ಹಿಂಸಾಚಾರ, ಪ್ರತಿಭಟನೆ; ಕೊನೆಗೂ ಸೋಲೊಪ್ಪಿಕೊಂಡ ಟ್ರಂಪ್, ಬೈಡೆನ್ ಗೆ ಭರ್ಜರಿ ಗೆಲುವು
ಘರ್ಷಣೆ, ಹಿಂಸಾಚಾರದಲ್ಲಿ ಭಾಗಿಯಾದ 50ಕ್ಕೂ ಅಧಿಕ ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
Team Udayavani, Jan 7, 2021, 3:18 PM IST
ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್ ಗುರುವಾರ (ಜನವರಿ 7, 2021) ಜೋ ಬೈಡೆನ್ ಅವರ ಗೆಲುವನ್ನು ಔಪಚಾರಿಕವಾಗಿ ಘೋಷಿಸಿದ ನಂತರ ಡೊನಾಲ್ಡ್ ಟ್ರಂಪ್ ಸೋಲನ್ನು ಒಪ್ಪಿಕೊಳ್ಳುವುದಾಗಿ ಘೋಷಿಸಿದ್ದು, ತಾನು ಬದಲಾವಣೆ ಆದೇಶವನ್ನು ಪುರಸ್ಕರಿಸುವುದಾಗಿ ತಿಳಿಸಿದ್ದಾರೆ.
ಎಲೆಕ್ಟೋರಲ್ ಕಾಲೇಜ್ ಫಲಿತಾಂಶವನ್ನು ಅಂಗೀಕರಿಸುವುದಾಗಿ ಅಮೆರಿಕ ಕಾಂಗ್ರೆಸ್ ಹೇಳುವ ಮೂಲಕ ಜೋ ಬೈಡೆನ್ ಅವರು ಅಮೆರಿಕದ 46ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲು ಅನುವು ಮಾಡಿಕೊಟ್ಟಿದೆ.
ಜೋ ಬೈಡೆನ್ 306 ಎಲೆಕ್ಟ್ರೋರಲ್ ಮತಗಳನ್ನು ಪಡೆದಿದ್ದರೆ, ಡೊನಾಲ್ಡ್ ಟ್ರಂಪ್ 232 ಎಲೆಕ್ಟ್ರೋರಲ್ ಮತ ಪಡೆದು ಪರಾಜಯಗೊಂಡಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಗದ್ದುಗೆ ಏರಲು 270 ಎಲೆಕ್ಟ್ರೋರಲ್ ಮತಗಳ ಅಗತ್ಯವಿದೆ.
ಆದರೂ ತಾನು ಚುನಾವಣಾ ಫಲಿತಾಂಶವನ್ನು ಸಂಪೂರ್ಣವಾಗಿ ತಿರಸ್ಕರಿಸುವುದಾಗಿ ತಿಳಿಸಿದ್ದು, ನೈಜಾಂಶ ತುಂಬಾ ದೂರ ಸರಿದುಬಿಟ್ಟಿದೆ. ಆದರೂ ಜನವರಿ 20ರಂದು ಶ್ವೇತಭವನದಿಂದ ನಿರ್ಗಮಿಸುವುದಾಗಿ ಟ್ರಂಪ್ ಹೇಳಿದ್ದಾರೆ.
2020ರ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶದ ಘೋಷಣೆ ಹಿನ್ನೆಲೆಯಲ್ಲಿ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಅಮೆರಿಕದ ಕ್ಯಾಪಿಟಲ್ ಕಟ್ಟಡಕ್ಕೆ ಮುತ್ತಿಗೆ ಹಾಕಿ ದಾಂಧಲೆ ನಡೆಸಿದ್ದರು. ಘಟನೆಯಲ್ಲಿ ಐದಾರು ಮಂದಿ ಸಾವನ್ನಪ್ಪಿದ್ದರು. ಘರ್ಷಣೆ, ಹಿಂಸಾಚಾರದಲ್ಲಿ ಭಾಗಿಯಾದ 50ಕ್ಕೂ ಅಧಿಕ ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
2020ರ ನವೆಂಬರ್ 3ರ ಚುನಾವಣೆಯಲ್ಲಿ ಟ್ರಂಪ್ ಪರಾಜಯ ಒಪ್ಪಿಕೊಳ್ಳದ ಬೆಂಬಲಿಗರು ಪ್ರತಿಭಟನೆ ನಡೆಸಿ ಹಿಂಸಾಚಾರಕ್ಕೆ ಮುಂದಾಗಿದ್ದರು. ಪ್ರತಿಭಟನಾನಿರತ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆಗೈಯಲಾಗಿದ್ದು, ಉಳಿದವರು ಹಿಂಸಾಚಾರದಲ್ಲಿ ಗಾಯಗೊಂಡು ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್