ಭಿನ್ನಾಭಿಪ್ರಾಯಗಳು ವಿವಾದಗಳಾಗಬಾರದು
Team Udayavani, Aug 13, 2019, 5:36 AM IST
ಬೀಜಿಂಗ್: ಭಾರತ ಮತ್ತು ಚೀನ ಮಧ್ಯದ ರಾಜ ತಾಂತ್ರಿಕ ಭಿನ್ನಾಭಿಪ್ರಾಯಗಳು ವಿವಾದಗಳಾಗಬಾರದು ಎಂದು ಚೀನ ಪ್ರವಾಸದಲ್ಲಿರುವ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ಇನ್ನೊಂದೆಡೆ ಜಮ್ಮು ಕಾಶ್ಮೀರದ ಸನ್ನಿವೇಶವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಚೀನ ಹೇಳಿದ್ದು, ಈ ವಲಯದ ಶಾಂತಿ ಮತ್ತು ಸ್ಥಿರತೆಗೆ ಭಾರತ ರಚನಾತ್ಮಕ ಪಾತ್ರ ವಹಿಸಬೇಕು ಎಂದಿದೆ.
3 ದಿನಗಳ ಭೇಟಿಯಲ್ಲಿ ಚೀನ ಉಪಾಧ್ಯಕ್ಷ ವಾಂಗ್ ಖೀಶಾನ್ ಮತ್ತು ವಿದೇಶಾಂಗ ಸಚಿವ ವಾಂಗ್ ಯಿ ಜೊತೆಗೆ ಸೋಮವಾರ ಜೈಶಂಕರ್ ಮಾತುಕತೆ ನಡೆಸಿದರು. ಅನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಜಮ್ಮು ಕಾಶ್ಮೀರದ ವಿಚಾರವನ್ನು ನೇರವಾಗಿ ಪ್ರಸ್ತಾವಿಸಲಿಲ್ಲ. ಬದಲಿಗೆ ಭಾರತ- ಪಾಕ್ ನಡುವಿನ ಸಂಘರ್ಷವನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ವಾಂಗ್ ಯಿ ಹೇಳಿದ್ದಾರೆ.
ಬಳಿಕ ಮಾತನಾಡಿದ ಜೈಶಂಕರ್, ಭಾರತ- ಚೀನದ ಸಂಬಂಧವು ಜಾಗತಿಕ ರಾಜಕಾರಣದಲ್ಲಿ ಅತ್ಯಂತ ಮಹತ್ವ ಪಡೆದಿದೆ. ಎರಡು ವರ್ಷಗಳ ಹಿಂದೆ ಈ ಅಂಶವನ್ನು ಮನಗಂಡು ಉಭಯ ದೇಶಗಳೂ ಒಮ್ಮತಕ್ಕೆ ಬಂದಿವೆ. ನಮ್ಮ ಮಧ್ಯೆ ಇರಬಹುದಾದ ಯಾವುದೇ ಭಿನ್ನಾಭಿಪ್ರಾಯಗಳು ವಿವಾದಗಳಾಗಬಾರದು. ಕಳೆದ ವುಹಾನ್ ಶೃಂಗದಲ್ಲಿ ಎರಡೂ ದೇಶಗಳು ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿವೆ. ಅಂದಿನಿಂದಲೂ ನಮ್ಮ ಸಂಬಂಧದಲ್ಲಿ ಸುಧಾರಣೆಯಾಗಿರು ವುದನ್ನು ನಾವು ಕಂಡಿದ್ದೇವೆ ಎಂದಿದ್ದಾರೆ. ಇದೇ ವೇಳೆ, ಎರಡೂ ದೇಶಗಳ ನಡುವಿನ ಬಾಂಧವ್ಯ ವೃದ್ಧಿಗೆ ಸಂಬಂಧಿಸಿ ನಾಲ್ಕು ಒಪ್ಪಂದಗಳಿಗೆ ಭಾರತ-ಚೀನ ಸಹಿ ಹಾಕಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್