ಆಸ್ಟ್ರೇಲಿಯಾದಲ್ಲಿ ಮತ್ತೆ ಹಿಂದೂ ದೇಗುಲ ಧ್ವಂಸ: 2 ತಿಂಗಳ ಅವಧಿಯಲ್ಲಿ ನಡೆದ ನಾಲ್ಕನೇ ಘಟನೆ
Team Udayavani, Mar 4, 2023, 11:58 AM IST
ಬ್ರಿಸ್ಬೇನ್: ಹಿಂದೂ ದೇಗುಲವನ್ನು ಧ್ವಂಸಗೊಳಿಸಿರುವ ಮತ್ತೊಂದು ಪ್ರಕರಣ ಆಸ್ಟ್ರೇಲಿಯಾದ ಬ್ರಿಸ್ಬೇನ್ ನಲ್ಲಿ ಬೆಳಕಿಗೆ ಬಂದಿದೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ನಡೆದ ನಾಲ್ಕನೇ ಘಟನೆ ಇದಾಗಿದೆ.
ಬ್ರಿಸ್ಬೇನ್ನ ದಕ್ಷಿಣ ಭಾಗದಲ್ಲಿರುವ ಬರ್ಬ್ಯಾಂಕ್ ನ ಸೂಬರ್ಬ್ ನಗರದಲ್ಲಿರುವ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನವನ್ನು ಧ್ವಂಸಗೊಳಿಸಿದ್ದು,ಗೋಡೆಗಳ ಮೇಲೆ ಹಿಂದೂ ವಿರೋಧಿ ಬರಹವನ್ನು ಬರೆದಿದ್ದಾರೆ. ಖಲಿಸ್ತಾನಿ ಬೆಂಬಲಿಗರು ಈ ಕೃತ್ಯವನ್ನು ಎಸಗಿದ್ದಾರೆ ಎಂದು ʼಆಸ್ಟ್ರೇಲಿಯಾ ಟುಡೇʼ ವರದಿ ಮಾಡಿದೆ.
ಶನಿವಾರ( ಮಾ.4 ರಂದು) ಮುಂಜಾನೆ ಪ್ರಾರ್ಥನೆಗೆಂದು ಭಕ್ತರು ದೇವಸ್ಥಾನಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಭಕ್ತರು ಹಾಗೂ ದೇವಸ್ಥಾನದ ಆರ್ಚಕರು ನನಗೆ ಕರೆ ಮಾಡಿ ಇದರೆ ಬಗ್ಗೆ ಮಾಹಿತಿ ಕೊಟ್ಟರು. ಈ ಕುರಿತು ಮ್ಯಾನೇಜ್ ಮೆಂಟ್ ನೊಂದಿಗೆ ಸಭೆ ನಡೆಸಿ ಪೊಲೀಸರಿಗೆ ವಿವರವಾಗಿ ಹೇಳಲಿದ್ದೇವೆ ಎಂದು ದೇವಸ್ಥಾನದ ಅಧ್ಯಕ್ಷ ಸತೀಂದರ್ ಶುಕ್ಲಾ ಹೇಳಿದ್ದಾರೆ.
ಇತ್ತೀಚೆಗೆ ಬ್ರಿಸ್ಬೇನ್ ನ ಗಾಯತ್ರಿ ಮಂದಿರಕ್ಕೆ ಖಲಿಸ್ತಾನ್ ದುಷ್ಕರ್ಮಿಗಳು ಬೆದರಿಕೆ ಕರೆಯನ್ನು ಮಾಡಿದ್ದರು. ಇದಕ್ಕೂ ಮುನ್ನ ಆಸ್ಟ್ರೇಲಿಯಾದಲ್ಲಿನ ಐತಿಹಾಸಿಕ ಶ್ರೀ ಶಿವ-ವಿಷ್ಣು ದೇಗುಲವನ್ನು ಖಲಿಸ್ತಾನಿ ಪರ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದರು. ಮಿಲ್ ಪಾರ್ಕ್ ಬಳಿಯ ಸ್ವಾಮಿ ನಾರಾಯಣ ದೇಗುಲವನ್ನು ಜ.12ರಂದು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ