ಬೈಡೆನ್‌ ಗೆಲುವು ಭಾರತೀಯರಿಗೆ ಮುಳುವಾಯಿತೇ?

ಎಚ್‌-1ಬಿ ವೀಸಾ ನಿರ್ಬಂಧ ಅವಧಿ ವಿಸ್ತರಿಸಿ ಸೋಲಿನ ಮುಯ್ಯಿ ತೀರಿಸಿದರೇ ಟ್ರಂಪ್‌?

Team Udayavani, Jan 2, 2021, 6:07 AM IST

ಬೈಡೆನ್‌ ಗೆಲುವು ಭಾರತೀಯರಿಗೆ ಮುಳುವಾಯಿತೇ?

ಅಮೆರಿಕ ಅಧ್ಯಕ್ಷೀಯ ಚುನಾವಣೆ ಪೂರ್ವದಲ್ಲಿ ಅನಿವಾಸಿ ಭಾರತೀಯರನ್ನು ಓಲೈಸು ತ್ತಿದ್ದ ಡೊನಾಲ್ಡ್‌ ಟ್ರಂಪ್‌ ಅವರು ಬಳಿಕ ತಮ್ಮ ನಡೆ ಬದಲಾಯಿಸಿ ಸುದ್ದಿಯಾಗಿದ್ದರು. ಇದಕ್ಕೆ ಕಾರಣವಾಗಿದ್ದೇ ಕಳೆದ ವರ್ಷ ಎಚ್‌-1ಬಿ ವೀಸಾದ ಕುರಿತಂತೆ ತೆಗೆದುಕೊಂಡ ಕಠಿನ ನಿರ್ಧಾರ. ಕೋವಿಡ್‌ ಹಿನ್ನೆಲೆಯಲ್ಲಿ ಟ್ರಂಪ್‌ ಸರಕಾರ ಎಚ್‌-1ಬಿ ವೀಸಾದ ಮೇಲೆ ನಿರ್ಬಂಧ ವಿಧಿಸಿ ಅದನ್ನು ಬಳಿಕ ಡಿ. 31ರ ವರೆಗೆ ವಿಸ್ತರಿಸಿತ್ತು. ಇದರಿಂದ ಬಹಳಷ್ಟು ಭಾರತೀಯರು ತೊಂದರೆಗೀಡಾಗಿದ್ದರು.

ಎಚ್‌-1ಬಿ ವೀಸಾ ವಿಚಾರ ಅಮೆರಿಕ ಅಧ್ಯ ಕ್ಷೀಯ ಚುನಾವಣೆಯಲ್ಲೂ ಪ್ರತಿಧ್ವನಿಸಿತ್ತು. ಟ್ರಂಪ್‌ ಅವರ ಈ ನಿರ್ಧಾರವನ್ನೇ ಬಳಸಿಕೊಂಡು ಜೋ ಬೈಡೆನ್‌ ಅವರು ಅನಿವಾಸಿ ಭಾರತೀಯರ ಬಳಿ ಹೋಗಿದ್ದರು. ಡೆಮಾಕ್ರಾಟ್‌ ಪಕ್ಷ ಅಧಿಕಾರಕ್ಕೆ ಬಂದರೆ ಈ ನಿಯಮ ತೆಗೆದು ಹಾಕಲಾಗುವುದು ಎಂದಿದ್ದರು. ಈ ಮೂಲಕ ಅನಿವಾಸಿ ಭಾರತೀಯರು ಬೈಡೆನ್‌ ಅವರನ್ನು ಬೆಂಬಲಿಸಿದರು. ಅಮೆರಿಕದ ನೂತನ ಅಧ್ಯಕ್ಷರಾಗಿ ಬೈಡೆನ್‌ ಚುನಾಯಿತರಾದರು. ಇದರಿಂದ ಭಾರತೀಯರ ಮೇಲೆ ಆಕ್ರೋಶಗೊಂಡ ಟ್ರಂಪ್‌ ಅವರು ಎಚ್‌-1ಬಿ ವೀಸಾದ ಮೇಲಣ ನಿರ್ಬಂಧವನ್ನು ಮಾ. 31ರ ತನಕ ವಿಸ್ತರಿಸುವ ಮೂಲಕ ಸೋಲಿನ ಮುಯ್ಯಿ ತೀರಿಸಿಕೊಂಡಿದ್ದಾರೆ.

ತಮ್ಮ ಅಧಿಕಾರಾವಧಿ ಕೇವಲ 3 ವಾರಗಳು ಇರುವಂತೆಯೇ ಡೊನಾಲ್ಡ್‌ ಟ್ರಂಪ್‌ ಈ ನಿರ್ಧಾರ ಕೈಗೊಂಡಿದ್ದಾರೆ. ಅಮೆರಿಕದ ಉದ್ಯೋಗಿಗಳ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ನಿರ್ಬಂಧದ ಸಂದರ್ಭದಲ್ಲಿದ್ದ ಪರಿಸ್ಥಿತಿ ಮತ್ತು ಕಾರಣಗಳು ಈಗಲೂ ಬದಲಾಗಿಲ್ಲ ಎಂದು ಟ್ರಂಪ್‌ ಸಮರ್ಥಿಸಿಕೊಂಡಿದ್ದಾರೆ. ಟ್ರಂಪ್‌ ಅವರ ನಿರ್ಧಾರದಿಂದ ಅಪಾರ ಸಂಖ್ಯೆಯಲ್ಲಿರುವ ಭಾರತದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ವೃತ್ತಿಪರರು ಹಾಗೂ ಅಮೆರಿಕ ಮತ್ತು ಭಾರತದ ಕಂಪೆನಿಗಳ ಮೇಲೆ ಪರಿಣಾಮ ಬೀರಲಿದೆ. ಎಚ್‌-1ಬಿ ವೀಸಾ ನವೀಕರಣಕ್ಕೂ ತೊಂದರೆಯಾಗಲಿದೆ.

ಬೈಡೆನ್‌ ಹೆಗಲಿಗೆ?
ಎಚ್‌ -1 ಬಿ ವೀಸಾದ ಮೇಲಣ ನಿಷೇಧವನ್ನು ಮಾ. 31ರ ವರೆಗೆ ವಿಸ್ತರಿಸಲಾಗಿರುವುದರಿಂದ ಮುಂದಿನ ನಿರ್ಧಾರ ಕೈಗೊಳ್ಳುವ ಹೊಣೆ ಬೈಡೆನ್‌ ಅವರ ಹೆಗಲಿಗೇರಿದೆ. ಈ ನಿಷೇಧವನ್ನು ವಿಸ್ತರಿಸದೇ ಇರುತ್ತಿದ್ದರೆ ಅಲ್ಲಿನ ಜನರಿಗೆ ಉದ್ಯೋಗ ಅವಕಾಶಗಳು ಕಡಿಮೆಯಾಗುತ್ತಿದ್ದವು. ನಾನು ಚುನಾವಣೆಯಲ್ಲಿ ಸೋತರೂ ಅಮೆರಿಕದ ಹಿತವನ್ನು ಕಾಪಾಡುತ್ತಿದ್ದೇನೆ ಎಂಬ ಸಂದೇಶವನ್ನು ಈ ಮೂಲಕ ಟ್ರಂಪ್‌ ರವಾನಿಸಿದ್ದಾರೆ.

ಅಮೆರಿಕದ 46ನೇ ಅಧ್ಯಕ್ಷರಾಗಿ ಈ ವರ್ಷದ ಜ. 20ರಂದು ಪ್ರಮಾಣವಚನ ಸ್ವೀಕರಿಸಲಿರುವ ಜೋ ಬೈಡೆನ್‌ ಎಚ್‌-1 ಬಿ ವೀಸಾದ ಕುರಿತಂತೆ ಮಾ. 31ರಂದು ಕೈಗೊಳ್ಳುವ ನಿರ್ಧಾರ ಅತ್ಯಂತ ನಿರ್ಣಾಯಕವಾಗಿರಲಿದೆ. ಎಚ್‌-1ಬಿ ವೀಸಾ ನಿಷೇಧವನ್ನು ಹಿಂದೆಗೆದುಕೊಳ್ಳುವುದಾಗಿ ಬೈಡೆನ್‌ ಈ ಹಿಂದೆಯೇ ಭರವಸೆ ನೀಡಿರುವರಾದರೂ ಇದನ್ನು ಈಡೇರಿಸಿದಲ್ಲಿ ಅಮೆರಿಕನ್ನರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ.

ಭಾರತೀಯರೇ ಹೆಚ್ಚು
ಎಚ್‌ -1 ಬಿ ವೀಸಾಗಳ ಅತೀ ದೊಡ್ಡ ಫ‌ಲಾನುಭವಿಗಳಲ್ಲಿ ಭಾರತೀಯರು ಸೇರಿ¨ªಾರೆ. ಹೀಗಾಗಿ ಈ ನಿಷೇಧ ಪರಿಣಾಮ ಬೀರಲಿದೆ. ಅಮೆರಿಕದ ಸಂಶೋಧನ ಸಂಸ್ಥೆ ಬ್ರೂಕಿಂಗ್ಸ್‌ನ ಅಧ್ಯಯನದ ಪ್ರಕಾರ ಜೂ. 22ರ ಘೋಷಣೆಯಿಂದ ಫಾರ್ಚೂನ್‌ 500 ಕಂಪೆನಿಗಳಿಗೆ 100 ಬಿಲಿಯನ್‌ ಡಾಲರ್‌ ನಷ್ಟವಾಗಿದೆ. ಫಾರ್ಚೂನ್‌ 500 ಕಂಪೆನಿಗಳಲ್ಲಿ ಟೆಕ್‌ ಸಂಸ್ಥೆಗಳಾದ ಅಮೆಜಾನ್‌, ಆ್ಯಪಲ್‌, ಆಲ್ಫಾಬೆಟ್‌ (ಗೂಗಲ್‌ನ ಮೂಲ ಕಂಪೆನಿ), ಮೈಕ್ರೋಸಾಫ್ಟ್ ಮತ್ತು ಕಾಗ್ನಿಜೆಂಟ್‌ ಟೆಕ್ನಾಲಜಿ ಸೊಲ್ಯೂಷನ್ಸ್‌ನಲ್ಲಿ ಹೆಚ್ಚು ಭಾರತೀಯರು ಉದ್ಯೋಗದಲ್ಲಿದ್ದಾರೆ.

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.