ಭಾರತ, ಪಾಕ್ ಕ್ರಿಕೆಟ್ ಪಂದ್ಯದ ಬಳಿಕ ಬ್ರಿಟನ್ ನಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿ
ಲೀಸೆಸ್ಟರ್ ನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ
Team Udayavani, Sep 20, 2022, 12:18 PM IST
ಯುನೈಟೆಡ್ ಕಿಂಗ್ ಡಮ್: ಬ್ರಿಟನ್ ನ ಲೀಸೆಸ್ಟೆರ್ ನಲ್ಲಿ ಹಿಂದೂ ದೇವಾಲಯ ಗುರಿಯಾಗಿರಿಸಿ ದಾಳಿ ನಡೆಸಿ, ಹಿಂಸಾಚಾರ ಎಸಗಿರುವ ಘಟನೆ ವಿರುದ್ಧ ಲಂಡನ್ ನಲ್ಲಿರುವ ಭಾರತೀಯ ಹೈ ಕಮಿಷನ್ ತೀವ್ರವಾಗಿ ಖಂಡಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:‘ಲಂಕೆ’ಯಲ್ಲಿ ವರ್ಷದ ಹರ್ಷ!; ಸಂಚಾರಿ ವಿಜಯ್ ಗೆ ಗೆಲುವು ಅರ್ಪಣೆ
ಈ ದಾಳಿಯಲ್ಲಿ ಶಾಮೀಲಾದವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕೆಂದು ರಾಯಭಾರ ಕಚೇರಿ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ. ಪೂರ್ವ ಲೀಸೆಸ್ಟೆರ್ ನಲ್ಲಿರುವ ಹಿಂದೂ ದೇವಾಲಯವನ್ನು ಗುರಿಯಾಗಿರಿಸಿ ದಾಳಿ ನಡೆಸಿ, ಕೇಸರಿ ಧ್ವಜವನ್ನು ಎಳೆದು ಕೆಳಗೆ ಹಾಕಿದ ಘಟನೆ ನಂತರ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಇತ್ತೀಚೆಗೆ ನಡೆದ ಏಷ್ಯಾ ಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ನಡೆದ ನಂತರ ಯುನೈಟೆಡ್ ಕಿಂಗ್ ಡಮ್ ನಲ್ಲಿ ಹಿಂದೂ ಮತ್ತು ಮುಸ್ಲಿಮ್ ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಯುಕೆ ಪೊಲೀಸರ ಸಮ್ಮುಖದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಿಂದೂ ದೇವಾಲಯದ ಆವರಣ ಹತ್ತಿ, ಕೇಸರಿ ಧ್ವಜವನ್ನು ಕಿತ್ತೆಸೆದ ಘಟನೆ ವಿಡಿಯೋದಲ್ಲಿ ದಾಖಲಾಗಿದೆ.
ಘರ್ಷಣೆ ಸಂಭವಿಸಿದ ನಂತರ ಲೀಸೆಸ್ಟರ್ ನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ ಎಂದು ವರದಿ ತಿಳಿಸಿದೆ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಹಿಂಸಾಚಾರ ನಡೆಸಲು ಸಂಚು ನಡೆಸಿದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಯುಕೆ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು