ಇರಾನ್ ಮೇಲೆ ದಾಳಿಗೆ ಟ್ರಂಪ್ ಆದೇಶ, ಆದರೆ ತಡರಾತ್ರಿ ಬೆಳವಣಿಗೆಯಲ್ಲಿ ರದ್ದು?
Team Udayavani, Jun 21, 2019, 2:10 PM IST
ವಾಷಿಂಗ್ಟನ್/ಟೆಹ್ರಾನ್: ಅಮೆರಿಕದ ಡ್ರೋನ್ ಒಂದನ್ನು ಹೊಡೆದುರುಳಿಸಿದ ಇರಾನ್ ಮೇಲೆ ಪ್ರತೀಕಾರಕ್ಕಾಗಿ ಸೇನಾ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶ ನೀಡಿದ್ದು, ಗುರುವಾರ ತಡರಾತ್ರಿ ದಿಢೀರನೆ ದಾಳಿ ಆದೇಶವನ್ನು ಹಿಂಪಡೆದಿರುವ ಬೆಳವಣಿಗೆ ನಡೆದಿತ್ತು ಎಂದು ಮಾಧ್ಯಮದ ವರದಿ ತಿಳಿಸಿದೆ.
ಇರಾನ್ ಡ್ರೋನ್ ಹೊಡೆದುರುಳಿಸಿದ್ದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಗುರುವಾರ ಸಂಜೆ 7ಗಂಟೆಗೆ ಶ್ವೇತ ಭವನದಲ್ಲಿ ಅಮೆರಿಕ ಸೇನೆಯ ಹಾಗೂ ರಾಜತಾಂತ್ರಿಕ ಅಧಿಕಾರಿಗಳು ದಾಳಿ ನಡೆಸುವ ಬಗ್ಗೆ ದೇಶದ ರಾಷ್ಟ್ರೀಯ ಭದ್ರತಾ ಅಧಿಕಾರಿಗಳು, ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದರು!
ಇರಾನ್ ಗುರಿಯಾಗಿರಿಸಿಕೊಂಡು ರಾಡಾರ್ ಹಾಗೂ ಮಿಸೈಲ್ ದಾಳಿ ನಡೆಸುವಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಾಥಮಿಕ ಒಪ್ಪಿಗೆ ನೀಡಿದ್ದರು ಎಂದು ಶ್ವೇತಭವನದ ಅಧಿಕಾರಿಗಳು ತಿಳಿಸಿದ್ದಾರೆ.
ಆದರೆ ರಾತ್ರಿ ಟ್ರಂಪ್ ತಮ್ಮ ಮನಸ್ಸನ್ನು ದಿಢೀರನೆ ಬದಲಾಯಿಸಿಬಿಟ್ಟಿದ್ದು, ದಾಳಿ ನಡೆಸದಂತೆ ಅದೇಶ ನೀಡಿರುವುದಾಗಿ ಹೆಸರು ಹೇಳಲಿಚ್ಚಿಸದ ಅಮೆರಿಕದ ಹಿರಿಯ ಅಧಿಕಾರಿಯೊಬ್ಬರು ವಿವರಿಸಿದ್ದು, ಟ್ರಂಪ್ ಅವರು ದಿಢೀರ್ ಈ ನಿರ್ಧಾರ ಕೈಗೊಂಡಿದ್ದು ಯಾಕೆ ಎಂಬುದು ತಿಳಿದು ಬಂದಿಲ್ಲ. ಅಥವಾ ಅಧಿಕಾರಿಗಳೇ ದಾಳಿ ಕೈಬಿಡುವಂತೆ ಸಲಹೆ ನೀಡಿದ್ದಾರೋ ಎಂಬುದು ಗೊತ್ತಾಗಿಲ್ಲ ಎಂದು ದಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.
ಅಣ್ವಸ್ತ್ರ ಇಪ್ಪಂದ ಕುರಿತು ಇರಾನ್ ಮತ್ತು ಅಮೆರಿಕದ ನಡುವೆ ಹೆಚ್ಚುತ್ತಿರುವ ಬಿಕ್ಕಟ್ಟಿನ ಮಧ್ಯೆಯೇ ಅಮೆರಿಕದ ಡ್ರೋನ್ ಅನ್ನು ಇರಾನ್ ಹೊಡೆದುರುಳಿಸಿತ್ತು. ತನ್ನ ದೇಶದ ಗಡಿ ಅತಿಕ್ರಮಿಸಿದ್ದಕ್ಕೆ ಡ್ರೋನ್ ಹೊಡೆದುರುಳಿಸಲಾಗಿದೆ ಎಂದು ಇರಾನ್ ಪ್ರತಿಕ್ರಿಯೆ ನೀಡಿತ್ತು. ಆದರೆ ಅಂತಾರಾಷ್ಟ್ರೀಯ ಗಡಿಭಾಗದಲ್ಲಿ ಡ್ರೋನ್ ಹೊಡೆದುರುಳಿಸಲಾಗಿದೆ ಎಂದು ಅಮೆರಿಕ ತಿರುಗೇಟು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ