ತೆಹ್ರಾನ್ ವೈದ್ಯಕೀಯ ಕೇಂದ್ರದಲ್ಲಿ ಅನಿಲ ಸೋರಿಕೆ-ಸ್ಪೋಟ: 19 ಮಂದಿ ದುರ್ಮರಣ
Team Udayavani, Jul 1, 2020, 8:07 AM IST
ತೆಹ್ರಾನ್: ಇರಾನಿನ ರಾಜಧಾನಿ ತೆಹ್ರಾನ್ ನ ಉತ್ತರದ ವೈದ್ಯಕೀಯ ಚಿಕಿತ್ಸಾಲಯವೊಂದರಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ 19 ಜನರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಮಾಧ್ಯಮ ವರದಿ ಮಾಡಿದೆ.
ಅನಿಲ ಸೋರಿಕೆಯೇ ಸ್ಫೋಟಕ್ಕೆ ಕಾರಣ ಎಂದು ತೆಹ್ರಾನ್ ಉಪ ಗವರ್ನರ್ ಹಮೀದ್ ರೆಜಾ ಗೌಡಾರ್ಜಿ ತಿಳಿಸಿದ್ದಾರೆ. ಈ ಮೊದಲು ಅವಘಡದಲ್ಲಿ 13 ಜನರು ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದರು. ಆದರೆ ತೆಹ್ರಾನ್ ಅಗ್ನಿಶಾಮಕ ಇಲಾಖೆಯ ವಕ್ತಾರ ಜಲಾಲ್ ಮಲೇಕಿ ಸಾವಿಗೀಡಾದವರ ಸಂಖ್ಯೆ 19ಕ್ಕೆ ಏರಿಕೆಯಾಗಿದ್ದು, ಬೆಂಕಿಯನ್ನು ನಂದಿಸಲಾಗಿದೆ ಎಂದು ತಿಳಿಸಿದ್ದಾರೆ.
Iran: Reports of another explosion in northern Tehran today at a clinic near Tajrish square. Details still unclear.
Just a few days ago another explosion happened near military sites in eastern Tehran. #Iran pic.twitter.com/xeZaRvcVaK
— Negar Mortazavi نگار مرتضوی (@NegarMortazavi) June 30, 2020
ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸ್ಪೋಟದ ನಂತರ ಅಗ್ನಿಶಾಮಕ ಸಿಬ್ಬಂದಿ ಕಟ್ಟಡ ಹತ್ತಿ ಕೆಲವರನ್ನು ರಕ್ಷಿಸಿದ್ದಾರೆ. ವೈದ್ಯಕೀಯ ಕೇಂದ್ರದಲ್ಲಿ ಆಕ್ಷಿಜನ್ ತುಂಬಿದ ಟ್ಯಾಂಕ್ ಗಳಿದ್ದವು. ಮಾತ್ರವಲ್ಲದೆ 25ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಹಲವು ಬಾರಿ ಸ್ಪೋಟ ಸಂಭವಿಸಿದ್ದು, ಕಟ್ಟಡ ಪೂರ್ತಿ ಬೆಂಕಿ ವ್ಯಾಪಿಸಿದೆ.
#Maryam_Rajavi Mydeepest sympathies go out to the families of the victims, particularly the patients,who lost their lives in the catastrophic fire inTehran’s Sina Clinic My heartfelt condolencesto all the people of #Tehran.Wishing quick recovery of those hurt &injured in the fire pic.twitter.com/6QxbwM6cB0
— Parvin farazmand (@parvinfarazmand) June 30, 2020
ಕಳೆದ ವಾರ, ತೆಹ್ರಾನ್ ಬಳಿಯ ಸೂಕ್ಷ್ಮ ಮಿಲಿಟರಿ ಸ್ಥಳವೊಂದರ ಬಳಿಯ ಅನಿಲ ಸಂಗ್ರಹಣಾ ಕೇಂದ್ರದಲ್ಲಿ ಟ್ಯಾಂಕ್ ಸೋರಿಕೆಯಾಗಿ ಸ್ಫೋಟ ಸಂಭವಿಸಿತ್ತು. ಆದರೆ ಯಾವುದೇ ಸಾವು ನೋವು ಸಂಭವಿಸಿರಲಿಲ್ಲ ಎಂದು ರಕ್ಷಣಾ ಸಚಿವಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ