10 ವರ್ಷ ಜೈಲಿನಲ್ಲಿಡಲು ಸೇನೆ ಸಂಚು: ಕೊನೆ ಉಸಿರಿರುವವರೆಗೂ ಹೋರಾಡಲು ಇಮ್ರಾನ್‌ ಶಪಥ


Team Udayavani, May 16, 2023, 6:50 AM IST

10 ವರ್ಷ ಜೈಲಿನಲ್ಲಿಡಲು ಸೇನೆ ಸಂಚು: ಕೊನೆ ಉಸಿರಿರುವವರೆಗೂ ಹೋರಾಡಲು ಇಮ್ರಾನ್‌ ಶಪಥ

ಲಾಹೋರ್‌: ಬಂಧನ, ಜಾಮೀನು, ಬಿಡುಗಡೆಯ ಹೈಡ್ರಾಮಾದ ಬಳಿಕ ಪಾಕಿಸ್ಥಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರು ಪಾಕ್‌ ಸೇನೆಯ ವಿರುದ್ಧದ ವಾಗ್ಧಾಳಿಯನ್ನು ಮುಂದುವರಿಸಿದ್ದಾರೆ. “ದೇಶದ ಬಲಿಷ್ಠ ಸೇನೆಯು ದೇಶದ್ರೋಹದ ಆರೋಪದಲ್ಲಿ ನನ್ನನ್ನು ಮುಂದಿನ 10 ವರ್ಷಗಳ ಕಾಲ ಜೈಲಿನಲ್ಲಿ ಕೊಳೆಸಬೇಕೆಂದು ಉದ್ದೇಶಿಸಿತ್ತು. ಆದರೆ ನಾನು ನನ್ನ ಕೊನೆಯ ರಕ್ತದ ಹನಿಯವರೆಗೂ ಈ ವಂಚಕರ ವಿರುದ್ಧ ಹೋರಾಡುವ ಪ್ರತಿಜ್ಞೆ ಮಾಡುತ್ತಿದ್ದೇನೆ’ ಎಂದು ಇಮ್ರಾನ್‌ ಖಾನ್‌ ಘೋಷಿಸಿದ್ದಾರೆ.

ಕಳೆದ ವಾರ ಇಮ್ರಾನ್‌ ಬಂಧನದ ಬೆನ್ನಲ್ಲೇ ನಡೆದ ಹಿಂಸಾಚಾರದ ವೇಳೆ ಸೇನಾಧಿಕಾರಿಗಳ ಮನೆ ಮೇಲಿನ ದಾಳಿ ಪ್ರಕರಣ ಸಂಬಂಧ ಲಾಹೋರ್‌ ಹೈಕೋರ್ಟ್‌ಗೆ ಹಾಜರಾಗುವ ಮುನ್ನ ಖಾನ್‌ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಈಗ ಲಂಡನ್‌ನ ಸಂಪೂರ್ಣ ಪ್ಲ್ರಾನ್‌ ಹೊರಬಿದ್ದಿದೆ.  ನಾನು ಜೈಲಿನಲ್ಲಿರುವಂತೆಯೇ, ಹಿಂಸಾಚಾರದ ಹೆಸರಲ್ಲಿ

ನನ್ನ ಪತ್ನಿಯನ್ನೂ ಜೈಲಿಗೆ ತಳ್ಳಿ, ದೇಶದ್ರೋಹದ ಕೇಸಿನಲ್ಲಿ ನನ್ನನ್ನು ಮುಂದಿನ 10 ವರ್ಷ ಜೈಲಲ್ಲೇ ಇರುವಂತೆ ಮಾಡುವುದು ಸೇನೆಯ ಯೋಜನೆಯಾಗಿತ್ತು ಎಂದು ಖಾನ್‌ ಟ್ವೀಟ್‌ ಮೂಲಕ  ಆರೋಪಿಸಿದ್ದಾರೆ.

ಇದೇ ವೇಳೆ ಖಾನ್‌ರನ್ನು ಹೈಕೋರ್ಟ್‌ ಆವರಣದಿಂದಲೇ ಅಪಹರಿಸಿ ಕರೆದೊಯ್ದ ಭ್ರಷ್ಟಾಚಾರ ನಿಗ್ರಹ ದಳದ ವಿರುದ್ಧ ಕೇಸು ದಾಖಲಿಸಲು ಪಾಕಿಸ್ತಾನ್‌ ತೆಹ್ರೀಕ್‌-ಇ-ಇನ್ಸಾಫ್ ಪಕ್ಷ ನಿರ್ಧರಿಸಿದೆ. ಅಲ್ಲದೆ ಖಾನ್‌ ಬಂಧನ ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆ ಗೋಲಿಬಾರ್‌ ಮಾಡಿದವರ ವಿರುದ್ಧ ಕೊಲೆ ಪ್ರಕರಣ ದಾಖಲಿಸುವಂತೆಯೂ ಆಗ್ರಹಿಸಲಾಗುವುದು ಎಂದು ಪಕ್ಷ ತಿಳಿಸಿದೆ.

ಇನ್ನೊಂದೆಡೆ ಹಲವಾರು ಪ್ರಕರಣಗಳಲ್ಲಿ ಇಮ್ರಾನ್‌ ಖಾನ್‌ಗೆ ಸಂಪೂರ್ಣ ರಿಲೀಫ್ ನೀಡಲಾಗಿದೆ ಎಂದು ಆರೋಪಿಸಿ ಪಾಕ್‌ ಸುಪ್ರೀಂ ಕೋರ್ಟ್‌ ಸೇರಿದಂತೆ ನ್ಯಾಯಾಂಗದ ವಿರುದ್ಧ ಆಡಳಿತಾರೂಢ ಪಕ್ಷದ ಮಿತ್ರ ಪಕ್ಷ ಜಮೀಯತ್‌ ಉಲೆಮಾ ಇ ಇಸ್ಲಾಂ ಫ‌ಜ್‌ ಕಾರ್ಯಕರ್ತರು ಇಸ್ಲಾಮಾಬಾದ್‌ನಲ್ಲಿ ಸೋಮವಾರ ಭಾರೀ ಪ್ರತಿಭಟನೆ ನಡೆಸಿದ್ದಾರೆ.

ಪತ್ನಿಗೆ ಜಾಮೀನು: ಈ ಎಲ್ಲ ಬೆಳವಣಿಗೆಗಳ ನಡುವೆ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಇಸ್ಲಾಮಾಬಾದ್‌ ಹೈಕೋರ್ಟ್‌ಗೆ ಸೋಮವಾರ ವಿಚಾರಣೆಗೆ ಹಾಜರಾ­ಗಿ­ದ್ದಾರೆ. ಮಂಗಳವಾರ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಲು ಹೈಕೋರ್ಟ್‌ ಒಪ್ಪಿಕೊಂಡಿದೆ. ಜತೆಗೆ ಅವರ ಪತ್ನಿ ಬುಶ್ರಾ ಬೀಬಿ ಅವರಿಗೆ ಮಾ.23ರ ವರೆಗೆ ಜಾಮೀನು ಸಿಕ್ಕಿದೆ.

ಸುಪ್ರೀಂ ಕೋರ್ಟ್‌ ಎದುರು ಹೈಡ್ರಾಮಾ
ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಪರವಾಗಿ ಸುಪ್ರೀಂ ಕೋರ್ಟ್‌ ನಿಲುವು ಹೊಂದಿದೆ ಎಂದು ಆರೋಪಿಸಿ ಪಾಕಿಸ್ಥಾನದ ಆಡಳಿತ ಮೈತ್ರಿಕೂಟ ಪಾಕಿಸ್ಥಾನ ಡೆಮಾಕ್ರಾಟಿಕ್‌ ಮೂವ್‌ಮೆಂಟ್‌ (ಪಿಡಿಎಂ)ನ ಪಕ್ಷಗಳ ನಾಯಕರು ಮತ್ತು ಸದಸ್ಯರು ಸುಪ್ರೀಂ ಕೋರ್ಟ್‌ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬಿಗಿ ಬಂದೋಬಸ್ತ್ ನಡುವೆಯೂ ಕೂಡ ಮೈತ್ರಿಕೂಟ ಪಕ್ಷಗಳ ಕೆಲವು ಕಿಡಿಗೇಡಿ ಸದಸ್ಯರು ಗೇಟುಗಳನ್ನು ಏರಿ ಆವರಣ ಪ್ರವೇಶಿಸುವ ಪ್ರಯತ್ನ ಮಾಡಿದ್ದಾರೆ. ಸೆಕ್ಷನ್‌ 144 ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ. ಇದಲ್ಲದೆ ಪಾಕಿಸ್ಥಾನದ ಸಂಸತ್‌ ನ್ಯಾಶನಲ್‌ ಅಸೆಂಬ್ಲಿಯಲ್ಲಿ ಕೂಡ ಸುಪ್ರೀಂ ಕೋರ್ಟ್‌ ವಿರುದ್ಧ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ.

ಇಮ್ರಾನ್‌ ಅವರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು. ನ್ಯಾಯಮೂರ್ತಿಗಳಿಗೆ ಮಾಜಿ ಪ್ರಧಾನಿ ಬಗ್ಗೆ ಅಕ್ಕರೆ ಇದ್ದರೆ ಅವರ ಪಕ್ಷ ಸೇರಿಕೊಳ್ಳಲಿ. ರಾಷ್ಟ್ರವೇ ಖಾನ್‌ ಅವರ ಪಕ್ಷದವರ ಕೃತ್ಯದಿಂದ ತಲೆತಗ್ಗಿಸುವಂತಾಗಿದೆ.
-ರಾಜಾ ರಿಯಾಜ್‌ ಅಹ್ಮದ್‌ ಖಾನ್‌, ಪಾಕ್‌ನ ಮುಖಂಡ

 

ಟಾಪ್ ನ್ಯೂಸ್

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.