5ವರ್ಷಕ್ಕೊಮ್ಮೆ ನೇಪಾಳದಲ್ಲಿ ಗಾಧಿಮಾಯಿ ಜಾತ್ರೆ;ಕೋಣ ಸೇರಿ ಲಕ್ಷ, ಲಕ್ಷ ಪ್ರಾಣಿ ಬಲಿ, ಏನಿದು?

ಜಗತ್ತಿನ ಅತೀ ದೊಡ್ಡ ಗಾಧಿಮಾಯಿ ಪ್ರಾಣಿ ಬಲಿ ಹಬ್ಬಕ್ಕೆ ವಿಧ್ಯುಕ್ತವಾಗಿ ಚಾಲನೆ ಸಿಕ್ಕಿದೆ

Team Udayavani, Dec 5, 2019, 12:58 PM IST

Festival-Nepal

ಕಾಠ್ಮಂಡು: ದಕ್ಷಿಣ ನೇಪಾಳದ “ಬಾರ” ಜಿಲ್ಲೆಯಲ್ಲಿ ಮಂಗಳವಾರದಿಂದ ಜಗತ್ತಿನ ಅತೀ ದೊಡ್ಡ ಗಾಧಿಮಾಯಿ ಪ್ರಾಣಿ ಬಲಿ ಹಬ್ಬಕ್ಕೆ ವಿಧ್ಯುಕ್ತವಾಗಿ ಚಾಲನೆ ಸಿಕ್ಕಿದೆ. ಇದು ಪ್ರತಿ ಐದು ವರ್ಷಕ್ಕೊಮ್ಮೆ ನಡೆಯುವ ಹಬ್ಬವಾಗಿದೆ. ಪ್ರಾಣಿದಯಾ ಸಂಘದ ವಿರೋಧದ ನಡುವೆಯೂ ಗಾಧಿಮಾಯಿ ಪ್ರಾಣಿ ಬಲಿ ಹಬ್ಬ ನಡೆಯುತ್ತಿದೆ. ಸಾವಿರಾರು ಕೋಣ, ಸಾವಿರಾರು ಕುರಿ, ಕೋಳಿ..ಹೀಗೆ ಒಂದೇ ಸ್ಥಳದಲ್ಲಿ ಲಕ್ಷಾಂತರ ಪ್ರಾಣಿಗಳ ಬಲಿ ಇಲ್ಲಿ ನಡೆಯುತ್ತದೆ.

ಲಕ್ಷ, ಲಕ್ಷ ಸಂಖ್ಯೆಯಲ್ಲಿ ಹಿಂದೂ ಭಕ್ತರು ನೇಪಾಳದ ಗಾಧಿಮಾಯಿ ಪ್ರಾಣಿ ಬಲಿ ಹಬ್ಬದಲ್ಲಿ ಪಾಲ್ಗೊಂಡಿದ್ದರು. ಮುಖ್ಯ ಅರ್ಚಕ ಕುರಿ, ಇಲಿ, ಕೋಳಿ , ಹಂದಿ ಹಾಗೂ ಪಾರಿವಾಳವನ್ನು ಕೊಲ್ಲುವ ಮೂಲಕ ಹಬ್ಬ ಆರಂಭವಾಗಿತ್ತು.

ಏನಿದು ಗಾಧಿಮಾಹಿ ಎಂಬ ಸಾಮೂಹಿಕ ಪ್ರಾಣಿ ಬಲಿ ಹಬ್ಬ?

ನೇಪಾಳದಲ್ಲಿ ವಾಸಿಸುವ ಮಾದೇಶಿ ಜನಾಂಗದವರೇ ಹೆಚ್ಚಿನ ಸಂಖ್ಯೆಯಲ್ಲಿ ನಂಬಿಕೊಂಡಿರುವ ದೇವತೆಯ ಹೆಸರು ಗಾಧಿಮಾಯಿ. 5 ವರ್ಷಕ್ಕೊಮ್ಮೆ ನಡೆಯುವ ಈ ಜಾತ್ರೆಯಲ್ಲಿ ಪ್ರಾಣಿಗಳ ಮಾರಣಹೋಮವೇ ನಡೆಯುತ್ತದೆ. ಸುಮಾರು ಐದು ಲಕ್ಷ ಜನ ಸೇರುವ ಬೃಹತ್ ಜಾತ್ರೆಯಲ್ಲಿ ಶೇ.50ರಷ್ಟು ಭಕ್ತರು ಭಾರತದವರೇ ಆಗಿದ್ದಾರೆ.

ಇದು ಪ್ರಪಂಚದಲ್ಲಿಯೇ 2ನೇ ಅತೀ ದೊಡ್ಡ ಪ್ರಾಣಿ ಬಲಿಯ ಜಾತ್ರೆಯಾಗಿದೆ. ಇಲ್ಲಿ ಸುಮಾರು 5 ಲಕ್ಷ ವಿವಿಧ ಜಾತಿಗಳ ಪ್ರಾಣಿಗಳನ್ನು ಬಲಿ ಕೊಡಲಾಗುತ್ತದೆ. ಮೊದಲ ಸಾಲಿನಲ್ಲಿ ಮುಸ್ಲಿಮರ ಹಜ್, ಇಲ್ಲಿ ಕೂಡಾ ಪ್ರತಿವರ್ಷ ಲಕ್ಷಾಂತರ ಪ್ರಾಣಿಗಳನ್ನು ಬಲಿ ನೀಡಲಾಗುತ್ತದೆ. ಗಾಧಿಮಾಯಿ ಜಾತ್ರೆಯಲ್ಲಿ ಎಮ್ಮೆ, ಕೋಣ, ಪಾರಿವಾಳ, ಕುರಿ, ಆಡು, ಇಲಿ ಇತ್ಯಾದಿಗಳನ್ನು ಬಲಿ ಕೊಡಲಾಗುತ್ತದೆ. ಈ ಜಾತ್ರೆಗೆ ಭಾರತದಿಂದ ನೇಪಾಳಕ್ಕೆ ಎಮ್ಮೆಗಳನ್ನು ರಫ್ತು ಮಾಡಲಾಗುತ್ತಿತ್ತು. ಆದರೆ ಸುಪ್ರೀಂಕೋರ್ಟ್ ಆದೇಶದಿಂದ ಗಾಧಿಮಾಯಿ ಜಾತ್ರೆಗೆ ಎಮ್ಮೆ-ಕೋಣ ರಫ್ತು ನಿಂತಿದೆ.

2009ರಲ್ಲಿ ಆಡು, ಕುರಿ, ಕೋಣ, ಪಾರಿವಾಳ ಸೇರಿ ಅಂದಾಜು 5 ಲಕ್ಷ ಪ್ರಾಣಿಗಳನ್ನು ಬಲಿ ನೀಡಲಾಗಿತ್ತು. 2014ರಲ್ಲಿ ಈ ಪ್ರಮಾಣ ಸ್ವಲ್ಪ ಕಡಿಮೆಯಾಗಿರುವುದಾಗಿ ಎಚ್ ಎಸ್ ಐ(ಹ್ಯೂಮನ್ ಸೊಸೈಟಿ ಇಂಟರ್ ನ್ಯಾಷನಲ್) ತಿಳಿಸಿದೆ. ಪ್ರಾಣಿಗಳ ಮಾರಣಹೋಮ, ರಕ್ತದೋಕುಳಿ ಹರಿಸುವ ಈ ಜಾತ್ರೆಯನ್ನು ನಿಲ್ಲಿಸಬೇಕೆಂದು ಪ್ರಾಣಿದಯಾ ಸಂಘಟನೆಗಳು, ಕಾರ್ಯಕರ್ತರು ಆಗ್ರಹಿಸುತ್ತಲೇ ಬಂದಿದ್ದಾರೆ. ಆದರೆ 250ಕ್ಕೂ ಹೆಚ್ಚು ವರ್ಷಗಳ ಕಾಲದಿಂದ ಆಚರಿಸಿಕೊಂಡು ಬಂದ ಹಿಂದೂ ಸಂಪ್ರದಾಯವನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ನೇಪಾಳ ಸರ್ಕಾರ ಕೈಚೆಲ್ಲಿತ್ತು.

2015ರಲ್ಲಿ ಇನ್ನು ಮುಂದಿನ ಜಾತ್ರೆಯಲ್ಲಿ ಹೆಚ್ಚಿನ ಪ್ರಾಣಿ ಬಲಿಯನ್ನು ಕೊಡುವುದಿಲ್ಲ ಎಂದು ಗಾಧಿಮಾಯಿ ಟೆಂಪಲ್ ಟ್ರಸ್ಟ್ ಘೋಷಿಸಿತ್ತು. ಆದರೆ ಈ ಬಾರಿಯೂ ಲಕ್ಷಾಂತರ ಪ್ರಾಣಿಗಳನ್ನು ಬಲಿಕೊಡಲಾಗಿದೆ.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.