ಆ್ಯಂಡ್ರಾಯ್ಡ್ “ಪಿ’ಗೆ ಪಾಯಸವೋ, ಪೇಣಿಯೋ?


Team Udayavani, Mar 5, 2018, 6:00 AM IST

Android-P.jpg

ವಾಷಿಂಗ್ಟನ್‌: ಗೂಗಲ್‌ ಅಭಿವೃದ್ಧಿಪಡಿಸುತ್ತಿರುವ ಆ್ಯಂಡ್ರಾಯ್ಡ ಆಪರೇಟಿಂಗ್‌ ಸಿಸ್ಟಮ್‌ನ ಈ ಬಾರಿಯ ಸುಧಾರಿತ ಆವೃತ್ತಿಗೆ ದಕ್ಷಿಣ ಭಾರತದ ಸಿಹಿ ತಿನಿಸುವಿನ ಹೆಸರು ಸಿಗಲಿದೆಯೇ?

ಇಂಥ ದ್ದೊಂದು ಚರ್ಚೆ ಈಗಾಗಲೇ ಶುರುವಾಗಿದೆ. ಆ್ಯಂಡ್ರಾಯ್‌ “ಪಿ’ ಒಎಸ್‌ಗೆ “ಪಾಯಸಂ’,”ಪೇಣಿ’ ಅಥವಾ “ಪೇಡಾ’ ಹೆಸರಿಡುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ. ಅಲ್ಲದೆ ಈಜಿಪ್ಟ್ನ “ಪೈ’ ಎಂಬ ಹೆಸರನ್ನೂ ಇರಿಸಬಹುದು ಎಂಬ ಚರ್ಚೆಗಳೂ ನಡೆಯುತ್ತಿವೆ.

ಮಾರ್ಚ್‌ ಎರಡನೇ ವಾರದಲ್ಲಿ ಒಎಸ್‌ ಸರಣಿಯ ಪಿ ನಾಮಾಂಕಿತ ಆವೃ ತ್ತಿಯ ಡೆವಲಪರ್‌ ಪ್ರಿವ್ಯೂ ( ಪರೀಕ್ಷೆ ಗಾಗಿ ಬಿಡುವುದು) ಅನ್ನು ಗೂಗಲ್‌ ಬಿಡುಗಡೆ ಮಾಡುತ್ತಿದ್ದು, ಇದರ ಸಂಪೂರ್ಣ ಮತ್ತು ಅಂತಿಮ ಆವೃತ್ತಿ ಆಗಸ್ಟ್‌ನಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ಹಿಂದೆ ಅಂದರೆ, “ಒರಿಯೋ’ಗಿಂತ ಹಿಂದಿನ “ನಾಗೌಟ್‌’ನ ನಾಮಾಂಕನ ವೇಳೆ ಭಾರತದ ತಿನಿಸುವಿನ ಹೆಸರಿಡುವ ಬಗ್ಗೆ ಚರ್ಚೆಯಾಗಿತ್ತು. ಆದರೆ ಆಗ ಭಾರತೀಯರ ನಿರೀಕ್ಷೆ ಹುಸಿಯಾಗಿತ್ತು. 2015ರಲ್ಲಿ ಭಾರತಕ್ಕೆ ಬಂದಿದ್ದ ಗೂಗಲ್‌ ಸಿಇಒ ಸುಂದರ್‌ ಪಿಚೈ,”ಎನ್‌’ ಅಥವಾ “ಪಿ’ ಒಎಸ್‌ ವೇಳೆ ಭಾರತದ ತಿನಿಸುವಿನ ಹೆಸರಿಡುವ ಬಗ್ಗೆ ಸುಳಿವು ನೀಡಿದ್ದರು.

ಇಂಗ್ಲಿಷಿನ ಅಕಾರಾದಿಗೆ ಅನುಗುಣವಾಗಿ ನಾಮಕರಣ ಮಾಡುವ ಸಂಪ್ರದಾಯವನ್ನು ಗೂಗಲ್‌ ಬೆಳೆಸಿಕೊಂಡು ಬಂದಿದ್ದು, ಈ ಬಾರಿ ಇದು “ಪಿ’ ಇನಿಶಿಯಲ್‌ ಹೊಂದಿದೆ. ಇದರ ಪೂರ್ಣ ಪಾಠ ಅಂದರೆ “ಒ’ಗೆ ಒರಿಯೋ, “ಎನ್‌’ಗೆ ನಾಗೌ ಟ್‌, “ಎಂ’ಗೆ ಮಾರ್ಶ್‌ಮಲ್ಲೋ, “ಎಲ್‌’ಗೆ ಲಾಲಿಪಾಪ್‌, “ಕೆ’ಗೆ ಕಿಟ್‌ಕ್ಯಾಟ್‌ ಎಂಬ ಹೆಸರಿಡಲಾಗಿದೆ.

ಈಗಾಗಲೇ ಗೂಗಲ್‌ ಈ ಸಂಬಂಧ ಆನ್‌ಲೈನ್‌ ಸರ್ವೆ ನಡೆಸಿದೆ. ಆದರೆ ಮಾರ್ಚ್‌ನಲ್ಲೇ ಹೆಸರು ಬಹಿರಂಗಗೊಳಿಸುವುದು ಅನಿಶ್ಚಿತ. ಪಾಯಸ, ಪೇಡಾ, ಪೇಣಿ ಸೇರಿದಂತೆ “ಪ’ದಿಂದ ಆರಂಭವಾಗುವ ಎಲ್ಲ ಸಿಹಿತಿನಿಸುಗಳ ಹೆಸರುಗಳೂ ಅಂತರ್ಜಾಲದಲ್ಲಿ ಸುತ್ತಾಡಿವೆ. ಈ ಹಿಂದೆ ಭಾರತಕ್ಕೆ ಆಗಮಿಸಿದ್ದಾಗ ಪಿಚೈರನ್ನು ಪಿ ಆವೃತ್ತಿಗೆ ಭಾರತೀಯ ತಿನಿಸುಗಳ ಹೆಸರಿಡುತ್ತೀರಾ ಎಂದು ಕೇಳಿದ್ದಕ್ಕೆ, ಈ ಬಗ್ಗೆ ನನ್ನ ಅಮ್ಮನ ಬಳಿ ಸಲಹೆ ಪಡೆಯಬೇಕು ಎಂದು ಹೇಳಿದ್ದರು.

ಮಾರ್ಚ್‌ನಲ್ಲೇ ಯಾಕೆ?:
ಗೂಗಲ್‌ ಸಾಮಾನ್ಯವಾಗಿ ಮಾರ್ಚ್‌ನಲ್ಲೇ ಹೊಸ ಆಂಡ್ರಾಯ್ಡ ಆವೃತ್ತಿಯನ್ನು ಬಿಡುಗಡೆ ಮಾಡುವ ಸಂಪ್ರದಾಯ ಹೊಂದಿದೆ. ಕಳೆದ ವರ್ಷ ಮಾರ್ಚ್‌ 21ರಂದು ಒ ಡೆವಲಪರ್‌ ಪ್ರಿವ್ಯೂ ಬಿಡುಗಡೆ ಮಾಡಿತ್ತು. ನಂತರ ಕೆಲವು ತಿಂಗಳುಗಳವರೆಗೆ ಹಲವು ಆವೃತ್ತಿಗಳನ್ನು ಬಿಡುಗಡೆ ಮಾಡಿ, ಆಗಸ್ಟ್‌ನಲ್ಲಿ ಅಂತಿಮ ಆವೃತ್ತಿಯನ್ನು ಅನಾವರಣಗೊಳಿಸಲಿದೆ. ಆರಂಭದಲ್ಲಿ ಗೂಗಲ್‌ನ ಪಿಕ್ಸೆಲ್‌ ಸ್ಮಾರ್ಟ್‌ಫೋನ್‌ಗಳಲ್ಲಿ ಮಾತ್ರವೇ ಹೊಸ ಆವೃತ್ತಿ ಬಳಕೆಯಾಗಲಿದ್ದು, ನಂತರದ ದಿನಗಳಲ್ಲಿ ಇತರ ಕಂಪನಿಗಳ ಹಾಗೂ ಇತರ ಮಾದರಿಯ ಪಿ ಅಳವಡಿಕೆಯಾಗಲಿದೆ.

ಏನಿರಲಿದೆ ಹೊಸ ಸೌಲಭ್ಯ?
ಸದ್ಯ ಸ್ಮಾರ್ಟ್‌ಫೋನ್‌ ಯುಐ ಗೂಗಲ್‌ ಅಸಿಸ್ಟೆಂಟ್‌ ಸಪೋರ್ಟ್‌ ಮಾಡುತ್ತದೆಯಾದರೂ, ಸ್ಮಾರ್ಟ್‌ಫೋನ್‌ನಲ್ಲಿರುವ ಅಪ್ಲಿಕೇಶನ್‌ಗಳು ಗೂಗಲ್‌ ಅಸಿಸ್ಟೆಂಟ್‌ ಕಮಾಂಡ್‌ಗಳಿಗೆ ಸ್ಪಂದಿಸುವುದಿಲ್ಲ. ಈ ಸಮಸ್ಯೆಯು ಪಿಯಲ್ಲಿ ನಿವಾರಣೆಯಾಗುವ ಸಾಧ್ಯತೆಯಿದೆ. ಅಲ್ಲದೆ ಈಗಾಗಲೇ ಕೆಲವು ಸುಧಾರಿತ ಆವೃತ್ತಿಯ ಯುಐಗಳಲ್ಲಿರುವ ಹಲವು ಸ್ಕ್ರೀನ್‌ಗಳು, ನಾಚ್‌ಗಳನ್ನೂ ಇದು ಒಳಗೊಂಡಿರಲಿದೆ. ಈ ಹಿಂದಿನ ಆವೃತ್ತಿಗಳಲ್ಲಿ ವಿನ್ಯಾಸವನ್ನು ಸ್ವಲ್ಪವೇ ಬದಲಾವಣೆ ಮಾಡಲಾಗಿದ್ದು, ಈ ಆವೃತ್ತಿಯಲ್ಲೂ ವಿನ್ಯಾಸದಲ್ಲಿ ಕೆಲವು ಬದಲಾವಣೆಗಳನ್ನು ನಿರೀಕ್ಷಿಸಲಾಗಿದೆ.

ಅಪ್ಲಿಕೇಶನ್‌ಗಳು ಬ್ಯಾಕ್‌ಗ್ರೌಂಡ್‌ನ‌ಲ್ಲಿ ಕ್ಯಾಮೆರಾ ಅಥವಾ ಮೈಕ್ರೋಫೋನ್‌ ಅಕ್ಸೆಸ್‌ ಮಾಡುವುದನ್ನು ತಡೆಯುವುದೂ ಹೊಸ ಆವೃತ್ತಿಯಲ್ಲಿರಲಿದೆ ಎಂದು ಹೇಳಲಾಗಿದೆ. ಅಲ್ಲದೆ ಇತರ ನೂರಾರು ಸೌಲಭ್ಯಗಳು, ಕಸ್ಟಮೈಸೇಶನ್‌ಗಳೂ ಸ್ಮಾರ್ಟ್‌ಫೋನ್‌ ಬಳಕೆದಾರರಿಗೆ ಲಭ್ಯವಾಗಲಿವೆ.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.