ನೀವು ನಮ್ಮ ಸೋಲು, ಸಂಕಟಗಳಿಂದ ಲಾಭ ಪಡೆದುಕೊಂಡಿದ್ದೀರಿ…ಭಾರತದ ವಿರುದ್ಧ ಉಕ್ರೇನ್ ಅಸಮಾಧಾನ
ಉಕ್ರೇನ್ ಜನ ಅನುಭವಿಸುತ್ತಿರುವ ನರಕಯಾತನೆಯ ಕನ್ನಡಿಯ ಮೂಲಕ ನೋಡಬೇಕಾಗಿದೆ
Team Udayavani, Dec 6, 2022, 3:12 PM IST
ಕೀವ್(ಉಕ್ರೇನ್): ಯುದ್ಧದ ಸಂದರ್ಭದಲ್ಲಿ ರಷ್ಯಾದಿಂದ ಕಡಿಮೆ ಬೆಲೆಗೆ ತೈಲವನ್ನು ಖರೀದಿಸಿರುವ ಭಾರತದ ವಿರುದ್ಧ ಉಕ್ರೇನ್ ವಿದೇಶಾಂಗ ಸಚಿವ ಅಸಮಾಧಾನ ವ್ಯಕ್ತಪಡಿಸಿದ್ದು, ಇದೊಂದು ನೈತಿಕವಾಗಿ ಸಮರ್ಪಕವಾದ ನಿರ್ಧಾರವಲ್ಲ ಎಂದು ತಿಳಿಸಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:ವೈರಲ್ ವಿಡಿಯೋ: ಅಯ್ಯೋ.. ಆನೆ ಪ್ರತಿಮೆ ಮಧ್ಯೆ ಸಿಲುಕಿ ಹೊರಗೆ ಬರಲಾರದೆ ಭಕ್ತನ ಹೆಣಗಾಟ!
ರಷ್ಯಾದ ದಾಳಿಯಿಂದಾಗಿ ಉಕ್ರೇನ್ ನಿವಾಸಿಗಳು ಬಿಕ್ಕಟ್ಟಿಗೆ ಸಿಲುಕಿದ್ದು, ಮತ್ತೊಂದೆಡೆ ಸಾವು, ನೋವು ಅನುಭವಿಸುತ್ತಿದ್ದಾರೆ. ಇಂತಹ ಅವಕಾಶವನ್ನು ಬಳಸಿಕೊಂಡು ಭಾರತ ರಷ್ಯಾದಿಂದ ಅಗ್ಗದ ಬೆಲೆಗೆ ತೈಲ ಖರೀದಿಸುತ್ತಿದೆ ಎಂದು ಡೆಮೈಟ್ರೋ ಕುಲೇಬಾ ಎನ್ ಡಿಟಿವಿ ಜತೆಗಿನ ವಿಶೇಷ ಸಂದರ್ಶನದಲ್ಲಿ ದೂರಿದ್ದಾರೆ.
ಒಂದು ವೇಳೆ ನಿಮಗೆ (ಭಾರತ) ಲಾಭವಾಗಿದ್ದರೆ ಅದು ನಮ್ಮ (ಉಕ್ರೇನ್) ಸೋಲಿನಿಂದಾಗಿ, ಈ ನಿಟ್ಟಿನಲ್ಲಿ ನಮ್ಮ ಸಂಕಷ್ಟ ಬಗೆಹರಿಸಲು ನಿಮ್ಮಿಂದ (ಭಾರತ) ನೆರವು ಸಿಗಬಹುದೆಂಬ ನಿರೀಕ್ಷೆಯಲ್ಲಿರುವುದಾಗಿ ತಿಳಿಸಿದ್ದಾರೆ.
ರಷ್ಯಾದಿಂದ ಭಾರತ ಅಗ್ಗದ ಬೆಲೆಗೆ ತೈಲವನ್ನು ಖರೀದಿಸುವ ನಿರ್ಧಾರವನ್ನು ಉಕ್ರೇನ್ ಜನ ಅನುಭವಿಸುತ್ತಿರುವ ನರಕಯಾತನೆಯ ಕನ್ನಡಿಯ ಮೂಲಕ ನೋಡಬೇಕಾಗಿದೆ ಎಂಬುದಾಗಿ ಕುಲೇಬಾ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಅಷ್ಟೇ ಅಲ್ಲ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಕೊನೆಗಾಣಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮುಖ ಪಾತ್ರ ವಹಿಸಬೇಕೆಂದು ಕುಲೇಬಾ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani
ಹೊಸ ಸೇರ್ಪಡೆ
ಮಣಿಪಾಲ: ಅಪಾರ್ಟ್ ಮೆಂಟ್ ನಲ್ಲಿ ಲಕ್ಷಾಂತರ ರೂ. ಸೊತ್ತುಗಳ ಕಳವು
ಷೇರುಗಳ ಮೌಲ್ಯ ಕುಸಿತ; ಎಸ್ ಬಿಐ, ಪಿಎನ್ ಬಿ ಬ್ಯಾಂಕ್ ಗಳಿಂದ ಅದಾನಿ ಪಡೆದ ಸಾಲದ ಮೊತ್ತ ಎಷ್ಟು ಗೊತ್ತಾ?
ಮಾರಿಗುಡ್ಡದಲ್ಲಿ ಗಡ್ಡಧಾರಿಗಳ ಅಬ್ಬರ
ಮಂಗಳೂರು : ಜ್ಯುವೆಲ್ಲರಿ ಶಾಪ್ ನಲ್ಲಿ ಸಿಬಂದಿಗೆ ಚೂರಿ ಇರಿತ
ಬಸವ ಕಲ್ಯಾಣದಲ್ಲಿ ಸಿದ್ದರಾಮಯ್ಯ,ಕೋಲಾರದಲ್ಲಿ ಡಿಕೆಶಿ: ಪ್ರಜಾಧ್ವನಿ ಯಾತ್ರೆಗೆ ಚಾಲನೆ