ಮಾಲ್ಡೀವ್ಸ್ ಸಂಸತ್ತಿನಲ್ಲಿ ಕಾಶ್ಮೀರ ವಿಷಯ ಕೆದಕಿದ ಪಾಕಿಸ್ತಾನಕ್ಕೆ ಮುಖಭಂಗ 


Team Udayavani, Sep 1, 2019, 11:16 PM IST

Maldives-1-9

ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿಯ ಬಳಿಕ ತೀವ್ರ ಚಡಪಡಿಕೆಗೆ ಒಳಗಾಗಿರುವ ನೆರೆ ರಾಷ್ಟ್ರ ಪಾಕಿಸ್ತಾನ ಹೋದಲ್ಲಿ ಬಂದಲ್ಲಿ ಕಾಶ್ಮೀರ ವಿಷಯವನ್ನು ಕೆದಕುತ್ತಲೇ ಇದೆ. ಒಂದು ಕಡೆ ಕಾಶ್ಮೀರದಲ್ಲಿರುವ ಭಾರತ ಪಾಕಿಸ್ತಾನ ಗಡಿಯಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ಪಾಕ್ ಇನ್ನೊಂದೆಡೆ ಜಾಗತಿಕ ಮಟ್ಟದಲ್ಲಿ ಕಾಶ್ಮೀರ ವಿಷಯವನ್ನು ಎತ್ತಿ ಭಾರತಕ್ಕೆ ತೊಂದರೆ ನೀಡಲು ಪ್ರಯತ್ನಿಸುತ್ತಲೇ ಇದೆ.

ಆದರೆ ಪಾಕಿಸ್ತಾನದ ಈ ಪ್ರಯತ್ನಕ್ಕೆ ಯಾವ ರಾಷ್ಟ್ರಗಳೂ ಮನ್ನಣೆ ನೀಡುತ್ತಿಲ್ಲ. ಆದರೂ ಹಠ ಬಿಡದ ಪಾಕ್ ತನ್ನ ಈ ಪ್ರಯತ್ನವನ್ನು ಮುಂದುವರೆಸುತ್ತಲೇ ಇದೆ. ಇದಕ್ಕೊಂದು ನಿದರ್ಶನವೆಂಬಂತೆ ಮಾಲ್ಡೀವ್ಸ್ ಸಂಸತ್ತಿನಲ್ಲೂ ಪಾಕಿಸ್ತಾನ ಕಾಶ್ಮೀರದ ವಿಚಾರ ಪ್ರಸ್ತಾಪಿಸಲು ಹೋಗಿ ಭಾರತದ ಕೈಯಿಂದ ಮುಖಕ್ಕೆ ಮಂಗಳಾರತಿ ಮಾಡಿಸಿಕೊಂಡಿದೆ.

ನಡೆದದ್ದಿಷ್ಟು..
ಮಾಲ್ಡೀವ್ಸ್ ನಲ್ಲಿ ದಕ್ಷಿಣ ಏಷ್ಯಾ ಸ್ಪೀಕರ್ ಗಳ ನಾಲ್ಕನೇ ಸಮಾವೇಶ ನಡೆಯುತ್ತಿದೆ. ಇದರ ಅಂಗವಾಗಿ ಅಲ್ಲಿನ ಸಂಸತ್ತಿನಲ್ಲಿ ‘ಸುಸ್ಥಿರ ಗುರಿಗಳು’ ಎಂಬ ವಿಚಾರದ ಮೇಲೆ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. ಭಾರತದ ಪ್ರತಿನಿಧಿಗಳಾಗಿ ಲೋಕಸಭಾದ್ಯಕ್ಷ ಓಂ ಬಿರ್ಲಾ ಮತ್ತು ರಾಜ್ಯ ಸಭೆಯ ಉಪ ಸಭಾಪತಿಗಳಾಗಿರುವ ಹರಿವಂಶ ನಾರಾಯಣ ಸಿಂಗ್ ಅವರು ಭಾಗವಹಿಸುತ್ತಿದ್ದಾರೆ.


ಈ ವಿಷಯದ ಮೇಲೆ ಮಾಲ್ಡೀವ್ಸ್ ಸಂಸತ್ತಿನಲ್ಲಿ ಗಂಭೀರ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಪಾಕಿಸ್ತಾನದ ಪ್ರತಿನಿಧಿ ಖಾಸಿಂ ಸೂರಿ ಅವರು ಕಾಶ್ಮೀರ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸಿದರು. ‘ಕಾಶ್ಮೀರ ನಾಗರಿಕರ ಮೇಲೆ ನಡೆಯುತ್ತಿರುವ ಸುದೀರ್ಘ ಕಿರುಕುಳವನ್ನು ನಾವು ನಿರ್ಲಕ್ಷಿಸುವಂತಿಲ್ಲ’ ಎಂದು ಖಾಸಿಂ ಅವರು ಖ್ಯಾತೆ ತೆಗೆದರು.

ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ ಹರಿವಂಶ್ ನಾರಾಯಣ್ ಸಿಂಗ್ ಅವರು ‘ಈ ವೇದಿಕೆಯಲ್ಲಿ ಭಾರತದ ಆಂತರಿಕ ವಿಚಾರವನ್ನು ಕೆದಕುವುಕ್ಕೆ ನಮ್ಮ ತೀವ್ರ ವಿರೋಧವಿದೆ. ಮಾತ್ರವಲ್ಲದೇ ಈ ಸಮಾವೇಶದ ವಿಷಯಕ್ಕೆ ಭಿನ್ನವಾಗಿರುವ ವಿಚಾರವನ್ನು ಇಲ್ಲಿ ಪ್ರಸ್ತಾವಿಸುವುದನ್ನೂ ಸಹ ನಾವು ವಿರೋಧಿಸುತ್ತೇವೆ’ ಎಂದು ಭಾರತದ ನಿಲುವನ್ನು ಸ್ಪಷ್ಟ ಧ್ವನಿಯಲ್ಲಿ ಹೆಳಿದರು.

ಮಾತ್ರವಲ್ಲದೇ, ‘ಪಾಕಿಸ್ತಾನವು ಗಡಿ ಮೂಲಕ ನಡೆಸುತ್ತಿರುವ ಭಯೋತ್ಪಾದನೆಯನ್ನು ನಿಲ್ಲಿಸಿ ಆ ಪ್ರದೇಶದಲ್ಲಿ ಶಾಂತಿ ಸುವ್ಯಸ್ಥೆಯನ್ನು ಸ್ಥಾಪಿಸುವ ನಮ್ಮ ಪ್ರಯತ್ನಕ್ಕೆ ಬೆಂಬಲ ನೀಡಬೇಕು ಎಂದು ಪಾಕಿಸ್ಥಾನಕ್ಕೆ ಮಾತಿನ ಚಾಟಿ ಬೀಸಿದರು. ‘ಭಯೋತ್ಪಾದನೆ ಎಂಬುದು ಇಂದು ವಿಶ್ವಕ್ಕೇ ಮಾರಕವಾಗಿ ಪರಿಣಮಿಸಿದೆ’ ಎಂದೂ ಅವರು ಭಯೋತ್ಪಾದಕ ಪೋಷಕ ರಾಷ್ಟ್ರವನ್ನು ಎಲ್ಲರ ಸಮ್ಮುಖದಲ್ಲೇ ತರಾಟೆಗೆ ತೆಗೆದುಕೊಂಡರು.


ಈ ಸಮಾವೇಶದಲ್ಲಿ ಅಭಿವೃದ್ಧಿ ವಿಚಾರಗಳ ಚರ್ಚೆ ಆಗಬೇಕೇ ಹೊರತು ಅದಕ್ಕೆ ಹೊರತಾಗಿರುವ ವಿಚಾರಗಳನ್ನು ಇಲ್ಲಿ ಚರ್ಚಿಸುವುದು ಸೂಕ್ತವಲ್ಲ. ಹಾಗಾಗಿ ಪಾಕಿಸ್ತಾನದ ಪ್ರತಿನಿಧಿ ವಿಷಯಕ್ಕೆ ಹೊರತಾಗಿ ಆಡಿರುವ ಮಾತುಗಳನ್ನು ಕಡತದಿಂದ ತೆಗೆದು ಹಾಕುವಂತೆಯೂ ಸಿಂಗ್ ಅವರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕಾಶ್ಮೀರ ಮತ್ತು ಭಯೋತ್ಪಾದನೆಯ ವಿಚಾರದಲ್ಲಿ ಭಾರತ ಮತ್ತು ಪಾಕಿಸ್ಥಾನ ಪ್ರತಿನಿಧಿಗಳ ನಡುವೆ ಮಾತಿಗೆ ಮಾತು ಬೆಳೆಯುತ್ತಾ ಹೋಯಿತು. ಪಾಕಿಸ್ತಾನದ ಸೆನೆಟರ್ ಖುರತ್ ಉಲ್ ಐನ್ ಮಾರ್ರಿ, ಕಾಶ್ಮೀರ ವಿಷಯ ಸುಸ್ಥಿರ ಅಭಿವೃದ್ಧಿ ವಿಷಯದೊಂದಿಗೆ ನೇರ ಸಂಬಂಧವನ್ನು ಹೊಂದಿದೆ ಎಂದು ಪ್ರತಿಪಾದಿಸಿದರೆ, ಭಾರತದ ಪ್ರತಿನಿಧಿಗಳು ಇದನ್ನು ಒಕ್ಕೊರಲಿನಿಂದ ಖಂಡಿಸಿದರು.

ಈ ಸಂದರ್ಭದಲ್ಲಿ ಮಾಲ್ಡೀವ್ಸ್ ಸ್ಪೀಕರ್ ಸದನವನ್ನು ಶಾಂತಗೊಳಿಸಲು ಸತತ ಪ್ರಯತ್ನ ನಡೆಸಿದರೂ ಅದು ಫಲ ನೀಡಲಿಲ್ಲ. ಒಟ್ಟಿನಲ್ಲಿ ಕಾಶ್ಮೀರ ವಿಚಾರ ಮಾಲ್ಡೀವ್ಸ್ ಸದನವನ್ನು ಅಲ್ಲೋಲ ಕಲ್ಲೋಲ ಮಾಡಿತು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.