ಅಮೆರಿಕ ಅಧ್ಯಕ್ಷ ಟ್ರಂಪ್‌ ವಿರುದ್ಧ ಮಹಾಭಿಯೋಗಕ್ಕೆ ಸಿದ್ಧತೆ


Team Udayavani, Aug 25, 2018, 6:00 AM IST

17.jpg

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿನ ಅಕ್ರಮಗಳ ಸಂಬಂಧ ಡೊನಾಲ್ಡ್‌ ಟ್ರಂಪ್‌ ವಿರುದ್ಧ ನವೆಂಬರ್‌ ಬಳಿಕ ಮಹಾಭಿಯೋಗ ಪ್ರಕ್ರಿಯೆ ನಡೆಯಲಿದೆ. ನವೆಂಬರ್‌ನಲ್ಲಿ ಅಮೆರಿಕದ ಹೌಸ್‌ ಆಫ್ ರೆಪ್ರಸೆಂಟೇಟಿವ್ಸ್‌(ಕೆಳಮನೆ)ಗೆ ಮಧ್ಯಂತರ ಚುನಾವಣೆ ನಡೆಯಲಿದ್ದು ಈ ಬಳಿಕವಷ್ಟೇ ಮಹಾಭಿಯೋಗ ಪ್ರಕ್ರಿಯೆ ಶುರುವಾಗಲಿದೆ ಎಂದು ಅಲ್ಲಿನ ಪತ್ರಿಕೆಗಳು ವರದಿ ಮಾಡಿವೆ. ಈ ಚುನಾವಣೆಯಲ್ಲಿ ಜನ ಡೆಮಾಕ್ರಾಟಿಕ್‌ ಪಕ್ಷಕ್ಕೆ ಹೆಚ್ಚಿನ ಸ್ಥಾನ ನೀಡಿದಲ್ಲಿ ಅವರು, ಟ್ರಂಪ್‌ ಮಹಾಭಿಯೋಗ ಬಯಸಿದ್ದಾರೆ ಎಂಬರ್ಥವಾಗುತ್ತದೆ. ಹೀಗಾಗಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಬಗ್ಗೆ ಪ್ರಕ್ರಿಯೆ ಶುರು ಮಾಡಬಹುದು ಎಂದು ಡೆಮಾಕ್ರಾಟಿಕ್‌ನ ಸದಸ್ಯರೇ ಹೇಳಿದ್ದಾರೆ.

ಒಂದು ವೇಳೆ ಮಧ್ಯಂತರ ಚುನಾವಣೆಯಲ್ಲಿ ಟ್ರಂಪ್‌ ಅವರ ಪಕ್ಷವಾದ ರಿಪಬ್ಲಿಕನ್‌ಗೆ ಹೆಚ್ಚಿನ ಸ್ಥಾನ ನೀಡಿದಲ್ಲಿ ಜನ ಟ್ರಂಪ್‌ ಪರವೇ ಇದ್ದಾರೆ ಎಂದರ್ಥವಾಗುತ್ತದೆ. ಹೀಗಾಗಿ ಚುನಾವಣೆ ನೋಡಿಕೊಂಡು ಪ್ರಕ್ರಿಯೆ ಶುರು ಮಾಡಬಹುದು ಎಂದಿದ್ದಾರೆ.

ಟೈಮ್‌ ಮುಖಪುಟದಲ್ಲಿ: ಇದಕ್ಕೆ ಪೂರಕವಾಗಿ ಅಂತಾರಾಷ್ಟ್ರೀಯ ಪ್ರಸಿದ್ಧಿಯ ಪತ್ರಿಕೆ ಟೈಮ್‌ನಲ್ಲಿ ಟ್ರಂಪ್‌ ಅವರ ಅರ್ಧ ಫೋಟೋ ಬಳಕೆ ಮಾಡಿಕೊಂಡು ಮುಖಪುಟ ವಿನ್ಯಾಸ ಮಾಡಲಾಗಿದೆ. ಇಡೀ ವೈಟ್‌ಹೌಸ್‌ಗೆ ನೀರು ತುಂಬಿಸಿ “ಇನ್‌ ಡೀಪ್‌’ ಎಂಬ ತಲೆಬರಹ ನೀಡಲಾಗಿದೆ. ಈಗ ಎದುರಾಗಿರುವ ಸಮಸ್ಯೆಗಳು ಹೆಚ್ಚಿದ್ದು ಹೊರಗೆ ಬರುವುದು ಕಷ್ಟ ಎಂಬರ್ಥದಲ್ಲಿ ವಿನ್ಯಾಸ ಮಾಡಲಾಗಿದೆ. ಈ ಹಿಂದೆಯೂ ಟ್ರಂಪ್‌ ಅವರ ಖಾಸಗಿ ವಕೀಲರ ಕಚೇರಿ ಮೇಲೆ ಎಫ್ಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾಗ “ಸ್ಟಾರ್ಮ್’ ಎಂಬರ್ಥದ ತಲೆಬರಹ ನೀಡಿ ಅರ್ಧ ನೀರಿನಲ್ಲಿ ಮುಳುಗಿಸಲಾಗಿತ್ತು. ಈಗ ಸಂಪೂರ್ಣವಾಗಿ ಟ್ರಂಪ್‌ ಅವರನ್ನು ಮುಳುಗಿಸಲಾಗಿದೆ.

ಈ ಮಹಾಭಿಯೋಗ ಪ್ರಕ್ರಿಯೆ ಬಗ್ಗೆ ಗುರುವಾರವಷ್ಟೇ ಮಾತನಾಡಿದ್ದ ಟ್ರಂಪ್‌, ಒಂದು ವೇಳೆ ಹಾಗೇನಾದರೂ ಆದರೆ ಇಡೀ ಅಮೆರಿಕದ ಷೇರು ಮಾರುಕಟ್ಟೆ ಕುಸಿದು ನೆಲಕ್ಕೆ ಬೀಳಲಿದೆ ಎಂಬ ಎಚ್ಚರಿಕೆಯನ್ನೂ ನೀಡಿದ್ದರು.

ವಲಸೆ ನೀತಿಗೆ ಆಕ್ಷೇಪ
ಟ್ರಂಪ್‌ ಸರಕಾರ ಕೈಗೊಂಡ ವಲಸೆ ನೀತಿಗೆ ಉದ್ಯಮ ವಲಯದಿಂದ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಅಮೆರಿಕದ ಪ್ರಮುಖ ಕಂಪನಿಗಳ ಸಿಇಒಗಳು ಪತ್ರ ಬರೆದಿದ್ದಾರೆ. ಈ ವಲಸೆ ನೀತಿಯಿಂದಾಗಿ ಅಸ್ಥಿರತೆ ಉಂಟಾಗುತ್ತದೆ ಹಾಗೂ ಆರ್ಥಿಕ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ ಎಂದು ಆರೋಪಿಸಿದ್ದಾರೆ. ಆ್ಯಪಲ್‌ ಸಿಇಒ ಟಿಮ್‌ ಕುಕ್‌, ಜೆಪಿ ಮಾರ್ಗನ್‌ ಚೇಸ್‌ನ ಜೇಮೀ ಡಿಮಾನ್‌, ಅಮೆರಿಕನ್‌ ಏರ್‌ಲೈನ್ಸ್‌ನ ಡಗ್‌ ಪಾರ್ಕರ್‌ ಸೇರಿ 59 ಸಿಇಒಗಳು ಪತ್ರಕ್ಕೆ ಸಹಿ ಹಾಕಿದ್ದಾರೆ. ಈ ಮೂಲಕ ಇವರೆಲ್ಲರೂ ಭಾರತೀಯ ಪ್ರತಿಭಾವಂತರ ಪರ ನಿಂತಂತಾಗಿದೆ.

ಸರಕಾರ ವಲಸೆ ನೀತಿ ಬದಲಾವಣೆ ಮಾಡುವಾಗ, ಕಾನೂನುಬದ್ಧವಾಗಿ ಕಾರ್ಯನಿರ್ವಹಿಸುತ್ತಿರುವ ಕೌಶಲ ಭರಿತ ಉದ್ಯೋಗಿಗಳ ಜೀವನಕ್ಕೆ ಬಾಧೆಯಾಗಬಾರದು. ಉದ್ಯೋಗಿಗಳ ಹಿತದೃಷ್ಟಿಯಿಂದ ಹಠಾತ್ತನೆ ನೀತಿಗಳನ್ನು ಬದಲಾವಣೆ ಮಾಡಬಾರದು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ. ಇತ್ತೀಚೆಗೆ ಎಚ್‌1ಬಿ ವೀಸಾ ನೀತಿಯಲ್ಲಿ ಟ್ರಂಪ್‌ ಸರಕಾರ ಭಾರಿ ಬದಲಾವಣೆ ಮಾಡಿತ್ತು.

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.