ಸಾಂಪ್ರದಾಯಿಕ ಆಯುಧ ಪೂಜೆ ನಡೆಸಿ ರಫೇಲ್ ನಲ್ಲಿ ಮೊದಲ ಹಾರಾಟ ನಡೆಸಿದ ರಾಜನಾಥ್ ಸಿಂಗ್
ಯುದ್ಧವಿಮಾನದ ಮೇಲೆ ‘ಓಂ’ ಬರೆದು ; ಚಕ್ರಗಳಿಗೆ ಲಿಂಬೆ ಹಣ್ಣು ಇರಿಸಿ ಪೂಜೆ ಸಲ್ಲಿಸಿದ ರಕ್ಷಣಾ ಸಚಿವರು
Team Udayavani, Oct 8, 2019, 8:03 PM IST
ಪ್ಯಾರಿಸ್: ದೇಶದ ವಾಯುಪಡೆಗೆ ವಿಶೇಷ ಬಲ ತುಂಬಲಿರುವ ಅತ್ಯಾಧುನಿಕ ಮಾದರಿಯ ರಫೇಲ್ ಯುದ್ಧವಿಮಾನವನ್ನು ಭಾರತಕ್ಕೆ ಹಸ್ತಾಂತರಿಸುವ ಔಪಚಾರಿಕ ಪ್ರಕ್ರಿಯೆ ಫ್ರಾನ್ಸ್ ನ ಮೆರಿಗ್ನ್ಯಾಕ್ ನಲ್ಲಿ ಯಶಸ್ವಿಯಾಗಿ ನೆರವೇರಿತು.
ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ರಫೇಲ್ ಡಸಾಲ್ಟ್ ಕಂಪೆನಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಎರಿಕ್ ಟ್ರ್ಯಾಪಿಯರ್ ಅವರು ಮೊದಲ ರಫೇಲ್ ಯುದ್ಧ ವಿಮಾನವನ್ನು ಅಧಿಕೃತವಾಗಿ ಹಸ್ತಾಂತರಿಸಿದರು.
ಪ್ರಥಮ ರಫೇಲ್ ವಿಮಾನವನ್ನು ಸ್ವೀಕರಿಸಿದ ಬಳಿಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ಯುದ್ಧ ವಿಮಾನಕ್ಕೆ ಆಯುಧ ಪೂಜೆಯನ್ನು ನೆರವೇರಿಸಿದರು. ವಿಮಾನದ ಎದುರು ಭಾಗದಲ್ಲಿ ‘ಓಂ’ ಎಂದು ಕುಂಕುಮದಲ್ಲಿ ಬರೆದ ಸಿಂಗ್ ಬಳಿಕ ವಿಮಾನದ ಚಕ್ರಗಳಿಗೆ ಲಿಂಬೆ ಹಣ್ಣನ್ನು ಮತ್ತು ವಿಮಾನದ ಎದುರು ಭಾಗದಲ್ಲಿ ತೆಂಗಿನ ಕಾಯಿಯನ್ನು ಇರಿಸಿ ಸಾಂಪ್ರದಾಯಿಕ ರೀತಿಯಲ್ಲೇ ಈ ವಿಮಾನಕ್ಕೆ ಆಯುಧ ಪೂಜೆಯನ್ನು ನೆರವೇರಿಸಿದ್ದು ವಿಶೇಷವಾಗಿತ್ತು.
ಬಳಿಕ ರಾಜನಾಥ್ ಸಿಂಗ್ ಅವರು ರಫೇಲ್ ಯುದ್ಧ ವಿಮಾನವನ್ನು ಏರಿ ಅದರಲ್ಲಿ ಹಾರಾಟ ನಡೆಸಿದರು. ಪೈಲಟ್ ಫಿಲಿಪ್ ಡ್ಯುಶಾಟ್ ಅವರು ರಕ್ಷಣಾ ಸಚಿವರಿದ್ದ ಈ ರಫೇಲ್ ಅನ್ನು ಚಲಾಯಿಸಿದರು. ಈ ಮೂಲಕ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಥಮ ರಕ್ಷಣಾ ಸಚಿವರೆಂಬ ಹೆಗ್ಗಳಿಕೆಗೆ ರಾಜನಾಥ್ ಸಿಂಗ್ ಅವರು ಪಾತ್ರರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
Airstrike; ಅಫ್ಘಾನಿಸ್ಥಾನದಲ್ಲಿ ಪಾಕ್ನಿಂದ ವೈಮಾನಿಕ ದಾಳಿ: 8 ಸಾವು
Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!
America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು
Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…