ರಿಯಲ್‌ ಎಸ್ಟೇಟ್‌ಗೂ ಜಿಎಸ್‌ಟಿ


Team Udayavani, Oct 13, 2017, 6:50 AM IST

jetly.jpg

ವಾಷಿಂಗ್ಟನ್‌: ದೇಶದ ರಿಯಲ್‌ ಎಸ್ಟೇಟ್‌ ಉದ್ಯಮವೂ ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ಬರಲಿದೆಯೇ. ಇಂಥದ್ದೊಂದು ಸುಳಿವು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಕಡೆಯಿಂದಲೇ ಹೊರಬಿದ್ದಿದೆ. ಅಮೆರಿಕ ಪ್ರವಾಸ ದಲ್ಲಿರುವ ಅವರು, ಹಾರ್ವರ್ಡ್‌ ವಿವಿಯಲ್ಲಿ ನೀಡಿದ ಉಪನ್ಯಾಸದಲ್ಲಿ ಇಂಥದ್ದೊಂದು ಸಾಧ್ಯತೆಯನ್ನು ತೆರೆದಿಟ್ಟಿದ್ದಾರೆ. ನವೆಂಬರ್‌ ನಲ್ಲಿ ನಡೆಯಲಿರುವ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳ ಲಾಗುತ್ತದೆ ಎಂದು ಅವರು ಹೇಳಿದ್ದಾರೆ.

“ಭಾರತದಲ್ಲಿ ಅತಿ ಹೆಚ್ಚು ಹಣ ಹೂಡಿಕೆ ಯಾಗುವ ಪ್ರಮುಖ ಕ್ಷೇತ್ರಗಳಲ್ಲಿ ರಿಯಲ್‌ ಎಸ್ಟೇಟ್‌ ಉದ್ಯಮವೂ ಒಂದು. ಅಷ್ಟೇ ಅಲ್ಲ, ಅತಿ ಹೆಚ್ಚು ತೆರಿಗೆ ಹಣ ಸೋರಿಕೆಯಾಗುವ ಕ್ಷೇತ್ರಗಳ ಸಾಲಲ್ಲೂ ಇದು ಸೇರುತ್ತದೆ.  ಹಾಗಾಗಿ ಈ ಕ್ಷೇತ್ರವನ್ನು ಜಿಎಸ್‌ಟಿ ವ್ಯಾಪ್ತಿ ಯಡಿ ತರಬೇಕೆಂದು ಕೆಲವು ರಾಜ್ಯ ಸರಕಾರಗಳು ಒತ್ತಡ ಹೇರುತ್ತಿವೆ. ಆದರೆ ಕೆಲವು ರಾಜ್ಯಗಳು ಇದನ್ನು ವಿರೋಧಿಸಿವೆ. ಇಬ್ಬರದ್ದೂ ಪ್ರತ್ಯೇಕ ದೃಷ್ಟಿಕೋನಗಳಿವೆ. ಆದ್ದರಿಂದ ನವೆಂಬರ್‌ನಲ್ಲಿ ನಡೆಯಲಿರುವ ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು. ಎರಡೂ ದೃಷ್ಟಿ ಕೋನಗಳ ಬಗ್ಗೆ ಕೂಲಂಕಷವಾಗಿ ಚರ್ಚಿಸಿದ ಬಳಿಕವೇ ಒಂದು ನಿರ್ಧಾರಕ್ಕೆ ಬರಲಾಗುತ್ತದೆ’ ಎಂದು ಅರುಣ್ ಜೇಟ್ಲಿ ತಿಳಿಸಿದರು.

ಹಾಗೊಮ್ಮೆ ಜಿಎಸ್‌ಟಿ ವ್ಯಾಪ್ತಿಯೊಳಗೆ ರಿಯಲ್‌ ಎಸ್ಟೇಟ್‌ ಬಂದರೆ ಮನೆ, ನಿವೇಶನ ಖರೀದಿ ಮಾಡುವ, ಮಾರಾಟ ಮಾಡಲಿಚ್ಛಿ ಸುವ ಗ್ರಾಹಕರು ಒಂದು “ಅಂತಿಮ ತೆರಿಗೆ’ ಯನ್ನು ಮಾತ್ರ ಪಾವತಿಸಬೇಕಾಗುತ್ತದೆ ಎಂದು ತಿಳಿಸಿದ ಸಚಿವ ಜೇಟ್ಲಿ, ಅಂತಿಮ ತೆರಿಗೆಯನ್ನು ಅತ್ಯಲ್ಪವಾಗಿಸುವ ಮೂಲಕ ಗ್ರಾಹಕರಿಗೆ ಹೊರೆಯಾಗದಂತೆ ನೋಡಿಕೊಳ್ಳ ಲಾಗುವುದು ಎಂದೂ ಸ್ಪಷ್ಟಪಡಿಸಿದರು.

ಜಿಎಸ್‌ಟಿ ವ್ಯಾಪ್ತಿಗೆ ರಿಯಲ್‌ ಎಸ್ಟೇಟ್‌ ಉದ್ಯಮವನ್ನು ತರುವುದರಿಂದ ಈ ಕ್ಷೇತ್ರ ದಲ್ಲಿರುವ ಕಾಳದಂಧೆಯ ಮೇಲೂ ಕಡಿವಾಣ ಹೇರಲು ಸಾಧ್ಯ ಎಂದು ಜೇಟ್ಲಿ ಅಭಿಪ್ರಾಯಪಟ್ಟರು.

ಬ್ಯಾಂಕಿಂಗ್‌ ಕ್ಷೇತ್ರ ಸದೃಢಗೊಳಿಸುವ ಗುರಿ
ಬ್ಯಾಂಕಿಂಗ್‌ ಕ್ಷೇತ್ರವನ್ನು ಮತ್ತಷ್ಟು ಸದೃಢಗೊಳಿಸುವುದು ಭಾರತ ಸರಕಾರದ ಸದ್ಯದ ಗುರಿಯಾಗಿದೆ. ಸದ್ಯಕ್ಕೆ ಭಾರತೀಯ ಬ್ಯಾಂಕ್‌ಗಳು ವಸೂಲಾಗದ ಸಾಲ, ಅನುತ್ಪಾದಕ ಆಸ್ತಿ ಸಹಿತ ಹಲವಾರು ಸಮಸ್ಯೆಗಳಿಂದ ಬಳಲುತ್ತಿವೆ. ಈ ಸಮಸ್ಯೆಗಳನ್ನು ತೊಡೆದು ಹಾಕಿ ಸದೃಢ, ಶಕ್ತಿಶಾಲಿ ಹಾಗೂ ಬೆಳೆಯುತ್ತಿರುವ ಜಾಗತಿಕ ಆರ್ಥಿಕ ಶಕ್ತಿಯೊಂದಿಗೆ ಕೈಜೋಡಿಸುವಂಥ ಸಮರ್ಥ ಬ್ಯಾಂಕಿಂಗ್‌ ವ್ಯವಸ್ಥೆಯನ್ನಾಗಿ ನಾವು ಬದಲಾಯಿಸಬೇಕಿದೆ. ಅದಕ್ಕಾಗಿ ಯೋಜನೆ ಸಿದ್ಧಪಡಿಸುತ್ತೇವೆ ಎಂದು ಸಚಿವ ಜೇಟ್ಲಿ ಪತ್ರಕರ್ತರಿಗೆ ತಿಳಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.