ಭಿನ್ನಾಭಿಪ್ರಾಯ ಬಗೆಹರಿಸುವಲ್ಲಿ ಭಾರತ-ಚೀನ ಮುತ್ಸದ್ದಿತನ


Team Udayavani, Jun 2, 2018, 10:11 AM IST

narendra-modi.jpg

ಸಿಂಗಾಪುರ: ಭಾರತ ಮತ್ತು ಚೀನ ತಮ್ಮ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳುವಲ್ಲಿ ಹೆಚ್ಚಿನ ಮುತ್ಸದ್ದಿತನವನ್ನು ತೋರಿಸಿವೆ. ಎರಡೂ ರಾಷ್ಟ್ರಗಳು ಪರಸ್ಪರ ನಂಬಿಕೆಯಿಂದ ಹೆಜ್ಜೆಯಿಟ್ಟಲ್ಲಿ, ಏಷ್ಯಾ ಮತ್ತು ಜಗತ್ತಿನ ಇತರ ಭಾಗಗಳಿಗೆ ಉತ್ತಮ ಭವಿಷ್ಯ ನಿರ್ಮಾಣವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ಸಿಂಗಾಪುರದಲ್ಲಿ ವಾರ್ಷಿಕ ಭದ್ರತಾ ಸಮ್ಮೇಳನ ಶಾಂಗ್ರಿ-ಲಾದಲ್ಲಿ ಪ್ರಮುಖ ಭಾಷಣ ಮಾಡಿದ ಅವರು, ಏಷ್ಯಾ ವಲಯದ ರಾಷ್ಟ್ರಗಳ ನಡುವೆ ಪರಸ್ಪರ ಸಹಕಾರ ಧೋರಣೆ ಇದ್ದರೆ ಶತಮಾನಗಳ ಕಾಲ ಉತ್ತಮವಾಗಿ ಜೀವಿಸುವ ವಾತಾವರಣ ನಿರ್ಮಿಸಿದಂತಾಗುತ್ತದೆ ಎಂದಿದ್ದಾರೆ. 

ಜಲ, ಸಾಗರ ಮಾರ್ಗಗಳನ್ನು ಮುಕ್ತವಾಗಿ ಬಳಕೆ ಮಾಡುವ ಬಗ್ಗೆ ಭಾರತ ಒಲವು ಹೊಂದಿದೆ. ಅದರಲ್ಲಿ ತಾರತಮ್ಯ ಉಂಟಾಗಲು ಅವಕಾಶ ಇರಬಾರದು. ಇಂಡೋ-ಪೆಸಿಫಿಕ್‌ ವಲಯ ದಲ್ಲಿ ಅದೇ ನಿಯಮ ಜಾರಿಯಾಗಬೇಕು ಎಂದಿದ್ದಾರೆ ಪ್ರಧಾನಿ. ಈ ಮೂಲಕ ಚೀನಗೆ ಪರೋಕ್ಷವಾಗಿ ಚುಚ್ಚಿದ್ದಾರೆ.

ಆಸಿಯಾನ್‌ ಉದಾಹರಣೆ: ವಿವಿಧ ರಾಷ್ಟ್ರಗಳ ನಡುವಿನ ಸಂಬಂಧ ಹೇಗಿರಬೇಕು ಎನ್ನುವುದಕ್ಕೆ ಆಸಿಯಾನ್‌ ಮತ್ತು ಭಾರತ ನಡುವಿನ ಸಂಬಂಧವನ್ನು ಪ್ರಧಾನಿ ಪ್ರಸ್ತಾವಿಸಿದರು. ಪರಸ್ಪರ ಸ್ಪರ್ಧೆ ಮತ್ತು ಭಿನ್ನಾಭಿಪ್ರಾಯ ಮರೆತು ಒಂದಾಗಿ ಕೆಲಸ ಮಾಡುವುದನ್ನು ಸದ್ಯದ ಪರಿಸ್ಥಿತಿ ಬಯಸುತ್ತಿದೆ. ಇದು ನಮಗೆ ಸಾಧ್ಯವಿದೆ. ಅದಕ್ಕೆ ಆಸಿಯಾನ್‌ ರಾಷ್ಟ್ರಗಳೇ ಉದಾಹರಣೆ ಎಂದರು ಪ್ರಧಾನಿ.

8 ಒಪ್ಪಂದ: ಇದಕ್ಕೂ ಮೊದಲು, ರಕ್ಷಣೆ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿ ಕುರಿತು ಮಾತುಕತೆ ನಡೆಸಿದ ಮೋದಿ ಮತ್ತು ಸಿಂಗಾಪುರ ಪ್ರಧಾನಿ ಲಿ ಸೈನ್‌ ಲೂಂಗ್‌, 8 ಕ್ಷೇತ್ರಗಳಲ್ಲಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಆಂಧ್ರಪ್ರದೇಶದ ಹೊಸ ರಾಜಧಾನಿ ಅಮರಾವತಿಯ ನಿರ್ಮಾಣ ವಿಚಾರ ಪ್ರಸ್ತಾಪಿಸಿದ ಸಿಂಗಾಪುರ ಪ್ರಧಾನಿ, “ಅದು ಪ್ರಗತಿಯಲ್ಲಿದೆ’ ಎಂದಿದ್ದಾರೆ. ನನ್ಯಾಂಗ್‌ ತಾಂತ್ರಿಕ ವಿವಿ ವಿದ್ಯಾರ್ಥಿಗಳ ಜತೆ ಪಿಎಂ ಮೋದಿ ಸಂವಾದ ನಡೆಸಿದರು. 

ಬುದ್ಧನ ವಿಗ್ರಹ ಉಡುಗೊರೆ
ಪ್ರಧಾನಿ ಮೋದಿ ಅವರು ಸಿಂಗಾಪುರ ಪ್ರಧಾನಿ ಲೂಂಗ್‌ಗೆ ಆರನೇ ಶತಮಾನದ ಬುದ್ಧಗುಪ್ತ ಸ್ಟೆಲೆಯ ಪ್ರತಿರೂಪದ ವಿಗ್ರಹ ಉಡುಗೊರೆಯಾಗಿ ನೀಡಿದ್ದಾರೆ. ಅದರಲ್ಲಿ ಆಗ್ನೇಯ ಏಷ್ಯಾಕ್ಕೆ ಬೌದ್ಧ ಧರ್ಮ ಹೇಗೆ ಪ್ರಚಾರವಾಯಿತು ಎಂಬುದನ್ನು ವಿವರಿಸುವ ಸಂಸ್ಕೃತ ಶ್ಲೋಕಗಳನ್ನು ಕೆತ್ತಲಾಗಿದೆ. ಇದೇ ವೇಳೆ, ಸಿಂಗಾಪುರದ ಮಾಜಿ ರಾಜತಾಂತ್ರಿಕ ಅಧಿಕಾರಿ ಟಾಮಿ ಕೊಹ್‌ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿ ಮೋದಿ ಹಸ್ತಾಂತರಿಸಿದ್ದಾರೆ.

ಟಾಪ್ ನ್ಯೂಸ್

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.