ಬಾಂಬ್ ದಾಳಿಗೆ ನಡುಗಿದ ಲಂಕಾ : 8 ಕಡೆ ಸ್ಪೋಟ ; 162 ಸಾವು
ಓರ್ವ ಶಂಕಿತ ವಶಕ್ಕೆ ; ದ್ವೀಪ ರಾಷ್ಟ್ರಾದ್ಯಂತ ಕರ್ಫ್ಯೂ ; ಸೋಷಿಯಲ್ ಮೀಡಿಯಾ ಸೇವೆ ಬ್ಲಾಕ್
Team Udayavani, Apr 21, 2019, 3:51 PM IST
ಭಾರತೀಯ ರಾಯಭಾರಿ ಕಛೇರಿ ಸಹಾಯವಾಣಿ ಸಂಖ್ಯೆಗಳು: +94777903082, +94112422788, +94112422789, +94777902082, ಮತ್ತು +94772234176
ಕೊಲೊಂಬೋ: ಆದಿತ್ಯವಾರ ಬೆಳಗ್ಗಿನಿಂದ ಶ್ರೀಲಂಕಾ ರಾಜಧಾನಿ ಕೊಲಂಬೋ ಸುತ್ತಮುತ್ತ ಎಂಟು ಕಡೆಗಳಲ್ಲಿ ಬಾಂಬ್ ಸ್ಪೋಟ ಸಂಭವಿಸಿದ್ದು ಇದುವರೆಗೂ 162 ಜನರು ಈ ದಾಳಿಗೆ ಪ್ರಾಣ ತೆತ್ತಿದ್ದಾರೆ. ದುರ್ಘಟನೆಯಲ್ಲಿ 400ಕ್ಕೂ ಹೆಚ್ಚಿನ ಜನರು ಗಾಯಗೊಂಡಿದ್ದಾರೆ. ಇವರಲ್ಲಿ ವಿದೇಶಿಯರೂ ಸೇರಿದ್ದಾರೆ ಎಂದು ಹೇಳಲಾಗುತ್ತಿದೆ.
ಮೂರು ಚರ್ಚ್ಗಳು ಮತ್ತು ಮೂರು ಪಂಚತಾರಾ ಹೊಟೇಲುಗಳು ಸೇರಿದಂತೆ ಒಟ್ಟು ಆರು ಕಡೆ ಸ್ಪೋಟ ಸಂಭವಿಸಿದ ಬಳಿಕ ಇದೀಗ ಮತ್ತೆರಡು ಕಡೆ ಬಾಂಬ್ ಸ್ಪೋಟ ನಡೆದಿರುವ ಕುರಿತಾಗಿ ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಅದರಲ್ಲಿ ಒಂದು ಸ್ಪೋಟ ದೆಹಿವಲಾ ಪ್ರದೇಶದಲ್ಲಿ ನಡೆದಿದ್ದರೆ ಇನ್ನೊಂದು ಸ್ಪೋಟ ಡೆಮಟಗೋಡಾ ಪ್ರದೇಶದಲ್ಲಿ ನಡೆದಿದೆ.
ಸ್ಪೋಟ ನಡೆದ ಸ್ಥಳದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.
ಈ ಎರಡು ಸ್ಪೋಟಗಳಲ್ಲಿ ಒಂದು ಪ್ರಾಣಿ ಸಂಗ್ರಹಾಲಯ ಉದ್ಯಾನದಲ್ಲಿ ನಡೆದಿದ್ದರೆ ಇನ್ನೊಂದು ವಸತಿ ಸಮುಚ್ಛಯ ಪ್ರದೇಶದಲ್ಲಿ ನಡೆದಿದೆ. ಆದಿತ್ಯವಾರ ಸಾಯಂಕಾಲ 6 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ದೇಶಾದ್ಯಂತ ಕರ್ಫ್ಯೂ ವಿಧಿಸಲಾಗಿದೆ. ರಾಷ್ಟ್ರಾಧ್ಯಕ್ಷರ ಕಾರ್ಯದರ್ಶಿಯವರು ಸೋಮವಾರ ಮತ್ತು ಮಂಗಳವಾರಗಳಂದು ಸರಕಾರಿ ರಜೆ ಘೋಷಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಾಗಿರುವ ಫೇಸ್ಬುಕ್ ಮತ್ತು ವಾಟ್ಸ್ಯಾಪ್ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ