ಆತ್ಮಾಹುತಿ ಬಾಂಬ್ ದಾಳಿಗೆ ನಾಲ್ವರು ಪಾಕ್ ಸೈನಿಕರ ಸಾವು
Team Udayavani, Aug 9, 2022, 5:41 PM IST
ಇಸ್ಲಾಮಾಬಾದ್: ಪ್ರಕ್ಷುಬ್ಧ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಉತ್ತರ ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ ನಾಲ್ವರು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ನಾಗರಿಕರು ಸೇರಿದಂತೆ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಮಿಲಿಟರಿಯ ಮಾಧ್ಯಮ ವ್ಯವಹಾರಗಳ ವಿಭಾಗದ ಮುಖ್ಯಸ್ಥರು ಮಂಗಳವಾರ ತಿಳಿಸಿದ್ದಾರೆ.
ಜಿಲ್ಲೆಯ ಮೀರ್ ಅಲಿ ತಹಸಿಲ್ ಪ್ರದೇಶದ ಪಟ್ಟಾಸಿ ಚೆಕ್ ಪೋಸ್ಟ್ ಬಳಿ ಭದ್ರತಾ ಪಡೆಗಳ ವಾಹನಕ್ಕೆ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಆತ್ಮಾಹುತಿ ದಾಳಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ಶಹಬಾಜ್ ಷರೀಫ್, ಭಯೋತ್ಪಾದನೆಯ ಪಿಡುಗನ್ನು ಬೇರುಸಹಿತ ಕಿತ್ತೊಗೆಯಲು ಪ್ರಯತ್ನಿಸಬೇಕಿದೆ ಎಂದು ಪುನರುಚ್ಚರಿಸಿದರು.
ದಾಳಿಯನ್ನು ಖಂಡಿಸಿದ ಅವರು, ಭಯೋತ್ಪಾದಕರಿಗೆ ಅವರ ಪೈಶಾಚಿಕ ಕೃತ್ಯಗಳ ಮೂಲಕ ಯಶಸ್ವಿಯಾಗಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
ಇದನ್ನೂ ಓದಿ:ಛತ್ತೀಸ್ಗಢ ಬಿಜೆಪಿ ಅಧ್ಯಕ್ಷರಾಗಿ ಅರುಣ್ ಸಾವೋ ಆಯ್ಕೆ
ಇತ್ತೀಚೆಗೆ ತಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ ಕದನ ವಿರಾಮದ ಹೊರತಾಗಿಯೂ ಬುಡಕಟ್ಟು ಜಿಲ್ಲೆಗಳಲ್ಲಿ ಉಗ್ರಗಾಮಿಗಳು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸುತ್ತಿರುವುದನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ಎಂದು ಹೇಳಿದರು.
ಜುಲೈ 4 ರಂದು, ಈ ಪ್ರದೇಶದಲ್ಲಿ ಭದ್ರತಾ ಪಡೆಗಳ ಬೆಂಗಾವಲು ಪಡೆಯ ಮೇಲೆ ಆತ್ಮಹತ್ಯಾ ಬಾಂಬರ್ ದಾಳಿ ಮಾಡಿದಾಗ ಕನಿಷ್ಠ 10 ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ