ಪ್ರವಾಹ: ಪಾಕ್ನಲ್ಲಿ ಮುಸ್ಲಿಂ ಕುಟುಂಬಗಳಿಗೆ ದೇಗುಲದ ಆಶ್ರಯ
Team Udayavani, Sep 12, 2022, 6:55 AM IST
ಇಸ್ಲಾಮಾಬಾದ್: ಪ್ರವಾಹದ ಸುಳಿಯಲ್ಲಿ ಸಿಲುಕಿರುವ ಪಾಕಿಸ್ಥಾನದಲ್ಲಿ ದೇಗುಲವೊಂದು ಮುಸ್ಲಿಂ ಸಮುದಾಯದವರಿಗೆ ಆಶ್ರಯ ನೀಡಿ ಮಾನವೀಯತೆ ಮೆರೆದಿದೆ.
ಬಲೂಚಿಸ್ಥಾನ ಪ್ರಾಂತದಲ್ಲಿನ ಬಾಬಾ ಮಧೋದಾಸ್ ಮಂದಿರದಲ್ಲಿ ಈ ರೀತಿ ಆಶ್ರಯ ನೀಡಲಾಗುತ್ತಿದೆ. ಈ ದೇಗುಲ ಗುಡ್ಡದ ಮೇಲ್ಭಾಗದಲ್ಲಿದ್ದು, ಪ್ರವಾಹದ ಸಮಸ್ಯೆಗೆ ಸಿಲುಕಿಕೊಂಡಿಲ್ಲ. ಗುಡ್ಡದ ಕೆಳಗಿರುವ ಮನೆಗಳಿಗೆ ನೀರು ನುಗ್ಗಿದ್ದು, ಜನರು ಗ್ರಾಮ ಬಿಟ್ಟು ಹೊರಗೆ ಹೋಗದಂತಾಗಿದೆ.
ದೇಗುಲವನ್ನು ನಿರ್ವಹಿಸುತ್ತಿರುವ ಹಿಂದೂ ಕುಟುಂಬಗಳು ದೇಗುಲದ ಧ್ವನಿವರ್ಧಕಗಳ ಮೂಲಕ ಜನರಿಗೆ ಎಚ್ಚರಿಕೆ ಕೊಟ್ಟಿದ್ದಾರೆ. “ದೇಗುಲದ ಬಾಗಿಲು ತೆರೆದಿದೆ. ನೀವು ಇಲ್ಲಿಯೇ ಬಂದು ವಾಸ ಹೂಡಿ’ ಎಂದು ಮುಸ್ಲಿಂ ಸಮುದಾಯಕ್ಕೆ ಕರೆ ಕೊಟ್ಟಿದೆ.
ದೇಗುಲದಲ್ಲಿ 100 ಕೊಠಡಿಗಳಿದ್ದು, ಸುಮಾರು 200-300 ಜನರಿಗೆ ಆಶ್ರಯ ನೀಡಲಾಗಿದೆ. ಪೂರ್ತಿಯಾಗಿ ದ್ವೀಪವಾಗಿರುವ ಈ ಗ್ರಾಮಕ್ಕೆ ಸರಕಾರವು ಹೆಲಿಕಾಪ್ಟರ್ ಮೂಲಕ ದಿನಸಿ ಒದಗಿಸುತ್ತಿದ್ದು, ದೇಗುಲದಲ್ಲಿಯೇ ಎಲ್ಲರಿಗೂ ಅಡುಗೆ ಮಾಡಿ ಹಂಚಲಾಗುತ್ತಿದೆ. ಕುರಿ, ಮೇಕೆಗಳಿಗೂ ದೇಗುಲದ ಆವರಣದಲ್ಲಿಯೇ ಸ್ಥಳಾವಕಾಶ ಮಾಡಿಕೊಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ