
ಗಿಲ್ಗಿಟ್ ಚುನಾವಣೆ ಆದೇಶಕ್ಕೆ ಪಾಕಿಸ್ತಾನ ವಿರುದ್ಧ ಕೇಂದ್ರ ಕಿಡಿ
Team Udayavani, May 5, 2020, 6:04 AM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಾಲ್ಟಿಸ್ತಾನಗಳಲ್ಲಿ ಸ್ಥಳೀಯ ಚುನಾವಣೆ ನಡೆಸಬೇಕು. ಈ ಬಗ್ಗೆ 2018ರ ಆದೇಶಕ್ಕೆ ತಿದ್ದುಪಡಿ ತರಬೇಕು ಎಂದು ಪಾಕಿಸ್ತಾನ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಕೇಂದ್ರ ಸರ್ಕಾರ ಸೋಮವಾರ ಪ್ರಬಲ ಆಕ್ಷೇಪ ಮಾಡಿದೆ.
ಪಾಕಿಸ್ತಾನ ಬಲವಂತವಾಗಿ ಆತಿಕ್ರಮಿಸಿಕೊಂಡಿರುವ ಪ್ರದೇಶಗಳಲ್ಲಿ ಮಾಡುತ್ತಿರುವ ಬದಲಾವಣೆ ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಸ್ಪಷ್ಟವಾಗಿ ವಿದೇಶಾಂಗ ಇಲಾಖೆ ತಿಳಿಸಿದೆ.
ನವ ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್ ಕಚೇರಿಯ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ವಿದೇಶಾಂಗ ಸಚಿವಾಲಯಕ್ಕೆ ಕರೆಯಿಸಿಕೊಂಡು ಭಾರತದ ವತಿಯಿಂದ ಕಟು ಶಬ್ದಗಳ ಪ್ರತಿಭಟನೆ ವ್ಯಕ್ತಪಡಿಸಲಾಗಿದೆ.
‘ಗಿಲ್ಗಿಟ್ – ಬಾಲ್ಟಿಸ್ತಾನ, ಲಡಾಖ್, ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಹಲವು ಬಾರಿ ತಿಳಿಯಪಡಿಸಲಾಗಿದೆ. ಈ ಬಗ್ಗೆ 1994ರಲ್ಲಿ ಭಾರತೀಯ ಸಂಸತ್ತು ಸರ್ವಾನುಮತದಿಂದ ಅಂಗೀಕಾರ ಮಾಡಿದೆ. ಹೀಗಾಗಿ ಆಕ್ರಮಣಗೊಂಡಿರುವ ಪ್ರಾಂತ್ಯಗಳಲ್ಲಿ ಹಕ್ಕು ಚಲಾಯಿಸಲು ಪಾಕಿಸ್ತಾನದ ಸರ್ಕಾರಕ್ಕಾಗಲೀ, ಅಲ್ಲಿನ ನ್ಯಾಯಾಂಗಕ್ಕಾಗಲೀ ಅವಕಾಶವಿಲ್ಲ.
ಸದ್ಯ ಉಂಟಾಗಿರುವ ಬೆಳವಣಿಗೆಯನ್ನು ಕೇಂದ್ರ ಸರ್ಕಾರ ಖಂಡಿಸುತ್ತಿದೆ. ಅತಿಕ್ರಮಿಸಿರುವ ಪ್ರದೇಶಗಳಿಂದ ಪಾಕಿಸ್ತಾನ ಕೂಡಲೇ ಕಾಲ್ತೆಗೆಯಬೇಕು ಎಂದು ಆಗ್ರಹಿಸುತ್ತೇವೆ’ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
– ಅತಿಕ್ರಮಿಸಿರುವ ಪ್ರದೇಶಗಳಲ್ಲೇಕೆ ಬದಲಾವಣೆ?
– ಪಾಕ್ ಹೈಕಮಿಷನ್ ಅಧಿಕಾರಿ ಕರೆಯಿಸಿಕೊಂಡು ತರಾಟೆ
– ಗಿಲ್ಗಿಟ್ – ಬಾಲ್ಟಿಸ್ತಾನ್ ಭಾರತದ ಅವಿಭಾಜ್ಯ ಅಂಗ
– ಹಕ್ಕು ಚಲಾಯಿಸಲು ಪಾಕಿಸ್ತಾನ ಸರ್ಕಾರ, ನ್ಯಾಯಾಂಗಕ್ಕೆ ಅವಕಾಶವಿಲ್ಲ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀಲಂಕಾದಂತೆಯೇ ದಿವಾಳಿಯಾಗುವಂಚಿಗೆ ಪಾಕ್

ಹೆಚ್ಚುತ್ತಿದೆ ದೇಗುಲ ದಾಳಿ; ಖಲಿಸ್ಥಾನ ಪ್ರತ್ಯೇಕತಾವಾದಿಗಳ ಉಪಟಳ

ಕೆನಡಾದ ಹಿಂದೂ ದೇವಸ್ಥಾನದಲ್ಲಿ ಭಾರತ ವಿರೋಧಿ ಬರಹಗಳು; ವ್ಯಾಪಕ ಆಕ್ರೋಶ

1000 ಮಂದಿಯ ಕಣ್ಣ ದೃಷ್ಟಿ ಬರಲು ಹಣ ಸಹಾಯ ಮಾಡಿದ ಮಿ.ಬೀಸ್ಟ್ : ಅಂಧರ ಬಾಳಿಗೆ ಬೆಳಕಾದ ಯೂಟ್ಯೂಬರ್

“ಮಾಹಿತಿ ಯುದ್ಧ ನಡೆಸುತ್ತಿದೆ..” ಬಿಬಿಸಿ ಡಾಕ್ಯುಮೆಂಟರಿ ಪ್ರಕರಣದಲ್ಲಿ ಭಾರತದ ಬೆಂಬಲಕ್ಕೆ ನಿಂತ ರಷ್ಯಾ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
