ಮೂರೇ ತಿಂಗಳಲ್ಲಿ ವಿಶ್ವದ ಜನಭರಿತ ರಾಷ್ಟ್ರವಾಗಲಿದೆ ಭಾರತ!

ಚೀನದ ಜನಸಂಖ್ಯೆಯಲ್ಲಿ ಗಣನೀಯ ಇಳಿಕೆ

Team Udayavani, Jan 18, 2023, 7:40 AM IST

ಮೂರೇ ತಿಂಗಳಲ್ಲಿ ವಿಶ್ವದ ಜನಭರಿತ ರಾಷ್ಟ್ರವಾಗಲಿದೆ ಭಾರತ!

ಬೀಜಿಂಗ್‌/ನವದೆಹಲಿ:ಇನ್ನು ಕೇವಲ ಮೂರೇ ತಿಂಗಳಲ್ಲಿ ಅಂದರೆ ಏಪ್ರಿಲ್‌ ಮಧ್ಯಭಾಗದಲ್ಲಿ ಭಾರತವು ಜಗತ್ತಿನಲ್ಲೇ ಅತಿ ಹೆಚ್ಚು ಜನಸಂಖ್ಯೆಯಿರುವ ರಾಷ್ಟ್ರ ಎಂಬ ಪಟ್ಟಕ್ಕೇರಲಿದೆ!

ಹೌದು, ವಿಶ್ವದ ಅತಿ ಜನನಿಬಿಡ ರಾಷ್ಟ್ರ ಎಂಬ ಖ್ಯಾತಿ ಗಳಿಸಿರುವ ಚೀನದಲ್ಲಿ ಕಳೆದ 6 ದಶಕಗಳಲ್ಲಿ ಇದೇ ಮೊದಲ ಬಾರಿಗೆ ಜನಸಂಖ್ಯೆ ಇಳಿಮುಖವಾಗಿದೆ.

2021ಕ್ಕೆ ಹೋಲಿಸಿದರೆ 2022ರಲ್ಲಿ ಚೀನದ ಒಟ್ಟು ಜನಸಂಖ್ಯೆಯಲ್ಲಿ 8.50 ಲಕ್ಷ ಕಡಿಮೆಯಾಗಿದೆ. ವೃದ್ಧರ ಸಂಖ್ಯೆ ಹೆಚ್ಚಳ ಹಾಗೂ ಜನನ ಪ್ರಮಾಣ ಇಳಿಕೆಯೇ ಇದಕ್ಕೆ ಕಾರಣ ಎಂದು ಚೀನದ ರಾಷ್ಟ್ರೀಯ ಸಾಂಖ್ಯಿಕ ಸಂಸ್ಥೆ ಹೇಳಿದೆ.

ಈ ಹಿಂದೆ ಚೀನದಲ್ಲಿ ಜನಸಂಖ್ಯೆ ಇಳಿಕೆಯಾಗಿದ್ದು 1950ರ ಅಂತ್ಯದಲ್ಲಿ. 50ರ ದಶಕದಲ್ಲಿ ಆಡಳಿತ ನಡೆಸುತ್ತಿದ್ದ ಮಾವೋ ಝೆಡಾಂಗ್‌ ಅವರು ಸಾಮೂಹಿಕ ಕೃಷಿ ಮತ್ತು ಕೈಗಾರಿಕೀಕರಣದಂಥ ವಿನಾಶಕಾರಿ ನಿರ್ಧಾರವನ್ನು ಜಾರಿ ಮಾಡಿದಾಗ, ಚೀನದಾದ್ಯಂತ ಭೀಕರ ಬರಗಾಲ ಎದುರಾಗಿ ಲಕ್ಷಗಟ್ಟಲೆ ಮಂದಿ ಮೃತಪಟ್ಟಿದ್ದರು. ಆಗ ಜನಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿತ್ತು. ಅದಾದ 6 ದಶಕಗಳ ಬಳಿಕ ಈಗ ಮತ್ತೆ ಡ್ರ್ಯಾಗನ್‌ ರಾಷ್ಟ್ರದಲ್ಲಿ ಜನಸಂಖ್ಯೆ ಕುಸಿತಗೊಂಡಿದೆ.

2030ರವರೆಗೆ ಯುವ ರಾಷ್ಟ್ರ:
ಕಳೆದ ವರ್ಷ ಚೀನದ ಜನಸಂಖ್ಯೆ 1.426 ಶತಕೋಟಿ ಆಗಿದ್ದರೆ, ಭಾರತದ್ದು 1.412 ಶತಕೋಟಿಯಾಗಿತ್ತು. ಈಗ ಚೀನದಲ್ಲಿ ಜನರ ಸಂಖ್ಯೆ ಇಳಿಮುಖವಾಗುತ್ತಿರುವ ಕಾರಣ, ಏಪ್ರಿಲ್‌ ವೇಳೆಗೆ ಭಾರತವು ಚೀನವನ್ನು ಮೀರಿಸಿ, ಜಗತ್ತಿನ ಜನಭರಿತ ರಾಷ್ಟ್ರ ಎಂಬ ಹೆಗ್ಗಳಿಕೆ ಗಳಿಸಲಿದೆ. 2030ರವರೆಗೂ ಭಾರತವು ಜಗತ್ತಿನಲ್ಲೇ ಅತಿ ಹೆಚ್ಚು “ಯುನ ಜನರು’ ಇರುವ ದೇಶವಾಗಿ ಮುಂದುವರಿಯಲಿದೆ ಎಂದು ವಿಶ್ವಸಂಸ್ಥೆಯ ವರದಿ ಹೇಳಿದೆ.

2022ರಲ್ಲಿ ಭಾರತದ ಜನಸಂಖ್ಯೆ- 1.412 ಶತಕೋಟಿ
2022ರಲ್ಲಿ ಚೀನದ ಜನಸಂಖ್ಯೆ – 1.426 ಶತಕೋಟಿ
2050ರ ವೇಳೆಗೆ ಭಾರತದ ಜನಸಂಖ್ಯೆ- 1.668 ಶತಕೋಟಿ
2050ರ ವೇಳೆಗೆ ಚೀನದ ಜನಸಂಖ್ಯೆ- 1.317 ಶತಕೋಟಿ

ಭಾರತಕ್ಕೆ ಎಚ್ಚರಿಕೆಯ ಕರೆಗಂಟೆ
ಚೀನ ಕೈಗೊಂಡ ಕಠಿಣ ಜನಸಂಖ್ಯಾ ನಿಯಂತ್ರಣ ಕ್ರಮಗಳೇ ಅದಕ್ಕೆ ಮುಳುವಾಗಿ ಪರಿಣಮಿಸಿತು. ಇದು ಭಾರತಕ್ಕೂ ಎಚ್ಚರಿಕೆಯ ಕರೆಗಂಟೆ. ಏಕೆಂದರೆ, ಈಗಾಗಲೇ ಸಿಕ್ಕಿಂ, ಗೋವಾ, ಜಮ್ಮು ಮತ್ತು ಕಾಶ್ಮೀರ, ಕೇರಳ, ಪುದುಚೇರಿ, ಪಂಜಾಬ್‌, ಲಡಾಖ, ಪಶ್ಚಿಮ ಬಂಗಾಳ ಮತ್ತು ಲಕ್ಷದ್ವೀಪಗಳು ಕೂಡ ಹಿರಿಯ ನಾಗರಿಕರ ಜನಸಂಖ್ಯೆ ಹೆಚ್ಚಳದ ಸವಾಲನ್ನು ಎದುರಿಸುತ್ತಿವೆ. ಈ ರಾಜ್ಯಗಳಲ್ಲಿ ದುಡಿಯಲು ಶಕ್ತರಾದ ಜನರ ಕೊರತೆ, ಫ‌ಲವತ್ತತೆ ದರ ಕುಸಿತದಂಥ ಸಮಸ್ಯೆಗಳೂ ಕಾಣಿಸಿಕೊಂಡಿವೆ. ಹೀಗಾಗಿ, ಜನಸಂಖ್ಯೆ ನಿಯಂತ್ರಣಕ್ಕಾಗಿ ಕೈಗೊಳ್ಳುವ ಕ್ರಮಗಳು ತಿರುಗುಬಾಣವಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

 

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.