿಕೊಂಡಿದೆ. ಅಲ್ಲದೆ, ವಿವಿಧ ದೇಶಗಳಲ್ಲಿ ತನ್ನ ಜಾಲವನ್ನು ಹಬ್ಬಿಸಿದೆ. ಮೆಕ್ಸಿಕೋದ ಡ್ರಗ್ಸ್‌ ಮಾಫಿಯಾಗಳ ಮಾದರಿಯಲ್ಲೇ ನಾನಾ ದೇಶಗಳಲ್ಲಿ ಅಸಂಖ್ಯ ಕವಲುಗಳನ್ನು ಡಿ-ಕಂಪೆನಿ ಹೊಂದಿದೆ. ಆದರೆ, ಇವೆಲ್ಲವನ್ನೂ ಒಂದು ತಹಬಂದಿಯಲ್ಲಿಟ್ಟು ಕೊಂಡು ಸುಲಲಿತವಾಗಿ ನಡೆಸಿಕೊಂಡು ಹೋಗಲಾಗುತ್ತಿದೆ’ ಎಂದಿದ್ದಾರೆ.

ಇದೇ ವೇಳೆ, ಡಿ-ಕಂಪೆನಿ ವಿವಿಧ ಜಾಲಗಳ ಬಗ್ಗೆ ಮಾತನಾಡಿದ ಅವರು, “ಡ್ರಗ್ಸ್‌ ಮಾರಾಟ ಮಾತ್ರವಲ್ಲದೆ, ಶಸ್ತ್ರಾಸ್ತ್ರಗಳ ಕಳ್ಳ ಸಾಗಾಣಿಕೆ, ನಕಲಿ ಡಿವಿಡಿ ತಯಾರಿಕೆ ಮಾಡುತ್ತಿದೆಯಲ್ಲದೆ, ತನ್ನ ಹವಾಲಾ ಏಜೆಂಟರುಗಳಿಂದ ಅಕ್ರಮ ಹಣಕಾಸು ವ್ಯವಹಾರಗಳನ್ನು ನಡೆಸುತ್ತಿದೆ’. ಆ ಮೂಲಕ ಭಾರತ, ಅಮೆರಿಕ ಮಾತ್ರವಲ್ಲದೆ ಜಗತ್ತಿನ ಅನೇಕ ರಾಷ್ಟ್ರಗಳಿಗೆ ದಾವೂದ್‌ ಹೇಗೆ ಅಪಾಯಕಾರಿಯಾಗಿ ಪರಿಗಣಿಸಿದ್ದಾನೆ ಎಂದು ವಿಶ್ಲೇಷಿಸಿದರು.

ಭಾರತದ ಸತತ ಪ್ರಯತ್ನ 
ದಾವೂದ್‌ನ ಕರಾಳ ಸಾಮ್ರಾಜ್ಯ ಹಾಗೂ ಆತ ಇಡೀ ವಿಶ್ವಕ್ಕೇ ಹೇಗೆ ಮಾರಕ ಎಂಬುದನ್ನು ವಿಶ್ವದ‌ ಗಮನಕ್ಕೆ ತರುವ ಪ್ರಯತ್ನವನ್ನು ಭಾರತ ಹಲವಾರು ವರ್ಷಗಳಿಂದಲೂ ಮಾಡುತ್ತಲೇ ಇತ್ತು. ಅಲ್‌ಕಾಯಿದಾ ಉಗ್ರರ ಜತೆ ನಂಟು ಹೊಂದಿರುವ ಆರೋಪದಡಿ ದಾವೂದ್‌ನನ್ನು ಜಾಗತಿಕ ಉಗ್ರನೆಂದು ಅಮೆರಿಕ ಘೋಷಿಸಿತ್ತು. ಇದಾದ ಮೇಲೆ, ವಿಶ್ವ ಸಂಸ್ಥೆಯೂ ತನ್ನ ಉಗ್ರ ನಿಗ್ರಹ ತೀರ್ಮಾನದಡಿ ದಾವೂದ್‌ಗೆ ನಿಷೇಧ ಹೇರಿತ್ತು.

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

police USA

US ಷಿಕಾಗೋದಲ್ಲಿ ಶೂಟೌಟ್‌: 7 ವರ್ಷದ ಬಾಲಕಿ ಸಾವು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.