Hamas ಉಗ್ರರಿಂದ ಜರ್ಮನ್‌ ಯುವತಿಯ ಬೆತ್ತಲೆ ಮೆರವಣಿಗೆ.. “ನನ್ನ ಮಗಳು ಇನ್ನೂ ಬದುಕಿದ್ದಾಳೆ”


Team Udayavani, Oct 11, 2023, 10:08 AM IST

Hamas ಉಗ್ರರಿಂದ ಜರ್ಮನ್‌ ಯುವತಿಯ ಬೆತ್ತಲೆ ಮೆರವಣಿಗೆ.. “ನನ್ನ ಮಗಳು ಇನ್ನೂ ಬದುಕಿದ್ದಾಳೆ”

ನವದೆಹಲಿ: ಇಸ್ರೇಲ್‌ ನಲ್ಲಿ ನಡೆಯುತ್ತಿದ್ದ ಮ್ಯೂಸಿಕ್‌ ಫೆಸ್ಟಿವೆಲ್‌ ನಿಂದ ಜರ್ಮನ್‌ ಮಹಿಳೆಯೊಬ್ಬರನ್ನು ಅಪಹರಿಸಿಕೊಂಡು ಬೆತ್ತಲೆ ಮಾಡಿ, ವಾಹನದಲ್ಲಿ ಮೆರವಣಿಗೆ ಮಾಡಿದ್ದ ವಿಡಿಯೋ ಕೆಲ ದಿನಗಳಿಂದ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಜರ್ಮನ್‌ ಮೂಲದ 22 ವರ್ಷದ ಶಾನಿ ಲೌಕ್ ಟ್ಯಾಟೂ ಕಲಾವಿದೆಯಾಗಿದ್ದು, ಇಸ್ರೇಲ್‌ ನಲ್ಲಿ ಮ್ಯೂಸಿಕ್‌ ಫೆಸ್ಟಿವೆಲ್‌ ನಲ್ಲಿ‌ ಭಾಗಿಯಾಗಿದ್ದರು. ಈ ವೇಳೆ ಹಮಾಸ್‌ ಉಗ್ರರು ಏಕಾಏಕಿ ದಾಳಿ ನಡೆಸಿ, ಅನೇಕರನ್ನು ಅಪಹರಿಸಿಕೊಂಡು ಹೋಗಿದ್ದರು. ಇದರಲ್ಲಿ ಶಾನಿ ಲೌಕ್ ಕೂಡ ಇದ್ದರು. ಶಾನಿ ಲೌಕ್ ಅವರ ಮೇಲೆ ಹಲ್ಲೆ ನಡೆಸಿ ಆಕೆಯನ್ನು ಬೆತ್ತಲೆ ಮಾಡಿ, ಕೈಕಾಲು ಕಟ್ಟಿ ವಾಹನದಲ್ಲಿ ಮೆರವಣಿಗೆ ಮಾಡಿಕೊಂಡು ಹೋಗುತ್ತಿದ್ದ ಭೀಕರ ದೃಶ್ಯ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಈ ವಿಡಿಯೋ ಕುರಿತು ಟ್ವಿಟರ್‌ ನಲ್ಲಿ ಶಾನಿ ಅವರ ತಾಯಿ ರಿಕಾರ್ಡಾ ಲೌಕ್ ಅವರು ತನ್ನ ಮಗಳ ಬಗ್ಗೆ ಮಾತನಾಡಿ ಭಾವುಕರಾಗಿದ್ದರು. ಅವರ ಇರುವಿಕೆ ಬಗ್ಗೆ ಹೇಳಲು ಮನವಿ ಮಾಡಿದ್ದರು. ಶಾನಿ ಮೃತಪಟ್ಟಿದ್ದಾರೆ ಎಂದು ಕೆಲ ವರದಿಗಳು ತಿಳಿಸಿತ್ತು.

ಇದೀಗ ತನ್ನ ಮಗಳು ಜೀವಂತವಾಗಿದ್ದಾಳೆ ಎಂದು ರಿಕಾರ್ಡಾ ಲೌಕ್ ಸಂದರ್ಶನವೊಂದರಲ್ಲಿ ಹೇಳಿರುವುದಾಗಿ ಜರ್ಮನ್‌ ನ್ಯೂಸ್‌ ಔಟ್ಲೆಟ್ ಡೆರ್ ಸ್ಪೀಗೆಲ್ ವರದಿ ಮಾಡಿದೆ.

ಗಾಜಾ ಪಟ್ಟಿಯಲ್ಲಿರುವ ಹಮಾಸ್ ಆಸ್ಪತ್ರೆಯಲ್ಲಿ ತನ್ನ ಮಗಳು ಜೀವಂತವಾಗಿದ್ದಾಳೆ ಎಂದು ಪ್ಯಾಲೆಸ್ತೀನ್‌ ಮೂಲಗಳಿಂದ ಮಾಹಿತಿ ಪಡೆದಿರುವುದಾಗಿ ಅವರು ಹೇಳಿದ್ದಾರೆ.

“ಶಾನಿ ಜೀವಂತವಾಗಿದ್ದಾಳೆ ಆದರೆ ಅವಳ ತಲೆಗೆ ಗಂಭೀರ ಗಾಯವಾಗಿದೆ. ಅವಳು ಚಿಂತಾಜನಕ ಸ್ಥಿತಿಯಲ್ಲಿದ್ದಾಳೆ. ಪ್ರತಿ ನಿಮಿಷ ಅವಳ ಆರೋಗ್ಯದ ವಿಚಾರದಲ್ಲಿ ಮುಖ್ಯ. ದಯವಿಟ್ಟು ಜರ್ಮನ್‌  ಸರ್ಕಾರ ತ್ವರಿತಗತಿಯಲ್ಲಿ ಕಾರ್ಯ ನಿರ್ವಹಿಸಬೇಕೆಂದು ಮನವಿ ಮಾಡುತ್ತೇನೆ. ಶಾನಿಯನ್ನು ಶೀಘ್ರವಾಗಿ ಗಾಜಾಪಟ್ಟಿಯಿಂದ ಹೊರತರಬೇಕು. ದಯವಿಟ್ಟು ನನ್ನ ಮಗಳನ್ನು ಸುರಕ್ಷಿತವಾಗಿ ಮನೆಗೆ ಕರೆ ತನ್ನಿ”ಎಂದು ಅವರು ಹೇಳಿದ್ದಾರೆ.

ಶಾನಿ ಅವರನ್ನು ಅಪಹರಿಸಿ ಆಕೆಯ ಕ್ರೆಡಿಟ್‌ ಕಾರ್ಡ್‌ ನ್ನು ಬಳಸಲಾಗಿದೆ ಎಂದು ಇತ್ತೀಚೆಗೆ ಆಕೆಯ ಕುಟುಂಬ ಹೇಳಿತ್ತು.

 

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.