ಎದೆಗೆ ಗುಂಡೇಟು: ಜಪಾನ್ ನಲ್ಲಿ ಅತೀ ಹೆಚ್ಚು ಕಾಲ ಆಳ್ವಿಕೆ ನಡೆಸಿದ ಶಿಂಜೋ ಅಬೆ ಇನ್ನಿಲ್ಲ!


Team Udayavani, Jul 8, 2022, 2:24 PM IST

ಎದೆಗೆ ಗುಂಡೇಟು: ಜಪಾನ್ ನಲ್ಲಿ ಅತೀ ಹೆಚ್ಚು ಕಾಲ ಆಳ್ವಿಕೆ ನಡೆಸಿದ ಶಿಂಜೋ ಅಬೆ ಇನ್ನಿಲ್ಲ!

ಟೋಕಿಯೋ: ಜಪಾನ್ ದೇಶವನ್ನು ಅತೀ ಹೆಚ್ಚು ಕಾಲ ಆಳ್ವಿಕೆ ನಡೆಸಿದ್ದ ಮಾಜಿ ಪ್ರಧಾನಿ ಶಿಂಜೋ ಅಬೆ ಅವರು ಇಂದು ಮೃತರಾಗಿದ್ದಾರೆ. ನಾರಾ ನಗರದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಅವರು ಗುಂಡೇಟಿಗೆ ಬಲಿಯಾಗಿದ್ದಾರೆ.

ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ 67 ವರ್ಷದ ಶಿಂಜೋ ಅಬೆ ಅವರ ಎದೆಗೆ ಗುಂಡು ಹಾರಿಸಲಾಗಿದೆ. ಕುಸಿದು ಬಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಹಲವು ಗಂಟೆಗಳ ಕಾಲ ಸಾವು ಬದುಕಿನ ಹೋರಾಟ ನಡೆಸಿದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ.

1954ರ ಸೆಪ್ಟೆಂಬರ್ 21ರಂದು ಜನಿಸಿದ್ದ ಶಿಂಜೋ ಅಬೆ ಅವರು ಜಪಾನ್ ನಲ್ಲಿ ಅತೀ ಹೆಚ್ಚು ಕಾಲ ಆಳ್ವಿಕೆ ಮಾಡಿದ ಪ್ರಧಾನಿ ಎಂಬ ಹೆಗ್ಗಳಿಕೆ ಹೊಂದಿದ್ದಾರೆ.

ಯುದ್ಧಪೂರ್ವ, ಯುದ್ಧಕಾಲ ಮತ್ತು ಯುದ್ಧಾನಂತರದ ಜಪಾನ್‌ ನಾದ್ಯಂತ ಗಮನಾರ್ಹ ಆರ್ಥಿಕ ಪ್ರಭಾವವನ್ನು ಹೊಂದಿರುವ ಪ್ರಮುಖ ರಾಜಕೀಯ ಕುಟುಂಬದಲ್ಲಿ ಶಿಂಜೋ ಅಬೆ ಜನಿಸಿದರು.

2006ರ ಸಪ್ಟೆಂಬರ್ 26ರಂದು ಅಬೆ ಅವರು ಮೊದಲ ಬಾರಿಗೆ ಜಪಾನ್ ನ ಪ್ರಧಾನ ಮಂತ್ರಿಯಾದರು. ಆಗ ಅವರಿಗೆ 52 ವರ್ಷ ವಯಸ್ಸಾಗಿತ್ತು. 2007ರಲ್ಲಿ ಅವರು ಅಧಿಕಾರ ಕಳೆದುಕೊಂಡರು. ಬಳಿಕ 2012-2014ರ ನಡುವೆ ಅವರು ಎರಡನೇ ಬಾರಿ ಪ್ರಧಾನಿಯಾದರು. 2014ರಲ್ಲಿ ನಡೆದ ಚುನಾವಣೆಯಲ್ಲಿ ಗೆದ್ದು ಮತ್ತೆ ಪ್ರಧಾನಿಯಾದ ಶಿಂಜೋ ಅಬೆ 2017ರವರೆಗೆ ಆಳ್ವಿಕೆ ನಡೆಸಿದ್ದರು. 2017ರ ಚುನಾಚಣೆಯಲ್ಲಿ ಪುನರಾಯ್ಕೆಯಾದ ಅಬೆ 2020ವರೆಗೆ ಆಳ್ವಿಕೆ ನಡೆಸಿದ್ದರು.

ಅನಾರೋಗ್ಯದಿಂದ ನಿವೃತ್ತಿ: ಜೂನ್ 2020 ರಲ್ಲಿ ಅಬೆ ಅವರ ಆರೋಗ್ಯವು ಹದಗೆಟ್ಟಿತು. ನಿರಂತರ ಆಸ್ಪತ್ರೆ ಭೇಟಿಗಳ ನಂತರ, ಅಬೆ ಅವರು 28 ಆಗಸ್ಟ್ 2020 ರಂದು ಅವರು ಪ್ರಧಾನ ಮಂತ್ರಿಯಾಗಿ ನಿವೃತ್ತಿ ಹೊಂದಲು ಉದ್ದೇಶಿಸಿದ್ದಾರೆ ಎಂದು ಘೋಷಿಸಿದರು. ಸತತ ಆಸ್ಪತ್ರೆ ಭೇಟಿಯ ಕಾರಣದಿಂದ ಪ್ರಧಾನಿಯಾಗಿ ಸರಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುವುದಿಲ್ಲವೆಂದು ಉಲ್ಲೇಖಿಸಿ ತನ್ನ ನಿವೃತ್ತಿ ಘೋಷಿಸಿದರು. ಆದರೆ ತನ್ನ ಪಕ್ಷ ಎಲ್ ಡಿಪಿಯು ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವವರೆಗೆ ತಾನು ಕಚೇರಿಯಲ್ಲಿ ಉಳಿಯುತ್ತೇನೆ ಎಂದು ಅಬೆ ಸೂಚಿಸಿದರು. ಹೀಗಾಗಿ 2020ರ ಸೆಪ್ಟೆಂಬರ್ 14 ರಂದು ಎಲ್ ಡಿಪಿ ಪಕ್ಷವು ಯೋಶಿಹಿಡೆ ಸುಗಾ ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಿತು ಅವರು ಸೆಪ್ಟೆಂಬರ್ 16 ರಂದು ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.

ಭಾರತದೊಂದಿಗೆ ಸಂಬಂಧ: ಶಿಂಜೋ ಅಬೆ ಅವರು ಭಾರತದೊಂದಿಗೆ ಉತ್ತಮ ಸ್ನೇಹ ಸಂಬಂಧವನ್ನು ಹೊಂದಿದ್ದರು. ಅಲ್ಲದೆ ಭಾರತದ ಜೊತೆಗೂಡಿ ಏಷ್ಯಾದಲ್ಲಿ ಬಲ ಹೆಚ್ಚಿಸುವ ಬಗ್ಗೆ ಕಾರ್ಯತಂತ್ರ ರೂಪಿಸಿದ್ದರು.

2007 ರಲ್ಲಿ ಜಪಾನ್, ಯುನೈಟೆಡ್ ಸ್ಟೇಟ್ಸ್, ಆಸ್ಟ್ರೇಲಿಯಾ ಮತ್ತು ಭಾರತದ ನಡುವೆ ಮಾತುಕತೆ ಪ್ರಾರಂಭಿಸಿದರು. ಆಗಸ್ಟ್ 2007 ರಲ್ಲಿ ಭಾರತಕ್ಕೆ ಅವರ ಮೂರು ದಿನಗಳ ಭೇಟಿಯು ಹೊಸ ದ್ವಿಪಕ್ಷೀಯ ಏಷ್ಯನ್ ಮೈತ್ರಿಗೆ ಮುನ್ನಡಿಯಾಯಿತು.

ಮೂಲಕ ಅಮೆರಿಕ-ಆಸ್ಟ್ರೇಲಿಯಾ, ಅಮೆರಿಕ-ಜಪಾನ್, ಜಪಾನ್-ಆಸ್ಟ್ರೇಲಿಯಾ, ಮತ್ತು ಅಮೆರಿಕ-ಭಾರತದಂತೆ ಐದನೇ ದ್ವಿಪಕ್ಷೀಯ ಕೊಂಡಿಯಾಗಿ ಭಾರತ-ಜಪಾನ್ ಸಂಬಂಧ ಹೊಂದಲು ಅಬೆ ಕ್ರಮ ರೂಪಿಸಿದ್ದರು. ಈ ವ್ಯವಸ್ಥೆಯಲ್ಲಿ ವಿಯೆಟ್ನಾಂ, ದಕ್ಷಿಣ ಕೊರಿಯಾ, ಫಿಲಿಪೈನ್ಸ್ ಮತ್ತು ಇಂಡೋನೇಷ್ಯಾವನ್ನು ಸೇರಿಸುವ ಉಪಕ್ರಮವಾಗಿತ್ತು. ಚೀನಾದ ತಜ್ಞರು ವಿಕಸನಗೊಳ್ಳುತ್ತಿರುವ ಜಿಯೋ-ಸ್ಟ್ರಾಟೆಜಿಕ್ ಮಾದರಿಯನ್ನು “ಏಷ್ಯನ್ ನ್ಯಾಟೋ” ಎಂದು ಲೇಬಲ್ ಮಾಡಿದ್ದಾರೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.