ಉಗ್ರ ಸಯೀದ್‌ ನಿಷೇಧ ತೆರವು!


Team Udayavani, Oct 27, 2018, 6:00 AM IST

27-hafeez.jpg

ಇಸ್ಲಾಮಾಬಾದ್‌: ಮುಂಬೈ ದಾಳಿ ಸಂಚುಕೋರ ಹಫೀಜ್‌ ಸಯೀದ್‌ ನೇತೃತ್ವದ ಜಮಾತ್‌ ಉದ್‌ ದಾವಾ ಸಂಘಟನೆ ಪಾಕಿಸ್ಥಾನ‌ದಲ್ಲಿ ಇನ್ನು ಮುಕ್ತವಾಗಿ ಕಾರ್ಯಾಚರಣೆ ಮಾಡಬಹುದು! ವಿಶ್ವಸಂಸ್ಥೆಯೇ ಈ ಸಂಘಟನೆಗಳನ್ನು ನಿಷೇಧಿತ ಎಂದು ಘೋಷಿಸಿದ್ದರೂ, ಪಾಕಿಸ್ಥಾನ ಈ ಸಂಘಟನೆಗೆ ವಿಧಿಸಿದ ನಿಷೇಧವನ್ನು ತೆಗೆದುಹಾಕಿದೆ. ಜಮಾತ್‌ ಉದ್‌ ದಾವಾ ಹಾಗೂ ಫ‌ಲಾಹ್‌ -ಇ- ಇನ್ಸಾನಿಯತ್‌ ಸಂಘಟನೆಗಳನ್ನು ಸಯೀದ್‌ ಸ್ಥಾಪಿಸಿದ್ದು, ಇವು ಉಗ್ರ ಚಟುವಟಿಕೆಗಳಿಗೆ ಹಣಕಾಸು ಒದಗಿಸುವ ಮೂಲ ಉದ್ದೇಶ ಹೊಂದಿವೆ. ವಿಶ್ವಸಂಸ್ಥೆಯ ನಿಷೇದಿಂದಾಗಿ ಕಳೆದ ಫೆಬ್ರವರಿಯಲ್ಲಿ ಪಾಕಿಸ್ಥಾನ ಅಧ್ಯಾದೇಶ ಹೊರಡಿಸಿ ಇವುಗಳನ್ನು ನಿಷೇಧಿತ ಎಂದು ಘೋಷಿಸಿತ್ತು. ಆದರೆ ಈಗ ಈ ಅಧ್ಯಾದೇಶ ಅವಧಿ ಮುಗಿದೆ. ಅದನ್ನು ನವೀಕರಿಸಲು ಇಮ್ರಾನ್‌ ಖಾನ್‌ ನೇತೃತ್ವದ ಪಾಕ್‌ ಸರ್ಕಾರ ಮುಂದಾಗಿಲ್ಲ. ಈ ಮೂಲಕ ಅದು ಜಾಣ ಮರೆವು ಪ್ರದರ್ಶಿಸಿದೆ.

ಸಂಘಟನೆಗಳನ್ನು ನಿಷೇಧಿಸಿ ಫೆಬ್ರವರಿಯಲ್ಲಿ ಪಾಕ್‌ ಅಧ್ಯಕ್ಷರಾಗಿದ್ದ ಮಮೂನ್‌ ಹುಸೈನ್‌ ಹೊರಡಿಸಿದ್ದ ಅಧ್ಯಾದೇಶ ವಿರುದ್ಧ ಜೆಯುಡಿ ಕೋರ್ಟ್‌ ಮೊರೆ ಹೋಗಿತ್ತು. ಗುರುವಾರದ ಪ್ರಕರಣದ ವಿಚಾರಣೆ ವೇಳೆ ಸಯೀದ್‌ ಪರ ವಕೀಲರು ಇಸ್ಲಾಮಾಬಾದ್‌ ಹೈ ಕೋರ್ಟ್‌ಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಕೋರ್ಟ್‌ನಲ್ಲಿ ಕೇಸ್‌ ವಜಾಗೊಂಡಿದೆ. ಸರಕಾರ ಅಧ್ಯಾದೇಶವನ್ನು ಪುನಃ ಜಾರಿಗೊಳಿಸಿದರೆ ಮತ್ತೂಂದು ದಾವೆಯನ್ನು ಸಲ್ಲಿಸಬಹುದು ಎಂದು ಕೋರ್ಟ್‌ ಪ್ರಕರಣವನ್ನು ವಜಾಗೊಳಿಸಿದೆ.

ಸೆಪ್ಟೆಂಬರ್‌ನಲ್ಲೇ ನಿಷೇಧ ತೆರವು: ಕಳೆದ ಸೆಪ್ಟೆಂಬರ್‌ನಲ್ಲೇ ನಿಷೇಧ ತೆರವುಗೊಳಿಸಿದ ಬಗ್ಗೆ ಪಾಕಿಸ್ಥಾನ ರಾಷ್ಟ್ರೀಯ ಭಯೋತ್ಪಾದನೆ ತಡೆ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ವಿವರಿಸಲಾಗಿದೆ. ಜಮಾತ್‌ ಉದ್‌ ದಾವಾ ಹಾಗೂ ಫ‌ಲಾಹ್‌ ಇ ಇನ್ಸಾನಿಯತ್‌ ಫೌಂಡೇಶನ್‌ಗಳು ನಿಷೇಧಿತವಲ್ಲ ಎಂದು ಪ್ರಾಧಿಕಾರ ಪ್ರಕಟಿಸಿದ ಪಟ್ಟಿಯಲ್ಲಿ ವಿವರಿಸಲಾಗಿದೆ. ಆದರೆ ಇವುಗಳನ್ನು ಗೃಹ ಸಚಿವಾಲಯದ ಪರಿವೀಕ್ಷಣೆಯಲ್ಲಿರುವ ಸಂಸ್ಥೆಗಳು ಎಂದು ಪಟ್ಟಿಯಲ್ಲಿ ಹೆಸರಿಸಲಾಗಿದೆ. ಈ ಮಧ್ಯೆ ಪಾಕಿಸ್ತಾನದ ಸುಪ್ರೀಂ ಕೋರ್ಟ್‌ ಕೂಡ ಈ ಸಂಸ್ಥೆಗಳು ದತ್ತಿ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಬಹುದು ಎಂದು ಸೆಪ್ಟಂಬರ್‌ನಲ್ಲೇ ಸೂಚನೆ ನೀಡಿತ್ತು.

ಟಾಪ್ ನ್ಯೂಸ್

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.