ನೇಪಾಳ ವಿಮಾನ ಪತನ ; ಫ್ರಾನ್ಸ್ನ ತಜ್ಞರ ತಂಡದಿಂದ ತನಿಖೆ ಪ್ರಾರಂಭ
Team Udayavani, Jan 18, 2023, 6:06 PM IST
ಕಠ್ಮಂಡು: 72 ಜನರಿದ್ದ ಯೇತಿ ಏರ್ಲೈನ್ಸ್ ವಿಮಾನ ಪತನದ ಕುರಿತು ಸರ್ಕಾರಕ್ಕೆ ತನಿಖೆಗೆ ಸಹಾಯ ಮಾಡಲು ನೇಪಾಳದಲ್ಲಿರುವ ಫ್ರಾನ್ಸ್ನ ತಜ್ಞರ ತಂಡವು ಬುಧವಾರ ತನ್ನ ತನಿಖೆಯನ್ನು ಪ್ರಾರಂಭಿಸಿದೆ. ತಂಡ ರೆಸಾರ್ಟ್ ನಗರವಾದ ಪೊಖರಾದಲ್ಲಿ ಅಪಘಾತ ಸ್ಥಳಕ್ಕೆ ಭೇಟಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯೇತಿ ಏರ್ಲೈನ್ಸ್ ಅಧಿಕಾರಿಯೊಬ್ಬರ ಮಾಹಿತಿ ಪ್ರಕಾರ, ಐವರು ಭಾರತೀಯರು ಸೇರಿದಂತೆ 71 ಜನರ ದುರಂತ ಅಂತ್ಯಕ್ಕೆ ಕಾರಣವಾದ ಎಟಿಆರ್ -72 ವಿಮಾನ ದುರಂತದ ವಿವರಗಳನ್ನು ಅರ್ಥಮಾಡಿಕೊಳ್ಳಲು ಒಂಬತ್ತು ಸದಸ್ಯರ ತಂಡವು ಪೋಖಾರಾದಲ್ಲಿರುವ ಏರ್ಲೈನ್ಸ್ ಸಿಬಂದಿ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ವಿಚಾರಣೆ ನಡೆಸುತ್ತಿದೆ.
ಭಾನುವಾರ ಬೆಳಗ್ಗೆ 10:30 ಕ್ಕೆ ಕಠ್ಮಂಡುವಿನಿಂದ ಟೇಕ್ ಆಫ್ ಆಗಿದ್ದ ವಿಮಾನವು ಸೇಟಿ ನದಿಯ ಕಂದರಕ್ಕೆ ಅಪ್ಪಳಿಸಿ, ಎಲ್ಲಾ 4 ಸಿಬಂದಿ ಮತ್ತು 68 ಪ್ರಯಾಣಿಕರು ದಾರುಣವಾಗಿ ಮೃತ್ಯು ಹೊಂದಿದ್ದರು. ವಿಮಾನದಲ್ಲಿದ್ದ ಒಬ್ಬರು ಇನ್ನೂ ನಾಪತ್ತೆಯಾಗಿದ್ದಾರೆ.
ತನಿಖೆಗಾಗಿ ನೇಪಾಳ ಸರ್ಕಾರ ಐದು ಸದಸ್ಯರ ತನಿಖಾ ಸಮಿತಿಯನ್ನು ರಚಿಸಿದೆ. ಮಾಜಿ ವಿಮಾನಯಾನ ಕಾರ್ಯದರ್ಶಿ ನಾಗೇಂದ್ರ ಘಿಮಿರೆ ನೇತೃತ್ವದ ತನಿಖಾ ಸಮಿತಿಯು ಅಪಘಾತದ ಬಗ್ಗೆ ತನಿಖೆ ನಡೆಸಿ 45 ದಿನಗಳಲ್ಲಿ ತನ್ನ ವರದಿಯನ್ನು ಸಲ್ಲಿಸುವಂತೆ ಕೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್