ಲಂಕಾ ಬಳಿಕ ನೇಪಾಲವೂ ದಿವಾಳಿ! ಆರ್ಥಿಕತೆಯ ಅಸಮರ್ಪಕ ನಿರ್ವಹಣೆ, ಆದಾಯ ಕುಸಿತವೇ ಕಾರಣ

ಈ ಅಜಗಜಾಂತರದಿಂದಾಗಿ ಅಲ್ಲಿನ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಇಳಿಯಲಾರಂಭಿಸಿದೆ

Team Udayavani, Apr 12, 2022, 10:00 AM IST

ಲಂಕಾ ಬಳಿಕ ನೇಪಾಲವೂ ದಿವಾಳಿ! ಆರ್ಥಿಕತೆಯ ಅಸಮರ್ಪಕ ನಿರ್ವಹಣೆ, ಆದಾಯ ಕುಸಿತವೇ ಕಾರಣ

ಕೊಲಂಬೋ/ ಕಠ್ಮಂಡು: ಭಾರತದ ಮತ್ತೂಂದು ನೆರೆಯ ದೇಶ ನೇಪಾಲ ಕೂಡ, ಶ್ರೀಲಂಕಾದಂತೆಯೇ ಆರ್ಥಿಕ ದುಃಸ್ಥಿತಿಯನ್ನು ನಿಧಾನವಾಗಿ ತಲುಪುತ್ತಿದ್ದು, ಅಲ್ಲಿನ ಜನರಲ್ಲಿ ಹೊಸ ಆತಂಕ ಸೃಷ್ಟಿಸಿದೆ. ರಾಜ ಕೀಯ ಅಸ್ಥಿರತೆ, ಅಸಮರ್ಪಕ ಹಣ ಕಾಸು ನಿರ್ವಹಣೆ, ವಿದೇಶಿ ವಿನಿಮಯ ಕುಸಿತ, ರಫ್ತು- ಆಮದಿನ ನಡುವೆ ದೊಡ್ಡಮಟ್ಟದ ಏರುಪೇರು ಈ ವಿಚಾರಗಳು ಆ ದೇಶವನ್ನು ದಿವಾಳಿಯ ಅಂಚಿಗೆ ತಂದು ನಿಲ್ಲಿಸಿವೆ.

ಕೊರೊನಾ ಸಂಕಷ್ಟದಿಂದಾಗಿ ದೇಶದ ಪ್ರಮುಖ ಆದಾಯ ಮಾರ್ಗಗಳಾದ ಪ್ರವಾಸೋದ್ಯಮ ಹಾಗೂ ರಫ್ತು ವ್ಯವಹಾರದಲ್ಲಿ ತೀವ್ರ ಇಳಿಮುಖ ದಾಖಲಾಯಿತು.

ಜತೆಗೆ 2021ರ ಜುಲೈಯಿಂದಲೇ ಆ ದೇಶದ ವಿದೇಶಿ ವಿನಿಮಯ ಕುಸಿತ ಕಾಣುತ್ತಾ ಸಾಗಿತ್ತು. ಈ ವಿನಿಮಯಕ್ಕೆ ಬರುತ್ತಿದ್ದ ಆದಾಯದಲ್ಲಿ ಸಿಂಹಪಾಲು ಬರುತ್ತಿದ್ದುದು ಸೋಯಾ ಎಣ್ಣೆಯ ರಫ್ತಿನಿಂದ. ಇದು ಬಿಟ್ಟರೆ, ತಾಳೆ ಎಣ್ಣೆ ರಫ್ತಿನಿಂದ. ಈ ವ್ಯವಹಾರವೂ ಸೊರಗಿದ್ದರಿಂದಾಗಿ 89 ಸಾವಿರ ಕೋಟಿ ರೂ. ಗಳಷ್ಟಿದ್ದ ವಿದೇಶಿ ವಿನಿಮಯದ ಆದಾಯ 73 ಸಾವಿರ ಕೋಟಿ ರೂ.ಗಳಿಗೆ ಇಳಿಯಿತು. ಇದೇ ಅವಧಿಯಲ್ಲಿ ರಫ್ತಿನಿಂದ ಬರುವ ಆದಾಯಕ್ಕಿಂತ ಆಮದಿಗಾಗಿ ದೇಶ ವ್ಯಯಿಸುವ ಹಣದ ಪ್ರಮಾಣ ಅಗಾಧವಾಗಿ ಹೆಚ್ಚಾಯಿತು. ಸದ್ಯಕ್ಕೆ, ರಫ್ತಿನಿಂದ ಬರುವ ಆದಾಯ 1.4 ಸಾವಿರ ಕೋಟಿ ರೂ.ಗಳಿದ್ದರೆ, ಆಮದಿಗಾಗಿ ಹೊರ ಹೋಗುತ್ತಿರುವ ಹಣ 1.1 ಲಕ್ಷ ಕೋ. ರೂ.ಗಳಿಷ್ಟಿದೆ. ಈ ಅಜಗಜಾಂತರದಿಂದಾಗಿ ಅಲ್ಲಿನ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಇಳಿಯಲಾರಂಭಿಸಿದೆ ಎಂದು ಮೂಲಗಳು ತಿಳಿಸಿವೆ.

ಲಂಕಾದಲ್ಲಿ ಹೆಚ್ಚು ಸಾವು ಸಂಭವ
ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾದಲ್ಲಿ ಅತ್ಯಗತ್ಯ ಔಷಧಗಳ ಕೊರತೆ ತೀವ್ರವಾಗಿ ಕಾಡುತ್ತಿದೆ. ಇದರಿಂದಾಗಿ, ಕೊರೊನಾ ಸಂದರ್ಭದಲ್ಲಿ ಉಂಟಾದ ಸಾವಿಗಿಂತ ಹೆಚ್ಚಿನ ಸಾವುಗಳು ಸಂಭವಿಸುವ ಸಾಧ್ಯತೆಗಳಿವೆ ಎಂದು ಅಲ್ಲಿನ ವೈದ್ಯರು, ಸರಕಾರವನ್ನು ಎಚ್ಚರಿಸಿದ್ದಾರೆ. ಪ್ರಸ್ತುತ ಆ ದೇಶ, ವಿದ್ಯುತ್‌ ಉತ್ಪಾದನೆ, ಆಹಾರ, ಇಂಧನ ಕೊರತೆಗಳನ್ನೂ ಎದುರಿಸುತ್ತಿದೆ.

ಮತ್ತೂಂದೆಡೆ ಲಂಕಾದ ಜನತೆ ಹಸಿವಿನಿಂದ ತತ್ತರಿಸುವ ಕಾಲ ಸನ್ನಿಹಿತವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಸರಕಾರಿ ನ್ಯಾಯ ಬೆಲೆ ಅಂಗಡಿಗಳ ಮುಂದೆ ದಿನವಿಡೀ ಸರದಿಯಲ್ಲಿ ಕಾಯುತ್ತಾ ನಿಂತರೂ ಅಗತ್ಯವಿರುವ ದಿನಸಿ ಸಿಗದಂತಾಗಿದೆ. ಖಾಸಗಿ ಮಾಲ್‌ಗ‌ಳಲ್ಲಿ ದಿನಸಿಯ ಬೆಲೆ ಮೂರು- ನಾಲ್ಕು ಪಟ್ಟು ಹೆಚ್ಚಾಗಿದೆ. ಆರ್ಥಿಕವಾಗಿ ಅನುಕೂಲವಿದ್ದವರು ಇವನ್ನು ಹೇರಳವಾಗಿ ಕೊಳ್ಳಲು ಮುಂದೆ ಬರುತ್ತಿದ್ದಾರಾದರೂ ಒಬ್ಬರಿಗೆ ಇಂತಿಷ್ಟೇ ದಿನಸಿ ಎಂದು ಸೀಮಿತಗೊಳಿಸಲಾಗಿದೆ. ಇನ್ನು ದೇಶಾದ್ಯಂತ ಡೀಸೆಲ್‌ ಬರ ಆವರಿಸಿರುವುದರಿಂದ ತರಕಾರಿಗಳ ಬೆಲೆ ಕೂಡ ಗಗನಕ್ಕೇರಿದೆ. ಹಳ್ಳಿಗಳಲ್ಲಿನ ರೈತರು ತಾವು ಬೆಳೆದ ತರಕಾರಿಗಳನ್ನು ಅವುಗಳ ಸಾಗಾಣಿಕೆಗೆ ಬೇರೆ ದಾರಿ ಕಾಣದೇ ತಾವೇ ತಿನ್ನುವಂತಾಗಿದೆ.

ಎಲ್‌ಟಿಟಿಇ ರೀತಿ ಬಿಕ್ಕಟ್ಟು ಅಂತ್ಯ!
ದೇಶವು ಆರ್ಥಿಕ ಬಿಕ್ಕಟ್ಟಿನಲ್ಲಿ ನಲುಗುತ್ತಿರುವ ನಡುವೆಯೇ ಸೋಮವಾರ ದೇಶವನ್ನುದ್ದೇಶಿಸಿ ಮಾತನಾಡಿರುವ ಶ್ರೀಲಂಕಾ ಪ್ರಧಾನಿ ಮಹೀಂದಾ ರಾಜಪಕ್ಸ, “ದೇಶದಲ್ಲಿ ಒಂದು ದಶಕದ ಹಿಂದೆ ಎಲ್‌ಟಿಟಿಇಯನ್ನು ಹೇಗೆ ನಾಶ ಮಾಡಿದೆವೋ ಅದೇ ಮಾದರಿಯಲ್ಲಿ ಈಗಿರುವ ಬಿಕ್ಕಟ್ಟನ್ನೂ ಅಂತ್ಯಗೊಳಿಸುತ್ತೇವೆ’ ಎಂದು ಘೋಷಿಸಿದ್ದಾರೆ. ಹುದ್ದೆ ಕಳೆದುಕೊಳ್ಳುವ ಭೀತಿಯ ನಡುವೆಯೇ ಟಿವಿ ಮೂಲಕ ಮಾತನಾಡಿರುವ ಅವರು, “ನಾವು ನಮ್ಮ ಆರ್ಥಿಕತೆಯನ್ನು ಬಲಪಡಿಸ ಬೇಕು. 30 ವರ್ಷಗಳ ಯುದ್ಧವನ್ನು ಅಂತ್ಯಗೊಳಿಸಿದ ರೀತಿಯಲ್ಲೇ ಈ ಸಮಸ್ಯೆಯನ್ನೂ ಪರಿಹರಿಸುವ ಜವಾಬ್ದಾರಿ ನನ್ನದು’ ಎಂದಿದ್ದಾರೆ. ನಮ್ಮ ಸರಕಾರ ರಸ್ತೆಗಳು, ಬಂದರುಗಳು, ಮೂಲಸೌಕರ್ಯಗಳನ್ನು ನಿರ್ಮಿಸಿವೆ. ಇದನ್ನೆಲ್ಲ ನಿರ್ಮಿಸಿದ್ದು ನನ್ನ ಜನರು ಬೀದಿಗಿಳಿದು ಪ್ರತಿಭಟನೆ ಮಾಡಬೇಕೆಂದು ಅಲ್ಲ ಎಂದೂ ಮಹೀಂದಾ ಹೇಳಿದ್ದಾರೆ.

ಎಲ್‌ಟಿಟಿಇ ಪುನಶ್ಚೇತನ ಯತ್ನ
ಶ್ರೀಲಂಕಾದ ನಿಷೇಧಿತ ಉಗ್ರ ಸಂಘಟನೆ ಎಲ್‌ಟಿಟಿಇಯನ್ನು ಮರುಸ್ಥಾಪಿಸಲು ಯತ್ನಿಸುತ್ತಿರುವ ನಾಲ್ವರು ಭಾರತೀಯರ 3.59 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. ಈ ನಾಲ್ವರು ಡ್ರಗ್ಸ್‌ ಮತ್ತು ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ಭಾಗಿಯಾಗಿ ಸಿಕ್ಕಿಬಿದ್ದಿದ್ದಾರೆ. ಕಳೆದ ವರ್ಷದ ಮಾರ್ಚ್‌ 18ರಂದು ಭಾರತೀಯ ಕರಾವಳಿ ರಕ್ಷಕ ಸಿಬಂದಿಯು ಶ್ರೀಲಂಕಾದ ದೋಣಿಯೊಂದನ್ನು ಜಪ್ತಿ ಮಾಡಿದಾಗ, 300 ಕೆಜಿ ಹೆರಾಯಿನ್‌, ಶಸ್ತ್ರಾಸ್ತ್ರಗಳು ಸಿಕ್ಕಿದ್ದವು. ಅದೇ ಪ್ರಕರಣ ಸಂಬಂಧ ಸುರೇಶ್‌ ರಾಜ್‌, ಸಬೇಶನ್‌, ರಮೇಶ್‌, ಸೌಂದರರಾಜನ್‌ ಎಂಬ ನಾಲ್ವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದೂ ಇ.ಡಿ. ಹೇಳಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.