ರಿಯಲ್ ಎಸ್ಟೇಟ್ಗೂ ಜಿಎಸ್ಟಿ
Team Udayavani, Oct 13, 2017, 6:50 AM IST
ವಾಷಿಂಗ್ಟನ್: ದೇಶದ ರಿಯಲ್ ಎಸ್ಟೇಟ್ ಉದ್ಯಮವೂ ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ಬರಲಿದೆಯೇ. ಇಂಥದ್ದೊಂದು ಸುಳಿವು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಕಡೆಯಿಂದಲೇ ಹೊರಬಿದ್ದಿದೆ. ಅಮೆರಿಕ ಪ್ರವಾಸ ದಲ್ಲಿರುವ ಅವರು, ಹಾರ್ವರ್ಡ್ ವಿವಿಯಲ್ಲಿ ನೀಡಿದ ಉಪನ್ಯಾಸದಲ್ಲಿ ಇಂಥದ್ದೊಂದು ಸಾಧ್ಯತೆಯನ್ನು ತೆರೆದಿಟ್ಟಿದ್ದಾರೆ. ನವೆಂಬರ್ ನಲ್ಲಿ ನಡೆಯಲಿರುವ ಜಿಎಸ್ಟಿ ಮಂಡಳಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳ ಲಾಗುತ್ತದೆ ಎಂದು ಅವರು ಹೇಳಿದ್ದಾರೆ.
“ಭಾರತದಲ್ಲಿ ಅತಿ ಹೆಚ್ಚು ಹಣ ಹೂಡಿಕೆ ಯಾಗುವ ಪ್ರಮುಖ ಕ್ಷೇತ್ರಗಳಲ್ಲಿ ರಿಯಲ್ ಎಸ್ಟೇಟ್ ಉದ್ಯಮವೂ ಒಂದು. ಅಷ್ಟೇ ಅಲ್ಲ, ಅತಿ ಹೆಚ್ಚು ತೆರಿಗೆ ಹಣ ಸೋರಿಕೆಯಾಗುವ ಕ್ಷೇತ್ರಗಳ ಸಾಲಲ್ಲೂ ಇದು ಸೇರುತ್ತದೆ. ಹಾಗಾಗಿ ಈ ಕ್ಷೇತ್ರವನ್ನು ಜಿಎಸ್ಟಿ ವ್ಯಾಪ್ತಿ ಯಡಿ ತರಬೇಕೆಂದು ಕೆಲವು ರಾಜ್ಯ ಸರಕಾರಗಳು ಒತ್ತಡ ಹೇರುತ್ತಿವೆ. ಆದರೆ ಕೆಲವು ರಾಜ್ಯಗಳು ಇದನ್ನು ವಿರೋಧಿಸಿವೆ. ಇಬ್ಬರದ್ದೂ ಪ್ರತ್ಯೇಕ ದೃಷ್ಟಿಕೋನಗಳಿವೆ. ಆದ್ದರಿಂದ ನವೆಂಬರ್ನಲ್ಲಿ ನಡೆಯಲಿರುವ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು. ಎರಡೂ ದೃಷ್ಟಿ ಕೋನಗಳ ಬಗ್ಗೆ ಕೂಲಂಕಷವಾಗಿ ಚರ್ಚಿಸಿದ ಬಳಿಕವೇ ಒಂದು ನಿರ್ಧಾರಕ್ಕೆ ಬರಲಾಗುತ್ತದೆ’ ಎಂದು ಅರುಣ್ ಜೇಟ್ಲಿ ತಿಳಿಸಿದರು.
ಹಾಗೊಮ್ಮೆ ಜಿಎಸ್ಟಿ ವ್ಯಾಪ್ತಿಯೊಳಗೆ ರಿಯಲ್ ಎಸ್ಟೇಟ್ ಬಂದರೆ ಮನೆ, ನಿವೇಶನ ಖರೀದಿ ಮಾಡುವ, ಮಾರಾಟ ಮಾಡಲಿಚ್ಛಿ ಸುವ ಗ್ರಾಹಕರು ಒಂದು “ಅಂತಿಮ ತೆರಿಗೆ’ ಯನ್ನು ಮಾತ್ರ ಪಾವತಿಸಬೇಕಾಗುತ್ತದೆ ಎಂದು ತಿಳಿಸಿದ ಸಚಿವ ಜೇಟ್ಲಿ, ಅಂತಿಮ ತೆರಿಗೆಯನ್ನು ಅತ್ಯಲ್ಪವಾಗಿಸುವ ಮೂಲಕ ಗ್ರಾಹಕರಿಗೆ ಹೊರೆಯಾಗದಂತೆ ನೋಡಿಕೊಳ್ಳ ಲಾಗುವುದು ಎಂದೂ ಸ್ಪಷ್ಟಪಡಿಸಿದರು.
ಜಿಎಸ್ಟಿ ವ್ಯಾಪ್ತಿಗೆ ರಿಯಲ್ ಎಸ್ಟೇಟ್ ಉದ್ಯಮವನ್ನು ತರುವುದರಿಂದ ಈ ಕ್ಷೇತ್ರ ದಲ್ಲಿರುವ ಕಾಳದಂಧೆಯ ಮೇಲೂ ಕಡಿವಾಣ ಹೇರಲು ಸಾಧ್ಯ ಎಂದು ಜೇಟ್ಲಿ ಅಭಿಪ್ರಾಯಪಟ್ಟರು.
ಬ್ಯಾಂಕಿಂಗ್ ಕ್ಷೇತ್ರ ಸದೃಢಗೊಳಿಸುವ ಗುರಿ
ಬ್ಯಾಂಕಿಂಗ್ ಕ್ಷೇತ್ರವನ್ನು ಮತ್ತಷ್ಟು ಸದೃಢಗೊಳಿಸುವುದು ಭಾರತ ಸರಕಾರದ ಸದ್ಯದ ಗುರಿಯಾಗಿದೆ. ಸದ್ಯಕ್ಕೆ ಭಾರತೀಯ ಬ್ಯಾಂಕ್ಗಳು ವಸೂಲಾಗದ ಸಾಲ, ಅನುತ್ಪಾದಕ ಆಸ್ತಿ ಸಹಿತ ಹಲವಾರು ಸಮಸ್ಯೆಗಳಿಂದ ಬಳಲುತ್ತಿವೆ. ಈ ಸಮಸ್ಯೆಗಳನ್ನು ತೊಡೆದು ಹಾಕಿ ಸದೃಢ, ಶಕ್ತಿಶಾಲಿ ಹಾಗೂ ಬೆಳೆಯುತ್ತಿರುವ ಜಾಗತಿಕ ಆರ್ಥಿಕ ಶಕ್ತಿಯೊಂದಿಗೆ ಕೈಜೋಡಿಸುವಂಥ ಸಮರ್ಥ ಬ್ಯಾಂಕಿಂಗ್ ವ್ಯವಸ್ಥೆಯನ್ನಾಗಿ ನಾವು ಬದಲಾಯಿಸಬೇಕಿದೆ. ಅದಕ್ಕಾಗಿ ಯೋಜನೆ ಸಿದ್ಧಪಡಿಸುತ್ತೇವೆ ಎಂದು ಸಚಿವ ಜೇಟ್ಲಿ ಪತ್ರಕರ್ತರಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ