ಮಾನವ ಅಭಿವೃದ್ಧಿ ಸೂಚ್ಯಂಕ; ಭಾರತಕ್ಕೆ 129ನೇ ಸ್ಥಾನ

ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್‌ಡಿಪಿ) ಬಿಡುಗಡೆ ಮಾಡಿದ ಅಂಕಿ-ಅಂಶ

Team Udayavani, Dec 9, 2019, 7:16 PM IST

india

ವಿಶ್ವಸಂಸ್ಥೆ: ವಿಶ್ವ ಸಂಸ್ಥೆಯ ಮಾನವ ಅಭಿವೃದ್ಧಿ ಸೂಚ್ಯಂಕ (HDI)ದಲ್ಲಿ ಭಾರತ 129ನೇ ಸ್ಥಾನ ಪಡೆದಿ ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್‌ಡಿಪಿ) ಬಿಡುಗಡೆ ಮಾಡಿದ ವರದಿಯಲ್ಲಿ ಉಲ್ಲೇಖೀಸಲಾಗಿದೆ. ಒಟ್ಟು 189 ದೇಶಗಳನ್ನು ಮೂಲವಾಗಿಟ್ಟುಕೊಂಡು ಈ ವರದಿಯನ್ನು ತಯಾರಿಸಲಾಗುತ್ತದೆ. ಕಳೆದ ವರ್ಷ ಭಾರತ 130ನೇ ಸ್ಥಾನದಲ್ಲಿತ್ತು. ಈ ವರ್ಷ ಒಂದು ಸ್ಥಾನ ಏರಿಕೆ ಕಂಡಿದೆ. ಇದೀಗ 3 ದಶಕಗಳ ಬಳಿಕ ಇದೇ ಮೊದಲ ಬಾರಿ ಭಾರತ ಕ್ಷಿಪ್ರವಾಗಿ ಒಂದು ಅಂಕ ಏರಿಕೆ ಕಂಡಿದೆ. 2005-06ರಿಂದ 2015-16ನೇ ಸಾಲಿನಲ್ಲಿ ಸುಮಾರು 27.1 ಕೋಟಿ ಮಂದಿಯನ್ನು ಬಡತನದಿಂದ ಮೇಲೆತ್ತಲಾಗಿದೆ ಎಂದು ವರದಿ ಹೇಳಿದೆ.

ಸುಮಾರು ಮೂರು ದಶಕಗಳ ಕ್ಷಿಪ್ರ ಅಭಿವೃದ್ಧಿಯ ಕಾರಣದಿಂದಾಗಿ ಭಾರತದ ಸ್ಥಿರ ಪ್ರಗತಿಗೆ ಕಾರಣವಾಗಿದೆ. ಇದು ಸಂಪೂರ್ಣ ಬಡತನದಲ್ಲಿ ಭಾರಿ ಇಳಿಕೆ ಕಾಣಲು ಸಹಕಾರಿಯಾಗಿದೆ. ಜೀವಿತಾವಧಿ, ಶಿಕ್ಷಣ ಮತ್ತು ಆರೋಗ್ಯ ರಕ್ಷಣೆ ಮೊದಲಾದ ಕಡೆಗಳಲ್ಲಿಯೂ ಗಮನಾರ್ಹ ಪ್ರಗತಿ ದಾಖಲಾಗಿದೆ. ಬೇರೆ ಯಾವುದೇ ರಾಷ್ಟ್ರ ಭಾರತದಂತೆ ಕ್ಷಿಪ್ರವಾಗಿ ಮಾನವ ಅಭಿವೃದ್ಧಿ ಪ್ರಗತಿಯನ್ನು ದಾಖಲಿಸಿಲ್ಲ.

1990-2018ರ ಅವಧಿಯಲ್ಲಿ ದಕ್ಷಿಣ ಏಷ್ಯಾ ವೇಗವಾಗಿ ಬೆಳೆಯುತ್ತಿರುವ ಪ್ರದೇಶವಾಗಿದೆ. ಭಾರತ ಬಡತನವನ್ನು ಮೇಲೆತ್ತಲು ಹಲವು ವರ್ಷಗಳಿಂದ ಸತತವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಇದರ ಪರಿಣಾಮವಾಗಿ ಈ ಬೆಳವಣಿಗೆಗಳನ್ನು ನಾವು ಕಾಣಬಹುದು ಎಂದು ಯುಎನ್‌ಡಿಪಿ ಭಾರತೀಯ ಪ್ರತಿನಿಧಿ ಶಾಕೋ ನೋಡ ಹೇಳಿದ್ದಾರೆ.
ದಕ್ಷಿಣ ಏಷ್ಯಾವು ಜೀವಿತಾವಧಿಯಲ್ಲಿ ಏರಿಕೆಯನ್ನು ಕಂಡಿದೆ. 1990 ಮತ್ತು 2018ರ ನಡುವೆ, ಜನನದ ಮತ್ತು ಜೀವಿತಾವಧಿ 11.6 ವರ್ಷಗಳು ಹೆಚ್ಚಾಗಿದೆ.

ತಲಾ ಆದಾಯವು ಶೇ. 250ಕ್ಕಿಂತ ಹೆಚ್ಚಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ವರದಿಯ ಪ್ರಕಾರ, ಬಹು ಆಯಾಮದ ಬಡತನದವು ಭಾರತ ಸೇರಿದಂತೆ ಇತರ ದೇಶಗಳಲ್ಲೂ ಕಂಡು ಬರುತ್ತಿದೆ. 1.3 ಬಿಲಿಯನ್‌ ಬಹು ಆಯಾಮದ ಬಡವರಲ್ಲಿ, 661 ಮಿಲಿಯನ್‌ ಜನರು ಏಷ್ಯಾ ಮತ್ತು ಪೆಸಿಫಿಕ್‌ನಲ್ಲಿದ್ದಾರೆ. ಇದು ವಿಶ್ವದ 101 ದೇಶಗಳಲ್ಲಿ ವಾಸಿಸುವ ಬಡವರ ಅರ್ಧದಷ್ಟು ಭಾಗವನ್ನು ಹೊಂದಿದೆ.

ಜಗತ್ತಿನ ಒಟ್ಟು ಬಡವರ ಶೇ. 41ಕ್ಕಿಂತ ಹೆಚ್ಚು ಪಾಲನ್ನು ದಕ್ಷಿಣ ಏಷ್ಯಾ ಹೊಂದಿದೆ. ಭಾರತ ಗಮನಾರ್ಹ ಪ್ರಗತಿಯ ಹೊರತಾಗಿಯೂ, ಇದು 1.3 ಬಿಲಿಯನ್‌ ಬಡವರಲ್ಲಿ ಶೇಕಡಾ 28ರಷ್ಟು ಪಾಲನ್ನು ಹೊಂದಿದೆ. ಭಾರತ ಪ್ರಗತಿಯ ಹೊರತಾಗಿಯೂ ಗುಂಪು ಆಧಾರಿತ ಅಸಮಾನತೆಗಳು ಮುಂದುವರಿದಿದೆ. ವಿಶೇಷವಾಗಿ ಮಹಿಳೆಯರು ಮತ್ತು ಹುಡುಗಿಯರ ಮೇಲೆ ಇದು ಪರಿಣಾಮ ಬೀರುತ್ತದೆ ಎಂದು ವರದಿ ಹೇಳಿದೆ.

ಲಿಂಗ ಅಭಿವೃದ್ಧಿ ಸೂಚ್ಯಂಕದಲ್ಲಿ ಪೂರ್ವ ಏಷ್ಯಾ ಮತ್ತು ಪೆಸಿಫಿಕ್‌ ಎರಡನೇ ಸ್ಥಾನದಲ್ಲಿದ್ದರೆ, ಕೊರಿಯಾ ಗಣರಾಜ್ಯ ಪ್ರಥಮ ಸ್ಥಾನದಲ್ಲಿದೆ. ದಕ್ಷಿಣ ಏಷ್ಯಾದಲ್ಲಿ ಲಿಂಗಾನುಪಾತಗಳ ಅಂತರ ಹೆಚ್ಚಾಗಿದೆ. ಸಿಂಗಾಪುರದಲ್ಲಿ ಮಹಿಳೆಯರ ಮೇಲಿನ ಕೌಟುಂಬಿಕ ಹಿಂಸಾಚಾರದ ಕಡಿಮೆ ಪ್ರಮಾಣದಲ್ಲಿದೆ.

ದಕ್ಷಿಣ ಏಷ್ಯಾದ ಶೇ. 31ರಷ್ಟು ಮಹಿಳೆಯರು ತನ್ನ ಸಂಗಾತಿಯಿಂದ ಹಿಂಸಾಚಾರ ಅನುಭವಿಸಿ¨ªಾರೆ ಎಂದು ವರದಿ ಹೇಳಿದೆ.

ಭಾರತವು ಲಿಂಗ ಅಸಮಾನತೆ ಸೂಚ್ಯಂಕದಲ್ಲಿ 162 ದೇಶಗಳ ಪೈಕಿ 122 ಸ್ಥಾನದಲ್ಲಿದೆ. ಭಾರತದಲ್ಲಿ ಪುರುಷ ಮತ್ತು ಸ್ತ್ರೀ ನಡುವೆ ಅಸಮಾನತೆಗಳು ಹೆಚ್ಚಿವೆ. ಇದು ಪರೋಕ್ಷವಾಗಿ ಮಹಿಳೆಯರು ಸಶಕ್ತ¤ಗೊಳ್ಳಲು ಸಮಸ್ಯೆಯಾಗುತ್ತಿದೆ ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.