ಶ್ರೀಲಂಕಾದಲ್ಲಿ 13ಎ ಸಂಪೂರ್ಣ ಅನುಷ್ಠಾನ ‘ನಿರ್ಣಾಯಕ’: ವಿದೇಶಾಂಗ ಸಚಿವ ಜೈಶಂಕರ್

ಅಲ್ಪಸಂಖ್ಯಾತ ತಮಿಳು ಸಮುದಾಯದೊಂದಿಗೆ ಸಮನ್ವಯ ಸಾಧಿಸಲು ಸಹಕಾರಿ

Team Udayavani, Jan 20, 2023, 2:41 PM IST

1-fsadsadsa

ಕೊಲಂಬೊ: ಅಲ್ಪಸಂಖ್ಯಾತ ತಮಿಳು ಸಮುದಾಯದೊಂದಿಗೆ ಸಮನ್ವಯ ಸಾಧಿಸಲು ಶ್ರೀಲಂಕಾದಲ್ಲಿ 13 ನೇ ತಿದ್ದುಪಡಿಯ ಸಂಪೂರ್ಣ ಅನುಷ್ಠಾನವನ್ನು ಭಾರತವು “ನಿರ್ಣಾಯಕ” ಎಂದು ಪರಿಗಣಿಸುತ್ತದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಶುಕ್ರವಾರ ಹೇಳಿದ್ದಾರೆ. ಯಾವಾಗಲೂ ದ್ವೀಪ ರಾಷ್ಟ್ರದ ರಾಜಕೀಯ ಮತ್ತು ಆರ್ಥಿಕ ಸ್ಥಿರತೆಯನ್ನು ಭಾರತ ಬೆಂಬಲಿಸುತ್ತದೆ ಎಂದು ಒತ್ತಿ ಹೇಳಿದ್ದಾರೆ.

1987 ರ ಭಾರತ-ಶ್ರೀಲಂಕಾ ಒಪ್ಪಂದದ ನಂತರ ತರಲಾದ 13 ನೇ ತಿದ್ದುಪಡಿಯನ್ನು ಜಾರಿಗೆ ತರಲು ಭಾರತವು ಶ್ರೀಲಂಕಾದ ಮೇಲೆ ಒತ್ತಡ ಹೇರುತ್ತಿದೆ. 13ಎ ತಮಿಳು ಸಮುದಾಯಕ್ಕೆ ಅಧಿಕಾರ ವಿಕೇಂದ್ರೀಕರಣವನ್ನು ಒದಗಿಸುತ್ತದೆ.

ಇಂದು ಕೊಲಂಬೊದಲ್ಲಿ ಪ್ರಧಾನಿ ದಿನೇಶ್ ಗುಣವರ್ಧನ ಅವರನ್ನು ಭೇಟಿಯಾಗಲು ಸಂತಸವಾಯಿತು. ಸಾರಿಗೆ ಮತ್ತು ಶಿಕ್ಷಣ ಸೇರಿದಂತೆ ನಮ್ಮ ದ್ವಿಪಕ್ಷೀಯ ಸಹಕಾರವನ್ನು ಚರ್ಚಿಸಲಾಗಿದೆ. ಜನರೊಂದಿಗೆ ಜನರ ಸಂಬಂಧವನ್ನು ತೀವ್ರಗೊಳಿಸುವ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಎಂದು ಎಸ್ ಜೈಶಂಕರ್ ಟ್ವೀಟ್ ಮಾಡಿದ್ದಾರೆ.

ಶ್ರೀಲಂಕಾದ ಸಂವಿಧಾನದ 13 ನೇ ತಿದ್ದುಪಡಿಯ ಸಂಪೂರ್ಣ ಅನುಷ್ಠಾನವು ಎಲ್ಲಾ ಸಮುದಾಯಗಳ ನಡುವೆ ಏಕತೆಯನ್ನು ಸುಗಮಗೊಳಿಸುತ್ತದೆ ಇದರಿಂದ ಅವರು ಒಂದಾಗಿ ಬದುಕಬಹುದಾಗಿದೆ. .

ಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತು ವಿದೇಶಾಂಗ ಸಚಿವ ಅಲಿ ಸಬ್ರಿ ಅವರೊಂದಿಗಿನ ಮಾತುಕತೆಯ ನಂತರ ಪತ್ರಿಕಾ ಹೇಳಿಕೆಯಲ್ಲಿ ಜೈಶಂಕರ್, “ಶ್ರೀಲಂಕಾದ ರಾಜಕೀಯ ಮತ್ತು ಆರ್ಥಿಕ ಸ್ಥಿರತೆಯನ್ನು ಭಾರತ ಯಾವಾಗಲೂ ಬೆಂಬಲಿಸುತ್ತದೆ” ಎಂದು ಹೇಳಿದರು.

ಶ್ರೀಲಂಕಾ ಸರ್ಕಾರವು ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (LTTE) ಯೊಂದಿಗಿನ ಯುದ್ಧದ ನಂತರ ತಮಿಳು ಗುಂಪುಗಳ ವಿರುದ್ಧ ಆಕ್ರಮಣಕಾರಿಯಾಗಿದೆ. 2009 ರಲ್ಲಿ ಶ್ರೀಲಂಕಾ ಸೇನೆಯು ಎಲ್‌ಟಿಟಿಇ ಸರ್ವೋಚ್ಚ ನಾಯಕ ವೇಲುಪಿಳ್ಳೈ ಪ್ರಭಾಕರನ್‌ನನ್ನು ಕೊನೆಗೊಳಿಸುವ ಮೊದಲು ಸುಮಾರು 30 ವರ್ಷಗಳ ಕಾಲ ಲಂಕಾದ ಉತ್ತರ ಮತ್ತು ಪೂರ್ವ ಪ್ರಾಂತ್ಯಗಳಲ್ಲಿ ಪ್ರತ್ಯೇಕ ತಮಿಳು ತಾಯ್ನಾಡಿನ ಮಿಲಿಟರಿ ಕಾರ್ಯಾಚರಣೆಯನ್ನು ಸಂಘಟನೆ ನಡೆಸಿತ್ತು.

ಶ್ರೀಲಂಕಾ ಸರ್ಕಾರದ ಅಂಕಿಅಂಶಗಳ ಪ್ರಕಾರ, ಉತ್ತರ ಮತ್ತು ಪೂರ್ವದಲ್ಲಿ ಲಂಕಾ ತಮಿಳರೊಂದಿಗಿನ ಮೂರು ದಶಕಗಳ ಕ್ರೂರ ಯುದ್ಧ ಸೇರಿದಂತೆ ವಿವಿಧ ಸಂಘರ್ಷಗಳಿಂದ 20,000 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದು, ಕನಿಷ್ಠ 100,000 ಮಂದಿ ಜೀವಗಳನ್ನು ಕಳೆದುಕೊಂಡಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.