ಹಾಂಕಾಂಗ್‌ನಲ್ಲಿ ಸೇನೆಗೂ ಬಗ್ಗದ ಯುವಜನ; ಉದ್ರಿಕ್ತರಿಂದ ಬಿಲ್ಲು-ಬಾಣಗಳ ದಾಳಿ


Team Udayavani, Nov 18, 2019, 12:52 AM IST

honkong-17-11

ಹಾಂಕಾಂಗ್‌: ಪ್ರಜಾಪ್ರಭುತ್ವಕ್ಕಾಗಿ ಕಳೆದ 5 ತಿಂಗಳಿಂದ ಹಾಂಕಾಂಗ್‌ನಲ್ಲಿ ನಡೆಯುತ್ತಿರುವ ಯುವಜನತೆಯ ಪ್ರತಿಭಟನೆ, ಹಿಂಸಾಚಾರ ರವಿವಾರ ಮತ್ತಷ್ಟು ವಿಷಮ ಸ್ಥಿತಿಗೆ ತಿರುಗಿದೆ. ಹೋರಾಟ ಹತ್ತಿಕ್ಕಲು ಚೀನ ಸರಕಾರ, ತನ್ನ ಸೇನೆಯನ್ನು (ಪಿಎಲ್‌ಎ) ಹಾಂಕಾಂಗ್‌ ನಗರಕ್ಕೆ ರವಾನಿಸಿರುವ ಹಿನ್ನೆಲೆಯಲ್ಲಿ, ಮತ್ತಷ್ಟು ರೊಚ್ಚಿಗೆದ್ದಿರುವ ಜನತೆ ಮಾರಕಾಸ್ತ್ರ ಹಿಡಿದು ಬೀದಿಗಿಳಿದು, ಸೇನೆ ಹಾಗೂ ಭದ್ರತಾ ಪಡೆಗಳ ಮೇಲೆ ದಾಳಿ ಆರಂಭಿಸಿದ್ದಾರೆ. ರವಿವಾರ, ಪ್ರತಿಭಟನಕಾರರ ಬಿಲ್ಲು ಬಾಣದ ದಾಳಿಗೆ ಒಬ್ಬ ಪೊಲೀಸ್‌ ಸಿಬಂದಿ ಗಾಯಗೊಂಡಿದ್ದಾರೆ. ಉದ್ರಿಕ್ತನೊಬ್ಬ ಬಿಟ್ಟ ಬಾಣವು, ಪೊಲೀಸ್‌ ಸಿಬಂದಿಯ ಕಾಲನ್ನು ತೂರಿಕೊಂಡು ಹಿಂಬದಿಯಿಂದ ಹೊರ ಬಂದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಶ್ವವಿದ್ಯಾಲಯ ವಶಕ್ಕೆ ಪಡೆದ ಉದ್ರಿಕ್ತರು: ನಗರದ ಕೊವ್ಲೂನ್‌ ಪ್ರಾಂತ್ಯದಲ್ಲಿ, ಹಾಂಕಾಂಗ್‌ ಪಾಲಿಟೆಕ್ನಿಕ್‌ ವಿಶ್ವವಿದ್ಯಾಲಯದ ಬಳಿ ಪ್ರತಿಭಟನಾಕಾರರು ತೀವ್ರ ಹಿಂಸಾಚಾರ ನಡೆಸಿದ್ದಾರೆ. ವಿವಿಯ ಕ್ಯಾಂಪಸ್‌ ಅನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದ ಪ್ರತಿಭಟನಾಕಾರರು, ಕ್ರಾಸ್‌-ಹಾರ್ಬರ್‌ ಸುರಂಗ ಮಾರ್ಗದ ಸಂಚಾರ ತಡೆಹಿಡಿದಿದ್ದರು. ಹೀಗಾಗಿ, ಪೊಲೀಸರು ಜಲಫಿರಂಗಿ ಮತ್ತು ಅಶ್ರುವಾಯು ಸಿಡಿಸಿ, ಪ್ರತಿಭಟನಾ ಕಾರರನ್ನು ಚದುರಿಸಿದರು. ಇದಲ್ಲದೇ, ಹಾಂಕಾಂಗ್‌ನ ಹಲವು
ವಿವಿಗಳು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಪ್ರತಿಭಟನಾಕಾರರು ವಶಪಡಿಸಿಕೊಂಡಿದ್ದಾರೆ.

ಪೊಲೀಸರಿಗೆ ಸೆಡ್ಡು: ಪ್ರತಿಭಟನಾಕಾರರು ತಮ್ಮನ್ನು ಪ್ರತಿಬಂಧಿಸಲು ಬರುವ ಪೊಲೀಸ್‌ ವಾಹನಗಳ ಮೇಲೆ ಪೆಟ್ರೋಲ್‌ ಬಾಂಬ್‌ಗಳನ್ನು ಎಸೆಯುತ್ತಿದ್ದಾರೆ.

ಹಿರಿಯರಿಗೆ ಸವಾಲು: ಯುವಜನರ ಪ್ರತಿಭಟನೆ ಮೇರೆ ಮೀರುತ್ತಿದ್ದರೆ, ಮಧ್ಯ ವಯಸ್ಸಿನ ನಾಗರಿಕರು, ರಸ್ತೆಗೆ ಇಳಿದು ಪ್ರತಿಭಟನಾಕಾರರು ರಸ್ತೆ ತಡೆಗೆ ಬಳಸುವ ಬ್ಯಾರಿಕೇಡ್‌ಗಳು, ಟೈರುಗಳನ್ನು ರಸ್ತೆಯ ಪಕ್ಕಕ್ಕೆ ಸರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲೆತ್ನಿಸುತ್ತಿದ್ದಾರೆ. ಆದರೆ, ನಾಗರಿಕರು ಹಾಗೆ ಸ್ವಚ್ಛ ಮಾಡಿ ತೆರಳಿದ ಬೆನ್ನಲ್ಲೇ ಕೆಲವು ಕಪ್ಪು ಟಿ-ಶರ್ಟ್‌ ಧರಿಸಿದ ಯುವಜನರು, ರಸ್ತೆ ಮೇಲೆ ಮತ್ತೆ ಟೈರು, ಬ್ಯಾರಿಕೇಡ್‌ಗಳನ್ನು ತಂದು ಹಾಕಿ ಪ್ರತಿಭಟನೆ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.