ಜಿಂಬಾಬ್ವೆ ಮಾಜಿ ಅಧ್ಯಕ್ಷ ಮುಗಾಬೆ ನಿಧನ


Team Udayavani, Sep 7, 2019, 5:20 AM IST

v-29

ಹರಾರೆ: ಜಿಂಬಾಬ್ವೆಯನ್ನು ಸುಮಾರು ನಾಲ್ಕು ದಶಕಗಳ ಕಾಲ ತನ್ನ ಕಪಿಮುಷ್ಟಿಯಲ್ಲಿಟ್ಟು ಆಳಿದ ರಾಬರ್ಟ್‌ ಮುಗಾಬೆ(95) ಶುಕ್ರವಾರ ನಿಧನರಾಗಿದ್ದಾರೆ. 1980 ರಿಂದ 2017ರ ವರೆಗೆ ಜಿಂಬಾಬ್ವೆ ಅಧ್ಯಕ್ಷರಾಗಿದ್ದ ಮುಗಾಬೆ ಅವರ ಆರೋಗ್ಯ ಕಳೆದ ಕೆಲವು ವರ್ಷಗಳಿಂದ ತೀವ್ರ ಹದಗೆಟ್ಟಿತ್ತು. ಈ ಮಧ್ಯೆಯೇ, ದೇಶದಲ್ಲಿ ದುರಾಡಳಿತ ಹಾಗೂ ಭ್ರಷ್ಟಾಚಾರ ತಾಂಡವವಾಡುತ್ತಿದ್ದುದರಿಂದ ಜನರು ಮುಗಾಬೆ ಆಡಳಿತದಿಂದ ಬೇಸತ್ತಿದ್ದರು. ಹೀಗಾಗಿ 2017ರಲ್ಲಿ ಮುಗಾಬೆ ನಂಬಿಕಸ್ಥ ಸೇನಾಧಿಕಾರಿಯೇ ಸೇನಾ ದಂಗೆ ನಡೆಸಿದರು. ಮುಗಾಬೆ ಅವಧಿಯಲ್ಲಿ ಉಪಾಧ್ಯಕ್ಷರಾಗಿದ್ದ ಎಮ್ಮರ್ಸನ್‌ ನಂಗಾಗ್ವಾರನ್ನೇ ಅಧ್ಯಕ್ಷರನ್ನಾಗಿ ನೇಮಿಸ ಲಾಗಿತ್ತು. ಸಿಂಗಾಪುರದಲ್ಲಿ ಕಳೆದ ಕೆಲವು ದಿನಗಳ ಕಾಲ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರಿಗೆ ಯಾವ ಅನಾರೋಗ್ಯವಿತ್ತು ಮತ್ತು ಯಾವ ಸಮಸ್ಯೆಯಿಂದಾಗಿ ನಿಧನರಾದರು ಎಂಬ ಬಗ್ಗೆ ಮಾಹಿತಿಯನ್ನು ಸರ್ಕಾರ ನೀಡಿಲ್ಲ.

ದೇಶಕ್ಕೆ ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆಯಲು ಹೋರಾಟ ನಡೆಸಿದ್ದ ಮುಗಾಬೆ, ತನ್ನ ಅಧಿಕಾರದ ಆರಂಭದ ದಿನಗಳಲ್ಲಿ ಇಡೀ ಆಫ್ರಿಕಾ ದೇಶಗಳಲ್ಲೇ ಹೀರೋ ಆಗಿದ್ದರು. ಜಿಂಬಾಬ್ವೆ ನಂತರದಲ್ಲಿ ಒಂದಾದ ಮೇಲೆ ಒಂದು ದೇಶವು ಪ್ರಜಾಪ್ರಭುತ್ವ ಮಾದರಿ ಆಡಳಿತಕ್ಕೆ ಬದಲಾಗಲೂ ಮುಗಾಬೆ ಪ್ರೇರಕರಾಗಿದ್ದರು. ಆದರೆ 2000ನೇ ಇಸ್ವಿ ವೇಳೆಗೆ ಮುಗಾಬೆ ದುರಾಡಳಿತ ಹಾಗೂ ಭ್ರಷ್ಟಾಚಾರದಿಂದಾಗಿ ಖಳನಾಯಕರಾಗಿದ್ದರು. ಅಷ್ಟೇ ಅಲ್ಲ, ಅಧಿಕಾರಕ್ಕೆ ಅಂಟಿಕೊಂಡು ಜಿಂಬಾಬ್ವೆಯ ಹೊಸ ತಲೆಮಾರಿನ ಜನರಲ್ಲಿ ತಿರಸ್ಕಾರಕ್ಕೂ ಒಳಗಾಗಿದ್ದರು.

ಸಂತಾಪ: ಮುಗಾಬೆ ನಿಧನಕ್ಕೆ ಭಾರತ ಸೇರಿದಂತೆ ಹಲವು ದೇಶಗಳು ಶೋಕ ವ್ಯಕ್ತಪಡಿಸಿವೆ. ಮುಗಾಬೆ ಅವರು ಭಾರತದ ನೈಜ ಸ್ನೇಹಿತ ಹಾಗೂ ಸ್ವಾತಂತ್ರ್ಯದ ಐಕಾನ್‌ ಆಗಿದ್ದವರು ಎಂದು ವಿದೇಶಾಂಗ ಇಲಾಖೆ ಹೇಳಿದೆ.

ಟಾಪ್ ನ್ಯೂಸ್

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.