ನಾನೇ ಸೌದಿ ರಾಜಕುಮಾರ…30 ವರ್ಷಗಳ ಕಾಲ ಜನರನ್ನು ವಂಚಿಸಿದ್ದ ವ್ಯಕ್ತಿಗೆ 18 ವರ್ಷ ಜೈಲು!


Team Udayavani, Jun 1, 2019, 4:17 PM IST

Prinice

ವಾಷಿಂಗ್ಟನ್:ಬರೋಬ್ಬರಿ 30 ವರ್ಷಗಳ ಕಾಲ ಸೌದಿ ಅರೇಬಿಯಾದ ರಾಜಕುಮಾರ ಎಂದೇ ಹೇಳಿಕೊಂಡು 8 ಮಿಲಿಯನ್ ಅಮೆರಿಕನ್ ಡಾಲರ್ ನಷ್ಟು ಹಣವನ್ನು ವಂಚಿಸಿದ್ದ ನಕಲಿ ರಾಜ ಕೊನೆಗೂ ಸಿಕ್ಕಿಬಿದ್ದಿದ್ದು, ವಂಚನೆ ಆರೋಪದ ಮೇಲೆ 18 ವರ್ಷ ಜೈಲುಶಿಕ್ಷೆಗೆ ಒಳಗಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಸೌದಿ ರಾಜಕುಮಾರ ಬಟ್ಟೆ ಧರಿಸುತ್ತಿದ್ದ, ಸೌದಿ ರಾಜಕುಮಾರ ಐಶಾರಾಮಿ ಬದುಕು, ಸುತ್ತ-ಮುತ್ತ ಅಂಗರಕ್ಷಕರು, ಸೌದಿ ರಾಜಮನೆತನಕ್ಕೆ ಸಂಬಂಧಪಟ್ಟ ಗುರುತುಪತ್ರ ಎಲ್ಲವನ್ನೂ ಹೊಂದಿದ್ದ. ಆದರೆ ಅವೆಲ್ಲವೂ ನಕಲಿಯಾಗಿತ್ತು.

ತಾನು ಸೌದಿ ಅರೇಬಿಯಾದ ಖಾಲಿದ್ ಬಿನ್ ಅಲ್ ಸೌದ್ ಎಂಬುದಾಗಿ ಹೇಳಿಕೊಂಡು ಮಿಯಾಮಿಯ ಫಿಶರ್ ಐಲ್ಯಾಂಡ್ ನಲ್ಲಿ ಐಶಾರಾಮಿಯಾಗಿ ವಾಸಿಸುತ್ತಿದ್ದ 48 ವರ್ಷದ ಆ್ಯಂಥೋನಿ ಗಿಗ್ನ್ಯಾಕ್! ನಕಲಿ ರಾಜತಾಂತ್ರಿಕ ಲೈಸೆನ್ಸ್ ನಂಬರ್ ಪ್ಲೇಟ್ ಹೊಂದಿರುವ ಫೆರಾರಿ ಕಾರಿನಲ್ಲಿ ಸುತ್ತಾಡುತ್ತಿದ್ದ. ಹೀಗೆ ಸೌದಿ ರಾಜ ಎಂದು ಬಿಂಬಿಸಿಕೊಂಡು ಹೂಡಿಕೆದಾರರನ್ನು, ಜನರನ್ನು ವಂಚಿಸುತ್ತಿದ್ದ!

ನಕಲಿ ಕಾಗದಪತ್ರಗಳ ಮೂಲಕ ಅಂಗರಕ್ಷಕರನ್ನು ಜೊತೆಗಿಟ್ಟುಕೊಂಡು ತಿರುಗಾಡುತ್ತಿದ್ದ ಈ ನಕಲಿ ಸೌದಿ ರಾಜಕುಮಾರ, ತನ್ನ ರಾಯಲ್ ಪ್ರೋಟೊಕಾಲ್ ಪ್ರಕಾರ ಆತಿಥ್ಯ ನೀಡಬೇಕೆಂದು ಬೇಡಿಕೆ ಇಡುತ್ತಿದ್ದ ಎಂದು ವರದಿ ವಿವರಿಸಿದೆ.

ಗಿಗ್ನ್ಯಾಕ್ ಮಾತಿಗೆ ಮರುಳಾಗಿ ದೊಡ್ಡ, ದೊಡ್ಡ ಕುಳಗಳು ಆತನ ಖಾತೆಗೆ ಹಣವನ್ನು ಡೆಪಾಸಿಟ್ ಮಾಡುತ್ತಿದ್ದರಂತೆ! ಆ ಹಣದಿಂದ ಈತ ಸೌದಿ ರಾಜಕುಮಾರನಂತೆಯೇ ಧಿರಿಸು ಹೊಲಿಸಿಕೊಂಡು, ಖಾಸಗಿ ಜೆಟ್ , ಐಶಾರಾಮಿ ಕಾರಿನಲ್ಲಿ ಸಂಚರಿಸುತ್ತಿದ್ದ!

ಕೊಲಂಬಿಯಾದಲ್ಲಿ ಜನಿಸಿದ್ದ ಗಿಗ್ನ್ಯಾಕ್ ನನ್ನು ಮಿಚಿಗನ್ ನ ಕುಟುಂಬವೊಂದು ದತ್ತು ತೆಗೆದುಕೊಂಡಿತ್ತು. 17-18 ವರ್ಷದವನಾಗಿದ್ದಾಗಲೇ ಹಲವಾರು ವಂಚನೆ ಪ್ರಕರಣಗಳಲ್ಲಿ ಗಿಗ್ನ್ಯಾಕ್ ಬಂಧನಕ್ಕೊಳಗಾಗಿದ್ದ.

ಸಿಕ್ಕಿಬಿದ್ದದ್ದು ಹೇಗೆ?

ರಿಯಲ್ ಎಸ್ಟೇಟ್ ನಲ್ಲಿ ಹಣ ಹೂಡುವುದಾಗಿ ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡಿದ್ದ ಗಿಗ್ನ್ಯಾಕ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಕೈಯಲ್ಲಿಯೇ ಸಿಕ್ಕಿಹಾಕಿಕೊಂಡಿದ್ದ. ಹೇಗೆ ಗೊತ್ತಾ..ಗಿಗ್ನ್ಯಾಕ್ ಐಶಾರಾಮಿ ಹೋಟೆಲ್ ನಲ್ಲಿ ಹಂದಿಯ ತೊಡೆ ಮಾಂಸ, ಹಂದಿ ಮಾಂಸದ ಚಿಲ್ಲಿ ತಿನ್ನುತ್ತಿದ್ದ. ಸೌದಿ ಪ್ರಿನ್ಸ್ ಇಸ್ಲಾಂ ಪ್ರಕಾರ ಹಂದಿ ಮಾಂಸ ಸೇವನೆ ನಿಷಿದ್ಧ! ಇದರಿಂದಾಗಿ ಈತನ ಬಗ್ಗೆ ಅನುಮಾನ ಶುರುವಾಗಿತ್ತು ಎಂದು ಮಿಯಾಮಿ ಹೆರಾಲ್ಡ್ ವರದಿ ಮಾಡಿದೆ.

ಅಂತೂ ನಕಲಿ ಸೌದಿ ರಾಜಕುಮಾರನ ಮುಖವಾಡ ಕಳಚಿ ಬೀಳುತ್ತಿದ್ದಂತೆಯೇ 2017ರ ನವೆಂಬರ್ 17ರಂದು 18 ಕೌಂಟ್ಸ್ ಆರೋಪದಡಿ ಆ್ಯಂಥೋನಿ ಗಿಗ್ನ್ಯಾಕ್ ನನ್ನು ಬಂಧಿಸಿದ್ದರು. ಈತನ ವಿರುದ್ಧ ವಿದ್ಯುನ್ಮಾನ ವಂಚನೆ ಮತ್ತು ನಕಲಿ ಗುರುತಿನ ಮೂಲಕ ವಂಚಿಸಿರುವುದು ಸೇರಿದಂತೆ ಹಲವಾರು ಆರೋಪಗಳನ್ನು ದಾಖಲಿಸಿದ್ದರು.

ಕಳೆದ ಮೂರು ದಶಕಗಳ ಕಾಲ ಆ್ಯಂಥೋನಿ ಗಿಗ್ನ್ಯಾಕ್ ತನ್ನನ್ನು ತಾನು ಸೌದಿ ರಾಜ ಎಂದು ಬಿಂಬಿಸಿಕೊಂಡು ಜಗತ್ತಿನಾದ್ಯಂತ ಹೂಡಿಕೆದಾರರಿಗೆ ಹಲವಾರು ವಿಧದಲ್ಲಿ ವಂಚಿಸಿರುವುದಾಗಿ ಅಮೆರಿಕಾದ ಅಟಾರ್ನಿ ಅರಿಯಾನಾ ಫಜಾರ್ಡೋ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.