ಇಮ್ರಾನ್‌ ಖಾನ್‌ಗೆ ‘ಅವಿಶ್ವಾಸ’ ತಿರುಗುಬಾಣ :ಎ.9ರಂದೇ ಅವಿಶ್ವಾಸ ಮತದಾನಕ್ಕೆ ಸುಪ್ರೀಂ ಸೂಚನೆ

ಉಪಸ್ಪೀಕರ್‌ ಆದೇಶ ರದ್ದುಪಡಿಸಿದ ಸುಪ್ರೀಂ

Team Udayavani, Apr 8, 2022, 7:00 AM IST

ಇಮ್ರಾನ್‌ ಖಾನ್‌ಗೆ ‘ಅವಿಶ್ವಾಸ’ ತಿರುಗುಬಾಣ :ಎ.9ರಂದೇ ಅವಿಶ್ವಾಸ ಮತದಾನಕ್ಕೆ ಸುಪ್ರೀಂ ಸೂಚನೆ

ಇಸ್ಲಾಮಾಬಾದ್‌ : ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ತೀವ್ರ ಮುಖಭಂಗ ಉಂಟಾಗಿದೆ. ಅವರ ನೇತೃತ್ವದ ಸರಕಾರದ ವಿರುದ್ಧದ ಅವಿಶ್ವಾಸ ಗೊತ್ತುವಳಿಯನ್ನು ರದ್ದುಪಡಿಸಿದ ಉಪಸ್ಪೀಕರ್‌ ಅವರ ನಿಲುವನ್ನು ಸುಪ್ರೀಂ ಕೋರ್ಟ್‌ ಸಾರಾಸಗಟಾಗಿ ತಳ್ಳಿಹಾಕಿದೆ. ಅಲ್ಲದೆ ಎ. 9ರಂದೇ ಅವಿಶ್ವಾಸ ಗೊತ್ತುವಳಿ ಸಂಬಂಧ ಮತದಾನ ನಡೆಸಬೇಕು ಮತ್ತು ರಾಷ್ಟ್ರೀಯ ಸಂಸತ್ತನ್ನು ಪುನರ್‌ ಸ್ಥಾಪಿಸಬೇಕು ಎಂದು ಕೋರ್ಟ್‌ ಆದೇಶಿಸಿದೆ.

ಗುರುವಾರ ರಾತ್ರಿ ಭಾರೀ ಭದ್ರತೆಯೊಂದಿಗೆ ಅವಿಶ್ವಾಸ ಗೊತ್ತುವಳಿ ರದ್ದು ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್‌ನ ಪಂಚಸದಸ್ಯರ ಪೀಠ ನೀಡಿದ ಈ ತೀರ್ಪಿನಿಂದ ಅಲ್ಪಮತಕ್ಕೆ ಕುಸಿದಿರುವ ಮೈತ್ರಿಕೂಟ ಸರಕಾರಕ್ಕೆ ತೀವ್ರ ಹಿನ್ನಡೆ ಆಗಿದೆ.

ಸಂಸತ್‌ ವಿಸರ್ಜನೆ ಮತ್ತು ಅವಿಶ್ವಾಸ ಗೊತ್ತುವಳಿ ರದ್ದುಪಡಿಸಲು ಸೂಚಿಸಲು ಇಮ್ರಾನ್‌ ಖಾನ್‌ಗೆ ಅಧಿಕಾರವಿಲ್ಲ. ಅವಿಶ್ವಾಸ ಮಂಡನೆ ದಿನ ಯಾವುದೇ ಸದಸ್ಯರು ಮತದಾನ ಮಾಡದಂತೆ ತಡೆಯಲು ಯಾರಿಗೂ ಅಧಿಕಾರವಿಲ್ಲ ಎಂದು ಕೋರ್ಟ್‌ ಸ್ಪಷ್ಟವಾಗಿ ಹೇಳಿದೆ. ಈ ಹಿಂದೆ ಮಾ. 25ರಂದು ಅವಿಶ್ವಾಸ ಮಂಡನೆ ನಿಗದಿಯಾಗಿದ್ದಾಗ ಮೈತ್ರಿಯಿಂದ ದೂರವುಳಿದ ಸಂಸದರಿಗೆ ಸರಕಾರದ ವಿರುದ್ಧ ಮತ ಚಲಾಯಿಸದಂತೆ ಇಮ್ರಾನ್‌ ಸೂಚಿಸಿದ್ದರು. ಅನಂತರ ಅವಿಶ್ವಾಸ ಮಂಡನೆ ದಿನಾಂಕ ಮುಂದೂಡಲ್ಪಟ್ಟು ಪಾಕ್‌ನಲ್ಲಿ ಹೈಡ್ರಾಮಾ ಸೃಷ್ಟಿಯಾಗಿತ್ತು.

ವಿಪಕ್ಷಗಳಿಗೆ ಮೇಲುಗೈ
342 ಸ್ಥಾನವುಳ್ಳ ಪಾಕ್‌ನ ಸಂಸತ್ತಿನಲ್ಲಿ ಮೈತ್ರಿಕೂಟ ಸರಕಾರದ ಬಹುಮತಕ್ಕೆ 172 ಸ್ಥಾನಗಳು ನಿಚ್ಚಳವಾಗಿ ಬೇಕು. ಆದರೆ ಇಮ್ರಾನ್‌ ಬಳಿಯಿರುವ ಸಂಸದರ ಬಲ 157ಕ್ಕೂ ಕಡಿಮೆ. ಎ. 9ರಂದು ಅವಿಶ್ವಾಸ ಮತದಾನದ ವೇಳೆ ಪಿಎಂಎಲ್‌- ಎನ್‌, ಪಿಪಿಪಿ, ಎಂಎಂಎ ಒಳಗೊಂಡ ವಿಪಕ್ಷಗಳು ಮ್ಯಾಜಿಕ್‌ ಸಂಖ್ಯೆಯನ್ನು ದಾಟಿ ಸರಕಾರದ ವಿರುದ್ಧ ಬಲ ಕ್ರೋಡೀಕರಿಸುವ ಸಾಧ್ಯತೆ ಇದೆ.

ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳುವ ಇಮ್ರಾನ್‌ ಖಾನ್‌ಗೂ ಹಿಟ್ಲರ್‌ಗೂ ಯಾವುದೇ ವ್ಯತ್ಯಾಸವಿಲ್ಲ. ಸುಪ್ರೀಂ ಕೋರ್ಟ್‌ನ ತೀರ್ಪು ಪಾಕ್‌ ಜನತೆಯ ಪರವಾಗಿದೆ.
– ಶೆಹಬಾಜ್‌ ಷರೀಫ್, ವಿಪಕ್ಷ ನಾಯಕ

ಸುಪ್ರೀಂ ಹೇಳಿದ್ದೇನು?
– ಅವಿಶ್ವಾಸ ಮಂಡನೆ ರದ್ದುಪಡಿಸಿದ ಉಪಸ್ಪೀಕರ್‌ ಆದೇಶ ಸಿಂಧುವಲ್ಲ
– ಎ. 9ರಂದೇ ಇಮ್ರಾನ್‌ ಖಾನ್‌ ವಿಶ್ವಾಸಮತ ಸಾಬೀತುಪಡಿಸಬೇಕು
– ಮತ ಚಲಾವಣೆ ತಡೆಯಲು ಯಾರಿಗೂ ಅಧಿಕಾರವಿಲ್ಲ.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

police USA

US ಷಿಕಾಗೋದಲ್ಲಿ ಶೂಟೌಟ್‌: 7 ವರ್ಷದ ಬಾಲಕಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.