ಎಚ್‌-1 ಬಿ ವೀಸಾ ಅಮಾನತು? ಅಮೆರಿಕದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಹಿನ್ನೆಲೆಯಲ್ಲಿ ಈ ಕ್ರಮ


Team Udayavani, Jun 13, 2020, 7:30 AM IST

ಎಚ್‌-1 ಬಿ ವೀಸಾ ಅಮಾನತು? ಅಮೆರಿಕದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಹಿನ್ನೆಲೆಯಲ್ಲಿ ಈ ಕ್ರಮ

ಅ.1ರಿಂದ ಪರಿಷ್ಕೃತ ನಿರ್ಧಾರ: ಮಾಧ್ಯಮ ವರದಿಯಲ್ಲಿ ಉಲ್ಲೇಖ
ಸದ್ಯ ಅಮೆರಿಕದಲ್ಲಿ ನೆಲೆಸಿರುವ ವೀಸಾ ಹೊಂದಿರುವವರಿಗೆ ಸಮಸ್ಯೆ ಇಲ್ಲ

ವಾಷಿಂಗ್ಟನ್‌: ಕೋವಿಡ್ ಹಿನ್ನೆಲೆಯಲ್ಲಿ ಅಮೆರಿಕದಲ್ಲಿ ಭಾರೀ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಹೀಗಾಗಿ, ಭಾರತೀಯ ಐಟಿ ವೃತ್ತಿಪರರಲ್ಲಿ ಹೆಚ್ಚು ಬೇಡಿಕೆ ಇರುವ ಎಚ್‌-1ಬಿ ಸೇರಿದಂತೆ ಹಲವಾರು ಉದ್ಯೋಗ ಸಂಬಂಧಿ ವೀಸಾಗಳನ್ನು ಅಮಾನತು ಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಚಿಂತನೆ ನಡೆಸಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಅಕ್ಟೋಬರ್‌ 1ರಿಂದ ಪ್ರಸ್ತಾವಿತ ಶಿಫಾರಸಗಳು ಜಾರಿಗೆ ಬರುವ ಸಾಧ್ಯತೆಗಳಿವೆ. ಇದರ ಜತೆಗೆ ನಿಯ ಮಗಳನ್ನು ಮುಂದಿನ ಹಣಕಾಸು ವರ್ಷಕ್ಕೂ ಅಮೆರಿಕ ಸರಕಾರ ವಿಸ್ತರಿಸುವ ಸಾಧ್ಯತೆಗಳೂ ಬರಬಹುದು ಎಂದು ಎಂದು ಅಧಿಕಾರಿಯೊಬ್ಬರ ಹೇಳಿಕೆ ಉಲ್ಲೇಖೀಸಿ “ದಿ ವಾಲ್‌ ಸ್ಟ್ರೀಟ್‌ ಜರ್ನಲ್‌’ ವರದಿ ಮಾಡಿದೆ. ಅಮಾನತು ತೆರವುಗೊಳಿಸುವವರೆಗೂ ಕೆಲಸ ಕ್ಕಾಗಿ ವಿದೇಶದಿಂದ ಯಾವುದೇ ಎಚ್‌-1ಬಿ ವೀಸಾದಾರರು ಬಾರದಂತೆ ತಡೆಯಬಹುದು. ಆದರೆ, ಈಗಾಗಲೇ ಅಮೆರಿಕದಲ್ಲಿ ನೆಲೆಸಿರುವ ವೀಸಾದಾರರಿಗೆ ಇದರಿಂದ ಪರಿಣಾಮ ಬೀರುವ ಸಾಧ್ಯತೆ ಇಲ್ಲ. ಎಚ್‌-1ಬಿ ವೀಸಾಗಳ ಜತೆಗೆ, ಅಲ್ಪಾವಧಿಯ ಪರಿಣಿತ ಕೆಲಸಗಾರರಿಗೆ ನೀಡ ಲಾಗುವ ಎಚ್‌-2ಬಿ, ಅಲ್ಪಾವಧಿಯ ಕೆಲಸಗಾ ರರಿಗೆ ನೀಡಲಾಗುವ ಜೆ-1, ಆಂತರಿಕ ಕಂಪನಿ ವರ್ಗಾವಣೆಗಾಗಿ ನೀಡಲಾಗುವ ಎಲ್‌-1 ವೀಸಾ ಗಳಿಗೂ ಈ ಅಮಾನತು ನಿಯಮ ಅನ್ವಯವಾ ಗಲಿದೆ ಎಂದು ವರದಿ ಹೇಳಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶ್ವೇತಭವನದ ವಕ್ತಾರ ಹೊಗನ್‌ ಗಿಡ್ಲಿ, ಅಮೆರಿಕದ ಕಾರ್ಮಿಕರ ಹಿತ ಕಾಯಲು ಅಗತ್ಯವಿರುವ ಹಲವು ಪ್ರಸ್ತಾವಗಳನ್ನು ಪರಿಗಣಿಸಲಾಗುತ್ತಿದೆ. ಆದರೆ, ಈವರೆಗೂ ಯಾವುದೇ ಅಂತಿಮ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ. ಈ ಮಧ್ಯೆ, ಯುಎಸ್‌ ಚೇಂಬರ್ಸ್‌ ಆಫ್ ಕಾಮರ್ಸ್‌ನ ಸಿಇಒ ಥಾಮಸ್‌ ಡೊನೊಹ್ಯೂ ಅವರು ಟ್ರಂಪ್‌ಗೆ ಪತ್ರ ಬರೆದು, ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಟ್ರಂಪ್‌ ವಿರುದ್ಧ ಬಿಡೆನ್‌ ವಾಗ್ಧಾಳಿ
ಅಮೆರಿಕ ಅಧ್ಯಕ್ಷ ಪಟ್ಟದ ರೇಸ್‌ನಲ್ಲಿರುವ ಹಾಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾಗೂ ಅವರ ಎದುರಾಳಿ, ಡೆಮಾಕ್ರಟಿಕ್‌ ಪಕ್ಷದ ನಾಯಕ ಜೋ ಬಿಡೆನ್‌, ನಡುವಿನ ಬಹಿರಂಗ ವಾಗ್ಧಾಳಿ ಮತ್ತಷ್ಟು ತಾರಕಕ್ಕೇರಿದೆ. ಈ ಬಾರಿ ಟ್ರಂಪ್‌ ಅವರು ಮೋಸದಾಟಗಳಿಂದ ಚುನಾ ವಣೆ ಗೆಲ್ಲಬಹುದು ಎಂದು ಬಿಡೆನ್‌ ಅನುಮಾನವನ್ನು ವ್ಯಕ್ತ ಪಡಿ ಸಿದ್ದಾರೆ. ಜೊತೆಗೆ, ಟ್ರಂಪ್‌ ವೈಟ್‌ಹೌಸ್‌ ಬಿಡಲು ನಿರಾಕರಿಸಿದರೆ ಸೇನೆಯೇ ಅವರನ್ನು ಹೊರಹಾಕುತ್ತದೆ ಎಂದು ಲೇವಡಿ ಮಾಡಿದ್ದಾರೆ. ಬಿಡೆನ್‌ವರ ಟೀಕೆಯನ್ನು ಸಾರಾಸಗಟಾಗಿ ತಳ್ಳಿಹಾಕಿರುವ ಟ್ರಂಪ್‌ ಅವರ ಚುನಾವಣಾ ಪ್ರಚಾರದ ನಿರ್ದೇಶಕ ಟಿಮ್‌ ಮುರ್ಟಾಫ್, “”ಇಂಥ ಅನುಮಾನಗಳು ಆಧಾರ ರಹಿತ. ಜನರಿಗೆ ಚುನಾವಣೆಗಳ ಮೇಲೆ ಅಪನಂಬಿಕೆ ಬರುವಂತೆ ಬಿಡೆನ್‌ ಮಾತನಾಡಿರುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.