ದಾವೂದ್ ಹಸ್ತಾಂತರಿಸಿ; ಮಾತುಕತೆಗೆ ಬನ್ನಿ: ಜೈಶಂಕರ್
Team Udayavani, Nov 16, 2019, 5:40 AM IST
ಲಂಡನ್: ಭಾರತದ ಜತೆಗೆ ಪಾಕಿಸ್ಥಾನ ಉತ್ತಮ ಬಾಂಧವ್ಯ ಹೊಂದ ಬಯಸಿದ್ದೇ ಆದಲ್ಲಿ, ಕೇಂದ್ರ ಸರಕಾರ ಈಗಾಗಲೇ ಸಲ್ಲಿಸಿರುವ ಪಟ್ಟಿಯಲ್ಲಿರುವ ವ್ಯಕ್ತಿಗಳನ್ನು ನಮಗೆ ಹಸ್ತಾಂತರ ಮಾಡಬೇಕು. ಅದು ಭಯೋತ್ಪಾದನೆಗೇ ಮುಕ್ತವಾಗಿ ಬೆಂಬಲ ಸೂಚಿಸುತ್ತಿರುವ ಹಂತದಲ್ಲಿ ಅದರ ಜತೆಗೆ ಯಾರು ಮಾತುಕತೆ ನಡೆಸುತ್ತಾರೆ ಎಂದು ವಿದೇಶಾಂಗ ಎಸ್.ಜೈಶಂಕರ್ ಪ್ರಶ್ನಿಸಿದ್ದಾರೆ.
ಫ್ರಾನ್ಸ್ನ “ಲಿ ಮೊಂಡೇ’ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಭಾರತಕ್ಕೆ ಉಗ್ರಗಾಮಿ ಗಳನ್ನು ಕಳುಹಿಸುವ ಅಂಶವನ್ನು ಅದು ನಿರಾಕರಿಸಿಯೂ ಇಲ್ಲ ಎಂದು ಹೇಳಿದ್ದಾರೆ. ಅಂಥ ರಾಷ್ಟ್ರದ ಜತೆಗೆ ಯಾರು ತಾನೇ ಮಾತುಕತೆ ನಡೆಸಲು ಸಿದ್ಧರಾಗಿರುತ್ತಾರೆ ಎಂದು ಪ್ರಶ್ನಿಸಿದ್ದಾರೆ.
“ನಮ್ಮ ದೇಶದಲ್ಲಿ ಹಲವು ಕುಕೃತ್ಯಗಳನ್ನು ಮಾಡಿದ ದಾವೂದ್ ಇಬ್ರಾಹಿಂ, ಮೂಲತಃ ಮುಂಬಯಿಯವನು. ಅವನನ್ನು ವಿಶ್ವಸಂಸ್ಥೆಯೇ ಭಯೋತ್ಪಾದಕ ಎಂದು ಘೋಷಣೆ ಮಾಡಿದೆ. ಆತನನ್ನು ಏಕೆ ಹಸ್ತಾಂತರ ಮಾಡಿಲ್ಲ’ ಎಂದು ಪ್ರಶ್ನಿಸಿದರು.
ರಾಷ್ಟ್ರೀಯತೆಯ ಬಗ್ಗೆ ಪ್ರಸ್ತಾಪ ಮಾಡಿದ ಜೈಶಂಕರ್, ಅದನ್ನು “ಪಾಶ್ಚಿಮಾತ್ಯ ರಾಷ್ಟ್ರಗಳ ದೃಷ್ಟಿಕೋನದಲ್ಲಿ ನೋಡಬಾರದು’ ಎಂದರು. ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ಹಿಂಪಡೆ ಯುವುದಕ್ಕೆ ಮೊದಲು ಕೆಲವೊಂದು ಭದ್ರತಾ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗಿತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ