ಎಸ್ಯಾಟ್ ತ್ಯಾಜ್ಯ: ನಾಸಾ ವಿರುದ್ಧ ಕಿಡಿ
Team Udayavani, Apr 3, 2019, 6:30 AM IST
ವಾಷಿಂಗ್ಟನ್: ಭಾರತವು ಇತ್ತೀಚೆಗೆ ನಡೆಸಿದ ಉಪಗ್ರಹ ನಿಗ್ರಹ ಕ್ಷಿಪಣಿ (ಎಸ್ಯಾಟ್) ಪರೀಕ್ಷೆಯಿಂದಾಗಿ ಬಾಹ್ಯಾಕಾಶದಲ್ಲಿ ಸುಮಾರು 400ರಷ್ಟು ತ್ಯಾಜ್ಯಗಳು ಸೃಷ್ಟಿಯಾಗಿದ್ದು, ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ ಹಾಗೂ ಅದರಲ್ಲಿರುವ ಗಗನಯಾತ್ರಿಗಳಿಗೂ ಅಪಾಯ ತಂದೊಡ್ಡಿದೆ ಎಂದು ನಾಸಾ ಮಂಗಳವಾರ ಹೇಳಿದೆ. ನಾಸಾ ಹೇಳಿಕೆಗೆ ಭಾರತೀಯ ಬಾಹ್ಯಾಕಾಶ ಹಾಗೂ ಕ್ಷಿಪಣಿ ತಜ್ಞರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಮಾತನಾಡಿದ ನಾಸಾ ಮುಖ್ಯಸ್ಥ ಜಿಮ್ ಬ್ರೈಡೆನ್ಸ್ಟೈನ್, “ನಾವು ಈವರೆಗೆ ಸುಮಾರು 60 ಬಾಹ್ಯಾಕಾಶ ತ್ಯಾಜ್ಯವನ್ನು ಟ್ರ್ಯಾಕ್ ಮಾಡಿದ್ದೇವೆ. ಆ ಪೈಕಿ 24 ತ್ಯಾಜ್ಯಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದ ಮೇಲ್ಭಾಗದತ್ತ ತೆರಳುತ್ತಿವೆ. ಒಟ್ಟಾರೆ ಭಾರತದ ಎಸ್ಯಾಟ್ ಪರೀಕ್ಷೆಯಿಂದ 400ರಷ್ಟು ತ್ಯಾಜ್ಯಗಳು ಸೃಷ್ಟಿಯಾಗಿದ್ದು, ಅವುಗಳಲ್ಲಿ ಕೆಲವು ಅಲ್ಪಗಾತ್ರದ್ದಾದ್ದರಿಂದ ಎಲ್ಲವನ್ನೂ ಟ್ರ್ಯಾಕ್ ಮಾಡಲು ಸಾಧ್ಯವಿಲ್ಲ. 10 ಸೆಂಟಿ ಮೀಟರ್ ಮತ್ತು ಅದಕ್ಕಿಂತ ದೊಡ್ಡ ತ್ಯಾಜ್ಯಗಳನ್ನಷ್ಟೇ ನಾವು ಗಮನಿಸುತ್ತಿದ್ದೇವೆ’ ಎಂದು ಹೇಳಿದ್ದಾರೆ.
ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಆರ್ಡಿಒ ಮುಖ್ಯಸ್ಥ ವಿ.ಕೆ.ಸಾರಸ್ವತ್, “ಲಕ್ಷಾಂತರ ತ್ಯಾಜ್ಯಗಳು ಈಗಾಗಲೇ ಬಾಹ್ಯಾಕಾಶದಲ್ಲಿ ಚಲಿಸುತ್ತಿವೆ. ಅದರಿಂದ ಐಎಸ್ಎಸ್ಗೆ ಯಾವುದೇ ತೊಂದರೆ ಆಗುತ್ತಿಲ್ಲವೇ?’ ಎಂದು ಪ್ರಶ್ನಿಸಿದ್ದಾರೆ. ಇನ್ನು ಡಿಆರ್ಡಿಒ ಮಾಜಿ ವಿಜ್ಞಾನಿ ರವಿ ಗುಪ್ತಾ ಮಾತನಾಡಿ, ನಾಸಾ ಮುಖ್ಯಸ್ಥರ ಇಂಥ ಹೇಳಿಕೆ ತಾರತಮ್ಯ ಹಾಗೂ ಬೇಜವಾಬ್ದಾರಿಯಿಂದ ಕೂಡಿದ್ದು. ಭಾರತವು 300 ಕಿ.ಮೀ. ಎತ್ತರದಲ್ಲಿ ಈ ಪರೀಕ್ಷೆ ನಡೆಸಿದೆ.
ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರವು ಇನ್ನೂ ಎಷ್ಟೋ ಎತ್ತರದಲ್ಲಿದೆ. ತ್ಯಾಜ್ಯಗಳು ಮೇಲಕ್ಕೆ ಹೋಗುವುದೇ ಕಡಿಮೆ. ಒಂದು ವೇಳೆ ಹೋದರೂ, ಶಕ್ತಿ ಕಳೆದುಕೊಂಡು ಕೆಳಕ್ಕೆ ಬೀಳಲಿವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ