ವೈರಸ್‌ ತಡೆಗೆ ಮನೆಯಲ್ಲೇ ಇರಿ: ಬ್ರಿಟನ್‌ ನಾಗರಿಕರಿಗೆ ಪ್ರಧಾನಿ ಬೋರಿಸ್‌ ಜಾನ್ಸನ್‌ ಪತ್ರ


Team Udayavani, Mar 31, 2020, 2:19 AM IST

ವೈರಸ್‌ ತಡೆಗೆ ಮನೆಯಲ್ಲೇ ಇರಿ: ಬ್ರಿಟನ್‌ ನಾಗರಿಕರಿಗೆ ಪ್ರಧಾನಿ ಬೋರಿಸ್‌ ಜಾನ್ಸನ್‌ ಪತ್ರ

ಮಾರಕ ಕೋವಿಡ್ 19 ವೈರಸ್ ಸೋಂಕು ತಡೆಗೆ ನಾವು ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ನಿಮಗೆ ತಿಳಿಸಲೆಂದು ಈ ಪತ್ರ ಬರೆಯುತ್ತಿದ್ದೇನೆ. ಕೆಲವೇ ವಾರಗಳ ಅವಧಿಯಲ್ಲಿ ದೇಶದ ಜನಜೀವನ ನಾಟಕೀಯ ರೀತಿಯಲ್ಲಿ ಬದಲಾಗಿದೆ. ಕೋವಿಡ್ 19 ವೈರಾಣುವಿನ ಗಾಢ ಪರಿಣಾಮ ನಮ್ಮ ಮೇಲೆ ಮಾತ್ರವಲ್ಲ, ನಮ್ಮ ಪ್ರೀತಿಪಾತ್ರರು ಮತ್ತು ಸಮುದಾಯದ ಮೇಲೂ ಆಗಿದೆ.

ಈ ಅನಿರೀಕ್ಷಿತ ಅಡ್ಡಿಯಿಂದಾಗಿ ನಿಮ್ಮೆಲ್ಲರ ಜೀವನ, ವ್ಯವಹಾರಗಳು ಮತ್ತು ಉದ್ಯೋಗಗಳಿಗೆ ಏನೆಲ್ಲಾ ತೊಂದರೆಯಾಗಿದೆೆ ಎಂಬುದನ್ನು ಅರ್ಥ ಮಾಡಿಕೊಂಡಿದ್ದೇನೆ. ಆದರೆ, ಒಂದು ಸರಳ ಕಾರಣಕ್ಕಾಗಿ ನಾವೀಗ ಕೈಗೊಂಡಿರುವ ಕ್ರಮಗಳು ಅತ್ಯಂತ ಅನಿವಾರ್ಯ.

ಅಸಂಖ್ಯ ಜನರು ಏಕಕಾಲಕ್ಕೆ ಗಂಭೀರ ಅನಾರೋಗ್ಯಕ್ಕೆ ತುತ್ತಾದರೆ ಅಂತಹ ಪರಿಸ್ಥಿತಿಯನ್ನು ನಿಭಾಯಿಸಲು ಎನ್‌ಹೆಚ್‌ಎಸ್‌ನಿಂದ ಕಷ್ಟಸಾಧ್ಯ. ಇದು ಹಲವರ ಜೀವಕ್ಕೆ ಮುಳುವಾಗುತ್ತದೆ. ಹೀಗಾಗಿ ಸಾಧ್ಯವಾದಷ್ಟು ಜೀವಗಳನ್ನು ಉಳಿಸುವ ದೃಷ್ಟಿಯಿಂದ ವೈರಸ್‌ ಹರಡುವಿಕೆಯನ್ನು ನಾವು ನಿಯಂತ್ರಿಸಬೇಕು ಮತ್ತು ಆ ಮೂಲಕ ಸೋಂಕಿಗೆ ತುತ್ತಾಗುವವರ ಸಂಖ್ಯೆ ತಗ್ಗಿಸಲೇಬೇಕು. ಹಾಗಾಗಿ ನಾವು ನಿಮಗೆ ಒಂದು ಸರಳ ಸೂಚನೆ ನೀಡುತ್ತಿದ್ದೇವೆ- ಮನೆಯಲ್ಲೇ ಇರಿ, ಮನೆ ಬಿಟ್ಟು ಹೊರಬರಬೇಡಿ.

ನಿಮ್ಮ ಮನೆಯಲ್ಲಿ ವಾಸವಿಲ್ಲದೇ ಇರುವ ಸಂಬಂಧಿಗಳು ಅಥವಾ ಸ್ನೇಹಿತರನ್ನು ನೀವು ಭೇಟಿ ಆಗಲೇಬೇಡಿ. ಆಹಾರ ಮತ್ತು ಔಷಧ ಖರೀದಿಸಲು ಮತ್ತು ವೈದ್ಯಕೀಯ ಅಗತ್ಯ ಸೇರಿ ಅನಿವಾರ್ಯ ಸಂದರ್ಭದಲ್ಲಿ ಮಾತ್ರ ನೀವು ಮನೆಯಿಂದ ಹೊರ ಹೋಗ ಬೇಕು. ಕೆಲಸ ಮಾಡುವುದಕ್ಕಾಗಿ ನೀವು ಪ್ರಯಾಣಿಸಬಹುದು ಆದರೆ, ದಯವಿಟ್ಟು ಮನೆಯಿಂದಲೇ ಕೆಲಸ ಮಾಡಿ. ಒಂದೊಮ್ಮೆ ನೀವು ಮನೆಯಿಂದ ಹೊರಬಂದರೂ ಇತರೆ ವ್ಯಕ್ತಿಗಳಿಂದ ಕನಿಷ್ಠ ಎರಡು ಮೀಟರ್‌ ಅಂತರ ಕಾಯ್ದುಕೊಳ್ಳಲು ಮರೆಯಬೇಡಿ.

ಈ ನಿಯಮಗಳ ಪಾಲನೆ ಕಡ್ಡಾಯವಾಗಿದ್ದು, ನಿಯಮ ಉಲ್ಲಂ ಸುವ ಸಾರ್ವಜನಿಕರಿಗೆ ಪೊಲೀಸರು ದಂಡ ವಿಧಿಸುತ್ತಾರೆ ಮತ್ತು ಗುಂಪುಗಳನ್ನು ಚದುರಿಸುತ್ತಾರೆ. ಈ ಪರಿಸ್ಥಿತಿಯಿಂದ ನಿಮಗೆ ಉಂಟಾಗಬಹುದಾದ ಆರ್ಥಿಕ ಸಮಸ್ಯೆ ಬಗ್ಗೆ ಬಹಳಷ್ಟು ಮಂದಿ ಚಿಂತಾಕ್ರಾಂತರಾಗಿದ್ದೀರಿ ಎಂಬುದು ನನಗೆ ಗೊತ್ತು. ಆದರೆ, ಎಲ್ಲರ ಹಸಿವು ನೀಗಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸರಕಾರ ಸಿದ್ಧವಿದೆ ಎಂಬ ಭರವಸೆ ನೀಡುತ್ತೇನೆ.

ಸೋಂಕು ನಿಯಂತ್ರಣಕ್ಕೆ ಆರಂಭದಿಂದಲೂ ಅಗತ್ಯವಿದ್ದ ಎಲ್ಲ ಕ್ರಮಗಳನ್ನು ನಾವು ಕೈಗೊಂಡಿದ್ದೇವೆ. ಹಾಗೇ, ಮುಂದೆ ಪರಿಸ್ಥಿತಿಗೆ ಅನುಗುಣವಾಗಿ ತಜ್ಞರು, ವಿಜ್ಞಾನಿಗಳು ನೀಡುವ ಸಲಹೆಯಂತೆ ಎಂತಹ ಕಠಿಣ ನಿರ್ಧಾರವನ್ನಾದರೂ ಕೈಗೊಳ್ಳಲು ಸಿದ್ಧರಾಗಿದ್ದೇವೆ.

ವೈರಸ್‌ನ ಪರಿಣಾಮ ತಗ್ಗಿಸಲು ಹೋರಾಡುತ್ತಿರುವ ಎಲ್ಲರಿಗೂ, ವಿಶೇಷವಾಗಿ ಎನ್‌ಎಚ್‌ಎಸ್‌ ಸಿಬಂದಿಗೆ ಈ ಸಂದರ್ಭದಲ್ಲಿ ಧನ್ಯವಾದ ಹೇಳಲು ನಾನು ಬಯಸುತ್ತೇನೆ. ರಾಷ್ಟ್ರೀಯ ತುರ್ತು ಪರಿಸ್ಥಿತಿಯ ಈ ಸಂದರ್ಭದಲ್ಲಿ ದಯವಿಟ್ಟು ಮನೆಯಲ್ಲೇ ಇರಿ, ಜೀವಗಳನ್ನು ರಕ್ಷಿಸಿ ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.