ನೇಪಾಲ ಪ್ರಧಾನಿ ರಾಜೀನಾಮೆಗೆ ಒತ್ತಾಯ ; ಪಕ್ಷದಲ್ಲೇ ಎದ್ದಿದೆ ಭಿನ್ನ ಸ್ವರ
Team Udayavani, Jun 26, 2020, 6:20 AM IST
ಕಠ್ಮಂಡು: ಭಾರತದೊಂದಿಗಿನ ಗಡಿಜಗಳದ ನಡು ವೆಯೇ ನೇಪಾಲ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಈಗ ಅವರದ್ದೇ ಪಕ್ಷದಲ್ಲಿ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ.
‘ಆಡಳಿತದ ಎಲ್ಲ ವಿಷಯಗಳಲ್ಲೂ ವೈಫಲ್ಯ ಕಂಡಿರುವ ಓಲಿ ಪ್ರಧಾನಿ ಹುದ್ದೆಗೆ ರಾಜೀನಾಮೆ ಕೊಡಬೇಕು’ ಎಂದು ಮಾಜಿ ಪ್ರಧಾನಿ ಪುಷ್ಪ ಕಮಾಲ್ ದಹಾಲ್ (ಮತ್ತೊಂದು ಹೆಸರು ಪ್ರಚಂಡ) ಪಟ್ಟುಹಿಡಿದಿದ್ದಾರೆ.
ನೇಪಾಲದ ಕಮ್ಯುನಿಸ್ಟ್ ಪಕ್ಷದ ಅಧ್ಯಕ್ಷರೂ ಆಗಿರುವ ಪ್ರಚಂಡ, “ರಾಜಕಾರಣಿಯಾಗಿ ನಾನು ಓಲಿಯನ್ನು ಬೆಂಬಲಿಸಿದರೆ ಅದಕ್ಕಿಂತ ದೊಡ್ಡ ಪ್ರಮಾದ ಇನ್ನೊಂದು ಇರಲಾರದು’ ಎಂದಿದ್ದಾರೆ.
ಆದರೆ ಓಲಿ ಪ್ರಧಾನಿ ಕುರ್ಚಿಯಿಂದ ಇಳಿಯಲು ನಿರಾಕರಿಸುತ್ತಿದ್ದಾರೆ. ಒಂದು ವೇಳೆ ರಾಜೀನಾಮೆ ಕೊಡದಿದ್ದರೆ ಕಮ್ಯುನಿಸ್ಟ್ ಪಕ್ಷವನ್ನು ವಿಭಜಿಸುವುದಾಗಿ ಪ್ರಚಂಡ ಕಟುವಾಗಿ ಹೇಳಿದ್ದಾರೆ.
ಈಗಾಗಲೇ ನೇಪಾಲ ಕಮ್ಯುನಿಸ್ಟ್ ಪಕ್ಷದ ಉನ್ನತ ನಾಯಕರು ಓಲಿ ಬಳಗದಿಂದ ಹೊರಬಂದು ಪ್ರಚಂಡ ಅವರನ್ನು ಬೆಂಬಲಿಸುತ್ತಿದ್ದಾರೆ. ಭಾರತದೊಂದಿಗೆ ಜಗಳ ಸೇರಿದಂತೆ ಓಲಿ ಸರಕಾರ ಇತ್ತೀಚೆಗೆ ಇಟ್ಟ ತಪ್ಪು ಹೆಜ್ಜೆಗಳೇ ಅವರ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಳ್ಳಲು ಕಾರಣ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ