ಸಯೀದ್ ವಿರುದ್ಧ ಸಾಕ್ಷ್ಯವಿದ್ದರೆ ICJಗೆ ಹೋಗಿ: ಪಾಕ್ ಪ್ರಧಾನಿ
Team Udayavani, Nov 30, 2017, 6:52 PM IST
ಇಸ್ಲಾಮಾಬಾದ್ : “ಜಮಾತ್ ಉದ್ ದಾವಾ ಸಂಘಟನೆಯ ಮುಖ್ಯಸ್ಥ ಹಾಫೀಜ್ ಸಯೀದ್ ಜೈಲಿನಲ್ಲಿ ಇರಬೇಕೆಂದು ಬಯಸುವಿರಾ ? ಆತನ ಉಗ್ರ ಕೃತ್ಯಗಳ ಬಗ್ಗೆ ನಿಮ್ಮಲ್ಲಿ ಸಾಕ್ಷ್ಯ ಇದೆಯಾ ? ಹಾಗಿದ್ದರೆ ನೀವು ಅಂತಾರಾಷ್ಟ್ರೀಯ ಕೋರ್ಟಿಗೆ (ICJ) ಹೋಗಿ” ಎಂದು ಪಾಕ್ ಪ್ರಧಾನಿ ಶಾಹಿದ್ ಕಖಾನ್ ಅಬ್ಟಾಸಿ ಭಾರತಕ್ಕೆ ಅಪ್ಪಣೆ ಕೊಡಿಸಿದ್ದಾರೆ.
ಹಾಫೀಜ್ ಸಯೀದ್ ನನ್ನು ಲಾಹೋರ್ ಹೈಕೋರ್ಟ್ ಗೃಹ ಬಂಧನದಿಂದ ಬಿಡುಗಡೆಗೊಳಿಸಿರುವುದನ್ನು ಸಮರ್ಥಿಸಿಕೊಂಡ ಪಾಕ್ ಪ್ರಧಾನಿ, “ಸಯೀದ್ ಉಗ್ರನೆಂದು ಭಾರತ ಬರೀ ಆರೋಪಗಳನ್ನು ಮಾಡುತ್ತಿದೆಯೇ ಹೊರತು ಯಾವುದೇ ಸಾಕ್ಷ್ಯಗಳನ್ನು ಈ ತನಕ ನೀಡಲು ಅದಕ್ಕೆ ಸಾಧ್ಯವಾಗಿಲ್ಲ’ ಎಂದು ಹೇಳಿದರು.
“ನಿಮ್ಮ ಬಳಿ (ಭಾರತ) ಸಯೀದ್ ವಿರುದ್ಧ ನಿರ್ಣಾಯಕ ಮತ್ತು ಪರ್ಯಾಪ್ತ ಸಾಕ್ಷ್ಯಗಳಿದ್ದರೆ ನೀವು ಆತನ ವಿರುದ್ಧ ಅಂತಾರಾಷ್ಟ್ರೀಯ ಕೋರ್ಟಿನಲ್ಲಿ ದಾವೆ ದಾಖಲಿಸಿ; ಬರೀ ಆರೋಪಗಳಿಂದ ಯಾವುದೇ ಪ್ರಯೋಜನವಿಲ್ಲ” ಎಂದು ಪಾಕ್ ಪ್ರಧಾನಿ ಖಡಾಖಂಡಿತವಾಗಿ ಹೇಳಿದರು.
ಹಾಫೀಜ್ ಸಯೀದ್ 200ಕ್ಕೂ ಅಧಿಕ ಅಮಾಯಕರನ್ನು ಬಲಿ ಪಡೆದ 2008ರ ಮುಂಬಯಿ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಎಂದು ಹೇಳಿಕೊಂಡು ಬಂದಿದೆ.
ಅಂದು ಮುಂಬಯಿಯನ್ನು ಪಾಕ್ ಉಗ್ರರಿಂದ ವಿಮೋಚನೆ ಮಾಡಲು ಭಾರತೀಯ ಭದ್ರತಾ ಪಡೆಗಳು ಪಾಕ್ ಭಯೋತ್ಪಾದಕರ ವಿರುದ್ಧ ಮೂರು ದಿನಗಳ ಕಾಲ ಗುಂಡಿನ ಕಾಳಗ ನಡೆಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ