ಟರ್ಕಿಗೆ ಹೋಗುವ ಪ್ರವಾಸಿಗರಿಗೆ ದೂತವಾಸದ ಎಚ್ಚರಿಕೆ
ಕಾಶ್ಮೀರ ವಿಚಾರದಲ್ಲಿ ಪಾಕ್ ಪರ ಮಾತನಾಡಿದ ಟರ್ಕಿ ವಿರುದ್ಧ ಈಗ ಭಾರತದ ಮತ್ತೂಂದು ಗುದ್ದು
Team Udayavani, Oct 23, 2019, 5:59 PM IST
ಅಂಕಾರಾ: ಕಾಶ್ಮೀರ ವಿಚಾರದಲ್ಲಿ ಪಾಕಿಸ್ಥಾನದ ಪರ ಬ್ಯಾಟಿಂಗ್ ಮಾಡಿದ ಟರ್ಕಿ ವಿರುದ್ಧ ಭಾರತ ಈಗ ಒಂದೊಂದೇ ರಾಜತಾಂತ್ರಿಕ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಇದೀಗ ಭಾರತದ ದೂತವಾಸ ಭಾರತೀಯ ಪ್ರವಾಸಿಗರಿಗೆ ಎಚ್ಚರಿಕೆ ಸೂಚನೆಯನ್ನು ರವಾನಿಸಿದೆ. ಟರ್ಕಿಗೆ ಆಗಮಿಸುವ ಭಾರತೀಯ ಪ್ರವಾಸಿಗರಿಗೆ ಈ ಸೂಚನೆಯನ್ನು ಟ್ವಿಟರ್ನಲ್ಲಿ ಬಿಡುಗಡೆ ಮಾಡಲಾಗಿದೆ.
ಟರ್ಕಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಿದ್ದರೂ, ಭಾರತೀಯರು ಎಚ್ಚರವಾಗಿರಬೇಕೆಂದು ಹೇಳಲಾಗಿದೆ. ಅಲ್ಲದೇ ಹೆಚ್ಚಿನ ನೆರವು ಬೇಕಾದಲ್ಲಿ ಭಾರತೀಯ ದೂತವಾಸವನ್ನು ಸಂಪರ್ಕಿಸುವಂತೆ ಹೇಳಲಾಗಿದೆ.
ಕಳೆದ ಕೆಲವು ವರ್ಷಗಳಿಂದ ಟರ್ಕಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚುತ್ತಿದ್ದು ಆದಾಯವೂ ಹೆಚ್ಚಿದೆ. ಶೇ.56ರಷ್ಟು ಭಾರತೀಯ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಕಳೆದ ಜನವರಿಯಿಂದ ಜುಲೈ ಅವಧಿಯಲ್ಲಿ 1.30 ಲಕ್ಷ ಭಾರತೀಯರು ಟರ್ಕಿಗೆ ಭೇಟಿ ನೀಡಿದ್ದಾರೆ.
ಟರ್ಕಿ ಕಾಶ್ಮೀರ ವಿಚಾರದಲ್ಲಿ ಪಾಕಿಸ್ಥಾನ ಬೆಂಬಲಿಸಿ ಮಾತನಾಡಿದ ಬಳಿಕ ಎರಡೂ ರಾಷ್ಟ್ರಗಳ ನಡುವಿನ ಬಾಂಧವ್ಯ ಹದಗೆಟ್ಟಿದೆ. ಭಾರತ ಈ ಕಾರಣದಿಂದ ಟರ್ಕಿ ವಿರುದ್ಧ ರಾಜತಾಂತ್ರಿಕ ಕ್ರಮ ಕೈಗೊಳ್ಳಲಿದೆ ಎಂದು ಹೇಳಲಾಗುತ್ತಿತ್ತು. ಇತ್ತೀಚೆಗೆ 1 ಸಾವಿರ ಕೋಟಿ ರೂ. ಮೊತ್ತದ ಯುದ್ಧ ಹಡಗು ನಿರ್ಮಾಣ ಕುರಿತ ಗುತ್ತಿಗೆಯನ್ನು ಟರ್ಕಿ ಕಂಪೆನಿಗೆ ಕೊಡದಿರಲು ತೀರ್ಮಾನಿಸಲಾಗಿದೆ ಎಂದೂ ಹೇಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
Airstrike; ಅಫ್ಘಾನಿಸ್ಥಾನದಲ್ಲಿ ಪಾಕ್ನಿಂದ ವೈಮಾನಿಕ ದಾಳಿ: 8 ಸಾವು
Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!
America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು
Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…
MUST WATCH
ಹೊಸ ಸೇರ್ಪಡೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ