ಉಯಿಘರ್ ಮುಸ್ಲಿಂ ಜನಸಂಖ್ಯೆ ನಿಗ್ರಹಕ್ಕೆ ಬಲವಂತದ ಗರ್ಭಪಾತ
Team Udayavani, Jun 30, 2020, 8:35 AM IST
ಬೀಜಿಂಗ್: ದೇಶದಲ್ಲಿನ ಮುಸ್ಲಿಂ ಜನಸಂಖ್ಯೆಯನ್ನು ನಿಗ್ರಹಿಸುವ ವ್ಯಾಪಕ ಅಭಿಯಾನದ ಅಂಗವಾಗಿ ಉಯಿಘರ್ ಮತ್ತು ಇತರ ಅಲ್ಪಸಂಖ್ಯಾಕರಲ್ಲಿ ಜನನದ ಪ್ರಮಾಣವನ್ನು ಕಡಿತಗೊಳಿಸಲು ಚೀನ ಸರಕಾರ ಕಠಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಲ್ಲದೆ, ದೇಶದ ಬಹುಸಂಖ್ಯಾಕ ಹ್ಯಾನ್ ಸಮುದಾಯದವರಿಗೆ ಹೆಚ್ಚಿನ ಮಕ್ಕಳನ್ನು ಹೊಂದಲು ಉತ್ತೇಜನ ನೀಡುತ್ತಿದೆ. ಈ ಅಭಿಯಾನವನ್ನು ಈಗ ಹಿಂದಿಗಿಂತ ಹೆಚ್ಚು ವ್ಯಾಪಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ. ಅದರಲ್ಲೂ ವಿಶೇಷವಾಗಿ, ಉಯಿಘರ್ ಸ್ವಾಯತ್ತ ಪ್ರದೇಶವಾಗಿರುವ ಕ್ಸಿನ್ಜಿಯಾಂಗ್ ಪ್ರಾಂತ್ಯದಲ್ಲಿ ಇದು ಹೆಚ್ಚಿದೆ. ಇಲ್ಲಿನ ಅಲ್ಪಸಂಖ್ಯಾಕ ಮಹಿಳೆಯರನ್ನು ನಿಯಮಿತವಾಗಿ ಗರ್ಭಧಾರಣೆಯ ತಪಾಸಣೆಗೆ ಒಳಪಡಿಸಲಾಗುತ್ತದೆ. ಅವರಿಗೆ ಗರ್ಭನಿರೋಧಕ ಬಳಸಲು ಆಗ್ರಹಿಸಲಾಗುತ್ತದೆ. ಸಂತಾನ ಶಕ್ತಿಹರಣ ಹಾಗೂ ಬಲವಂತದ ಗರ್ಭಪಾತಕ್ಕೆ ಒತ್ತಾಯಿಸಲಾಗುತ್ತದೆ.
ಹೆಚ್ಚಿನ ಮಕ್ಕಳನ್ನು ಹೊಂದಿರುವವರನ್ನು ನಿರಾಶ್ರಿತರ ಶಿಬಿರಗಳಲ್ಲಿ ಬಲವಂತದ ಬಂಧನಕ್ಕೆ ಒಳಪಡಿಸಲಾಗುತ್ತದೆ. ಮೂರಕ್ಕಿಂತ ಹೆಚ್ಚಿನ ಮಕ್ಕಳಿದ್ದರೆ ದೊಡ್ಡ ಮೊತ್ತದ ದಂಡ ವಿಧಿಸಲಾಗುತ್ತದೆ. ಪೊಲೀಸರು ಮನೆಗಳ ಮೇಲೆ ಆಗಾಗ ದಾಳಿ ಮಾಡಿ, ಹೆಚ್ಚಿನ ಮಕ್ಕಳಿರುವ ಪೋಷಕರನ್ನು ಬೆದರಿಸುತ್ತಾರೆ. ಇಂಥ ಬಲವಂತದ ಜನಸಂಖ್ಯಾ ನಿಯಂತ್ರಣ, ಒಂದು ರೀತಿಯ ಜನಾಂಗೀಯ ಹತ್ಯಾಕಾಂಡದ ರೂಪ ಎಂದು “ಅಸೋಸಿಯೇಟೆಡ್ ಪ್ರಸ್’ ವರದಿ ಮಾಡಿದೆ. ಈ ಮಧ್ಯೆ, 2015-18ರ ಅವಧಿಯಲ್ಲಿ ಉಯಿಘರ್ ಪ್ರಾಂತ್ಯದ ಹೋಟನ್ ಮತ್ತು ಕಾಶರ್ ವಲಯಗಳಲ್ಲಿ ಜನನ ಪ್ರಮಾಣ ಶೇ.60ರಷ್ಟು ಕುಸಿದಿದೆ ಎಂಬುದನ್ನು ಚೀನ ಸರಕಾರದ ಅಂಕಿ-ಅಂಶಗಳೇ ಹೇಳುತ್ತವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ