ಹಫೀಜ್‌ ಸಯೀದ್‌ ನಿಂದ ದೇಶಕ್ಕೆ ಗಂಭೀರ ಅಪಾಯ: ಪಾಕ್‌ ರಕ್ಷಣಾ ಸಚಿವ


Team Udayavani, Feb 21, 2017, 11:16 AM IST

Hafiz Saeed-700.jpg

ಲಾಹೋರ್‌ : ಮುಂಬಯಿ ದಾಳಿಯ ಮಾಸ್ಟರ್‌ ಮೈಂಡ್‌ ಆಗಿರುವ ಜಮಾತ್‌ ಉದ್‌ ದಾವಾ ಉಗ್ರ ಸಂಘಟನೆಯ ಮುಖ್ಯಸ್ಥ  ಹಫೀಜ್‌ ಸಯೀದ್‌ ನಿಂದ ಪಾಕಿಸ್ಥಾನದ ಭದ್ರತೆಗೆ ಭಾರೀ ಅಪಾಯವಿದೆ ಎಂದು ಪಾಕ್‌ ಸರಕಾರ ಇದೇ ಮೊದಲ ಬಾರಿಗೆ ಒಪ್ಪಿಕೊಂಡಿದೆ.

ಉಗ್ರ ನಿಗ್ರಹ ಕಾನೂನಿನಡಿ ನಿಷೇಧಿತರ ಪಟ್ಟಿಗೆ ಸೇರಿಸಲಾಗಿರುವ ಆತನು ದೇಶದ ಭದ್ರತೆಗೆ ಅಪಾಯಕಾರಿಯಾಗಿದ್ದಾನೆ; ಆದುದರಿಂದಲೇ ಆತನನ್ನು ದೇಶದ ಹಿತಾಸಕ್ತಿಯಲ್ಲಿ ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಪಾಕ್‌ ಸರಕಾರ ಹೇಳಿದೆ. 

ಹಾಫೀಜ್‌ ಸಯೀದ್‌ ಪಾಕಿಸ್ಥಾನದ ಭದ್ರತೆಗೆ ಅತ್ಯಂತ ಅಪಾಯಕಾರಿ ಮನುಷ್ಯ ಎಂದು ಹೇಳಿರುವವರು ಸ್ವತಃ ಪಾಕಿಸ್ಥಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್. ಜರ್ಮನಿಯ ಮ್ಯೂನಿಕ್‌ನಲ್ಲಿ ಏರ್ಪಟ್ಟ ಅಂತಾರಾಷ್ಟ್ರೀಯ ಭದ್ರತಾ ಸಮಾವೇಶದಲ್ಲಿ ಅವರು ಪಾಕ್‌ ಸರಕಾರದ ಪರವಾಗಿ ಇದೇ ಮೊದಲ ಬಾರಿಗೆ ಈ ಸತ್ಯವನ್ನು ಒಪ್ಪಿಕೊಂಡು ಹೇಳಿದರು. 

ಹಾಫೀಜ್‌ ಸಯೀದ್‌ನನ್ನು ಕಳೆದ ಜನವರಿ 30ರಂದು ಉಗ್ರ ನಿಗ್ರಹ ಕಾಯಿದೆಯ ನಾಲ್ಕನೇ ಪರಿಚ್ಛೇದದಡಿ ಬಂಧಿಸಿ ದೇಶದ ಬೃಹತ್‌ ಹಿತಾಸಕ್ತಿಯಲ್ಲಿ  ಗೃಹ ಬಂಧನದಲ್ಲಿ ಇರಿಸಲಾಗಿದೆ. ಪಾಕ್‌ ಸರಕಾರದ ಈ ಕ್ರಮವನ್ನು ಸಯೀದ್‌ ನ ಪಕ್ಷ ಹಾಗೂ ಮಿತ್ರ ಕೂಟದವರು ತೀವ್ರವಾಗಿ ವಿರೋಧಿಸಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. 

ಈ ತಿಂಗಳ ಆದಿಯಲ್ಲಿ ಹಾಫೀಜ್‌ ಸಯೀದ್‌ನನ್ನು ಪಾಕ್‌ ಸರಕಾರ ದೇಶ ನಿರ್ಗಮನ ನಿಷೇಧಿತರ ಪಟ್ಟಿಗೆ ಸೇರಿಸಿತ್ತು. ಇದರಿಂದಾಗಿ ಆತ ದೇಶದಿಂದ ಹೊರಗೆ ಹೋಗುವಂತಿಲ್ಲ; ವಿದೇಶ ಪ್ರಯಾಣ ಕೈಗೊಳ್ಳುವಂತಿಲ್ಲ. 

ಪಾಕಿಸ್ಥಾನದ ಆದ್ಯಂತ ಈಚೆಗೆ ಎಂಟು ಭಯೋತ್ಪಾದಕ ಕೃತ್ಯಗಳು ನಡೆದು ನೂರಕ್ಕೂ ಹೆಚ್ಚು ಜನರು ಬಲಿಯಾಗಿದ್ದುದನ್ನು ಅನುಸರಿಸಿ ಹಾಫೀಜ್‌ ಸಯೀದ್‌ನನ್ನು ಪಾಕ್‌ ಸರಕಾರ ಬಂಧಿಸಿತ್ತು. ಸಿಂಧ್‌ ಪ್ರಾಂತ್ಯದ ಸೂಫಿ ದರ್ಗಾದ ಮೇಲೆ ನಡೆದಿದ್ದ ಐಸಿಸ್‌ ಬಾಂಬ್‌ ದಾಳಿಗೆ 88 ಜನರು ಬಲಿಯಾಗಿದ್ದರು. 

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.